Homeಕರ್ನಾಟಕಹಿರಿಯ ಸಾಹಿತಿ, ಚಿಂತಕ ಪ್ರೊ. ಬಿ. ಗಂಗಾಧರ ಮೂರ್ತಿ ನಿಧನ

ಹಿರಿಯ ಸಾಹಿತಿ, ಚಿಂತಕ ಪ್ರೊ. ಬಿ. ಗಂಗಾಧರ ಮೂರ್ತಿ ನಿಧನ

- Advertisement -
- Advertisement -

ಗೌರಿಬಿದನೂರು ನ್ಯಾಷನಲ್‌‌ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಹಿರಿಯ ಸಾಹಿತಿ ಪ್ರೊಫೆಸರ್‌‌‌ ಬಿ. ಗಂಗಾಧರ ಮೂರ್ತಿ ಅವರು ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದ್ದಾರೆ. ಕಳೆದ ಆರು ತಿಂಗಳಿಂದ ಅವರು ಅನಾರೋಗ್ಯದಿಂದ ಇದ್ದರು ಎಂದು ತಿಳಿದು ಬಂದಿದೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ದಲಿತ ಚಳವಳಿಯ ಆರಂಭದಿಂದಲೂ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಅವರು ದಲಿತ ಸಂಘರ್ಷ ಸಮಿತಿಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಗೌರಿಬಿದನೂರಿನ ವಿಧುರಾಶ್ವತ್ಥದ ಸ್ವಾತಂತ್ರ ಹೋರಾಟದ ಸ್ಮಾರಕವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿಚಾರವಾದಿ ಚಳವಳಿಗಳಲ್ಲಿ ಕೂಡಾ ಅವರು ಮುಂಚೂಣಿಯಲ್ಲಿ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂಲತಃ ಹೊಳೆನರಸೀಪುರದವರಾದ ಗಂಗಾದರ ಮೂರ್ತಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು. ಸುಮಾರು 30 ವರ್ಷಗಳ ಕಾಲ ಬೊಧನಾ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು.

ಇದನ್ನೂ ಓದಿ: ಸ್ವಾತಂತ್ರ್ಯ ಸಂಗ್ರಾಮದ ಚಿತ್ರಕಥನ: ದಕ್ಷಿಣದ ಜಲಿಯನ್ ವಾಲಾಬಾಗ್ ವಿದುರಾಶ್ವತ್ಥ ಉಳಿಸೋಣ

ಆನಂದ್ ತೇಲ್ತುಂಬ್ಡೆ ಅವರ ‘ದಲಿತರು ಮತ್ತು ಹಿಂದುತ್ವ’, ‘ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ’, ‘ಭಾರತದ ಬೌದ್ಧಿಕ ದಾರಿದ್ರ್ಯನಾಗಸಂದ್ರ ಭೂ ಆಕ್ರಮಣ ಚಳುವಳಿ’, ‘ಗೋಹತ್ಯೆ ನಿಷೇಧದ ಸುತ್ತಲಿನ ರಾಜಕೀಯ’, ‘ಅಂಬೇಡ್ಕರ್‌ ಮತ್ತು ಮುಸ್ಲಿಮರು: ಸುಳ್ಳುಗಳು ಮತ್ತು ಸತ್ಯಾಂಶಗಳು’, ‘ಭಾರತೀಯ ಸಂಸ್ಕೃತಿಯ ಜಾತಿ ಲಕ್ಷಣ’, ‘ಭಾರತದ ಬೌದ್ಧಿಕ ದಾರಿದ್ರ್ಯ’, ‘ಗೀತೆ ಒಳಗಿನ ಸತ್ಯ ಏನು?’, ‘ಮೌಢ್ಯ ವಿರೊಧಿ ಹೋರಾಟಗಾರ ಎಚ್ಚೆನ್’, ‘ಪದ್ಮಭೂಷಣ ಡಾ. ಎಚ್. ನರಸಿಂಹಯ್ಯನವರು (ಸಂಕ್ಷಿಪ್ತ ಜೀವನ ಚಿತ್ರಣ)’, ‘ಕತ್ತೆ ಪುರಾಣ’, ‘ಸೂಫಿ ಕಥಾಲೋಕ’, ‘ಅನುಭವದ ಆರು ಕಥನಗಳು’ ಇವು ಅವರು ಪ್ರಮುಖ ಕೃತಿಗಳಾಗಿವೆ.

ಅವರು ಬರೆದ ವಿಮರ್ಶಾ ಲೇಖನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಅನುವಾದ ಕ್ಷೇತ್ರದ ಸೇವೆಗಾಗಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿದೆ. ಅವರು ಸೂಫಿ ಕಲ್ಚರ್ ಸಂಪಾದಕ  ಸಮಿತಿಯಲ್ಲಿ ಪ್ರವಾಚಕರಾಗಿದ್ದರು. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು.

ಇದನ್ನೂ ಓದಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಿಜಿಎಮ್ ಎಂದೇ ಹೆಸರಾಗಿದ್ದ ಪ್ರೊ.ಬಿ.ಗಂಗಾಧರಮೂರ್ತಿಯವರು ಪತ್ನಿ, ಮೂವರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ. ಮೃತರ ದೇಹವನ್ನು ಗೌರಿಬಿದನೂರಿಗೆ ಕೊಂಡೊಯ್ದು ಅಲ್ಲಿ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಅವರ ತಮ್ಮ ದೇಹವನ್ನು ದಾನ ಮಾಡಿರುವುದರಿಂದ ಭಾನುವಾರ ಮಧ್ಯಾಹ್ನ 3 ಗಂಟೆಗೆ ಅಲ್ಲಿಂದ ಮತ್ತೆ ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆ ತರಲಾಗುತ್ತದೆ.

ಗಂಗಾಧರ ಮೂರ್ತಿ ಅವರ ನಿಧನಕ್ಕೆ ನಾಡಿನ ಸಾಹಿತಿಗಳು ಸೇರಿದಂತೆ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ. ಹಿರಿಯ ಚಿಂತಕ, ಹೋರಾಟಗಾರ ಸನತ್ ಕುಮಾರ್‌ ಬೆಳಗಲಿ ಅವರು, “ನಾಡಿನ ಹಿರಿಯ ಚಿಂತಕ, ಲೇಖಕ ಗಂಗಾಧರ ಮೂರ್ತಿ ಅವರು ಶನಿವಾರ ನಮ್ಮನ್ನು ಅಗಲಿದ್ದಾರೆ. ಗೌರಿಬಿದನೂರಿನಲ್ಲಿ ನ್ಯಾಷನಲ್ ಕಾಲೇಜ್ ಉಪನ್ಯಾಸಕರಾಗಿ ಸೇವೆ ಆರಂಭಿಸಿ ಅಲ್ಲೇ ನೆಲೆಸಿದ್ದ ಮೂರ್ತಿ ಹಲವಾರು ಜನ ಹೋರಾಟ ಗಳ ಸ್ಫೂರ್ತಿಯ ಸೆಲೆಯಾಗಿದ್ದವರು. ವಿಧುರಾಶ್ವತ್ಥದ ಸ್ವಾತಂತ್ರ ಹೋರಾಟದ ಸ್ಮಾರಕದ ಶಿಲ್ಪಿ ಮೂರ್ತಿ. ಅವರ ಅಗಲಿಕೆ ಅವಿಭಜಿತ ಕೋಲಾರ ಜಿಲ್ಲೆಗೆ ಮಾತ್ರವಲ್ಲದೆ, ಕರ್ನಾಟಕಕ್ಕೆ ಬಹುದೊಡ್ಡ ನಷ್ಟ. ನನ್ನ ಅತ್ಯಂತ ಆತ್ಮೀಯ ಹಿರಿಯ ಒಡನಾಡಿಯನ್ನು ಕಳೆದುಕೊಂಡೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...