Homeಕರ್ನಾಟಕಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

ಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಲು ಹಕ್ಕೊತ್ತಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸಚಿವರಿಗೆ ಕಡಿವಾಣ ಹಾಕುವಂತೆ 15 ಕಾಂಗ್ರೆಸ್ ಶಾಸಕರು ಮತ್ತು ಮಾಜಿ ಸಚಿವರ ಗುಂಪು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಅವರ ಹೆಂಡತಿಗೆ ಭೂ ಮಂಜೂರಾತಿ ಮಾಡಿರುವ ಪ್ರಕರಣದ ಕುರಿತು ತನಿಖೆಯ ಸಾಧ್ಯತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವವು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಸಲಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಹಲವಾರು ಕಾಂಗ್ರೆಸ್ ಸಚಿವರು ತಮ್ಮನ್ನು ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಮಂಜೂರಾತಿ ವಿವಾದವನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸೃಷ್ಟಿಸಿದೆ. ಆದರೆ, ಹಿರಿಯ ಸಚಿವರು ಸೇರಿದಂತೆ ಆರಕ್ಕೂ ಹೆಚ್ಚು ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಸೆಣಸುವ ಬದಲು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಚಲಾಯಿಸುತ್ತಿದ್ದಾರೆ.” ಎಂದು 15 ನಾಯಕರ ಗುಂಪು ಬರೆದ ಪತ್ರ ರಾಹುಲ್ ಗಾಂಧಿ ಅವರಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದೆ.

“ಕಾಂಗ್ರೆಸ್ ನಾಯಕತ್ವವು ಈ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಬೇಕು ಮತ್ತು ಅವರಿಗೆ ಎಚ್ಚರಿಕೆ ನೀಡಬೇಕು. ಜೊತೆಗೆ ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಭವಿಷ್ಯದಲ್ಲಿ ಇಂತಹ ಹಾನಿಕಾರಕ ಹೇಳಿಕೆಗಳನ್ನು ನೀಡದಂತೆ ನಿರ್ದೇಶಿಸಬೇಕು” ಎಂದು ಪತ್ರವು ಆಗ್ರಹಿಸಿದೆ.

ಮಾಜಿ ಸಚಿವರಾದ ಬಿ ಎಲ್ ಶಂಕರ್, ಹೆಚ್ ಎಂ ರೇವಣ್ಣ, ಮಾಜಿ ಸಂಸದರಾದ ಎಲ್ ಹನುಮಂತಯ್ಯ, ವಿ ಎಸ್ ಉಗ್ರಪ್ಪ ಸೇರಿದಂತೆ ಸಿದ್ದರಾಮಯ್ಯ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅನೇಕ ನಾಯಕರು ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

“ಸಿದ್ದರಾಮಯ್ಯನವರನ್ನು ಬದಲಿಸುವ ಬಗ್ಗೆ ಮಾತನಾಡುತ್ತಿರುವ ಮುಂಚೂಣಿಯಲ್ಲಿರುವ ನಾಯಕರಿಂದಾಗಿ ನಮ್ಮ ಅನೇಕ ನಾಯಕರು ಮತ್ತು ಕಾರ್ಯಕರ್ತರು ಹತಾಶರಾಗಿದ್ದಾರೆ. ಅವರು ಸರ್ಕಾರ ಮತ್ತು ಪಕ್ಷದಲ್ಲಿ ತಮ್ಮ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ನಮ್ಮ ನಾಯಕರ ಒಳಜಗಳ ಮತ್ತು ಅಜಾಗರೂಕ ಹೇಳಿಕೆಗಳಿಂದಾಗಿ ಕರ್ನಾಟಕದ ಜನರು ನಿಧಾನವಾಗಿ ನಮ್ಮ ಪಕ್ಷ ಮತ್ತು ಸರ್ಕಾರದ ಮೇಲಿನ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಆಡಳಿತಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಅಡಚಣೆಯಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಬರೆದ ಎರಡನೇ ಪತ್ರ ಇದಾಗಿದೆ. ಈ ಹಿಂದೆ ಎಂಎಲ್ಸಿಗಳಾದ ದಿನೇಶ್ ಗೂಳಿಗೌಡ ಮತ್ತು ಮಂಜುನಾಥ್ ಭಂಡಾರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಧ್ಯಸ್ಥಿಕೆಗೆ ಪತ್ರ ಬರೆದಿದ್ದರು.

2021 ರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ 14 ವಸತಿ ನಿವೇಶನಗಳನ್ನು ಹಂಚಿರುವ ಕುರಿತು ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಸ್ಟ್ 16 ರಂದು ಅನುಮತಿ ನೀಡಿದ ನಂತರ ಕಾಂಗ್ರೆಸ್‌ನಲ್ಲಿ ಅಶಾಂತಿ ಉಂಟಾಗಿದೆ.

ಇದನ್ನೂಓದಿ: ಅರುಣಾಚಲ ಪ್ರದೇಶ: ಅಂಜಾವ್‌ನಲ್ಲಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದ ಚೀನಾ ಸೈನಿಕರು

ರಾಜ್ಯಪಾಲರ ಮಂಜೂರಾತಿ ಆದೇಶವನ್ನು ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ, ಸಿಎಂ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಬೆಂಬಲವನ್ನು ಸೂಚಿಸಿದ್ದು, ಹಿಂದುಳಿದ ವರ್ಗವನ್ನು ಹೊರಹಾಕಲು ಪ್ರತಿಪಕ್ಷಗಳು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...