Homeಕರ್ನಾಟಕಹಿರಿಯ ಸಾಹಿತಿ, ಚಿಂತಕ ಪ್ರೊ. ಬಿ. ಗಂಗಾಧರ ಮೂರ್ತಿ ನಿಧನ

ಹಿರಿಯ ಸಾಹಿತಿ, ಚಿಂತಕ ಪ್ರೊ. ಬಿ. ಗಂಗಾಧರ ಮೂರ್ತಿ ನಿಧನ

- Advertisement -
- Advertisement -

ಗೌರಿಬಿದನೂರು ನ್ಯಾಷನಲ್‌‌ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಹಿರಿಯ ಸಾಹಿತಿ ಪ್ರೊಫೆಸರ್‌‌‌ ಬಿ. ಗಂಗಾಧರ ಮೂರ್ತಿ ಅವರು ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದ್ದಾರೆ. ಕಳೆದ ಆರು ತಿಂಗಳಿಂದ ಅವರು ಅನಾರೋಗ್ಯದಿಂದ ಇದ್ದರು ಎಂದು ತಿಳಿದು ಬಂದಿದೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ದಲಿತ ಚಳವಳಿಯ ಆರಂಭದಿಂದಲೂ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಅವರು ದಲಿತ ಸಂಘರ್ಷ ಸಮಿತಿಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಗೌರಿಬಿದನೂರಿನ ವಿಧುರಾಶ್ವತ್ಥದ ಸ್ವಾತಂತ್ರ ಹೋರಾಟದ ಸ್ಮಾರಕವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿಚಾರವಾದಿ ಚಳವಳಿಗಳಲ್ಲಿ ಕೂಡಾ ಅವರು ಮುಂಚೂಣಿಯಲ್ಲಿ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂಲತಃ ಹೊಳೆನರಸೀಪುರದವರಾದ ಗಂಗಾದರ ಮೂರ್ತಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು. ಸುಮಾರು 30 ವರ್ಷಗಳ ಕಾಲ ಬೊಧನಾ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು.

ಇದನ್ನೂ ಓದಿ: ಸ್ವಾತಂತ್ರ್ಯ ಸಂಗ್ರಾಮದ ಚಿತ್ರಕಥನ: ದಕ್ಷಿಣದ ಜಲಿಯನ್ ವಾಲಾಬಾಗ್ ವಿದುರಾಶ್ವತ್ಥ ಉಳಿಸೋಣ

ಆನಂದ್ ತೇಲ್ತುಂಬ್ಡೆ ಅವರ ‘ದಲಿತರು ಮತ್ತು ಹಿಂದುತ್ವ’, ‘ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ’, ‘ಭಾರತದ ಬೌದ್ಧಿಕ ದಾರಿದ್ರ್ಯನಾಗಸಂದ್ರ ಭೂ ಆಕ್ರಮಣ ಚಳುವಳಿ’, ‘ಗೋಹತ್ಯೆ ನಿಷೇಧದ ಸುತ್ತಲಿನ ರಾಜಕೀಯ’, ‘ಅಂಬೇಡ್ಕರ್‌ ಮತ್ತು ಮುಸ್ಲಿಮರು: ಸುಳ್ಳುಗಳು ಮತ್ತು ಸತ್ಯಾಂಶಗಳು’, ‘ಭಾರತೀಯ ಸಂಸ್ಕೃತಿಯ ಜಾತಿ ಲಕ್ಷಣ’, ‘ಭಾರತದ ಬೌದ್ಧಿಕ ದಾರಿದ್ರ್ಯ’, ‘ಗೀತೆ ಒಳಗಿನ ಸತ್ಯ ಏನು?’, ‘ಮೌಢ್ಯ ವಿರೊಧಿ ಹೋರಾಟಗಾರ ಎಚ್ಚೆನ್’, ‘ಪದ್ಮಭೂಷಣ ಡಾ. ಎಚ್. ನರಸಿಂಹಯ್ಯನವರು (ಸಂಕ್ಷಿಪ್ತ ಜೀವನ ಚಿತ್ರಣ)’, ‘ಕತ್ತೆ ಪುರಾಣ’, ‘ಸೂಫಿ ಕಥಾಲೋಕ’, ‘ಅನುಭವದ ಆರು ಕಥನಗಳು’ ಇವು ಅವರು ಪ್ರಮುಖ ಕೃತಿಗಳಾಗಿವೆ.

ಅವರು ಬರೆದ ವಿಮರ್ಶಾ ಲೇಖನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಅನುವಾದ ಕ್ಷೇತ್ರದ ಸೇವೆಗಾಗಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿದೆ. ಅವರು ಸೂಫಿ ಕಲ್ಚರ್ ಸಂಪಾದಕ  ಸಮಿತಿಯಲ್ಲಿ ಪ್ರವಾಚಕರಾಗಿದ್ದರು. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು.

ಇದನ್ನೂ ಓದಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಿಜಿಎಮ್ ಎಂದೇ ಹೆಸರಾಗಿದ್ದ ಪ್ರೊ.ಬಿ.ಗಂಗಾಧರಮೂರ್ತಿಯವರು ಪತ್ನಿ, ಮೂವರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ. ಮೃತರ ದೇಹವನ್ನು ಗೌರಿಬಿದನೂರಿಗೆ ಕೊಂಡೊಯ್ದು ಅಲ್ಲಿ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಅವರ ತಮ್ಮ ದೇಹವನ್ನು ದಾನ ಮಾಡಿರುವುದರಿಂದ ಭಾನುವಾರ ಮಧ್ಯಾಹ್ನ 3 ಗಂಟೆಗೆ ಅಲ್ಲಿಂದ ಮತ್ತೆ ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆ ತರಲಾಗುತ್ತದೆ.

ಗಂಗಾಧರ ಮೂರ್ತಿ ಅವರ ನಿಧನಕ್ಕೆ ನಾಡಿನ ಸಾಹಿತಿಗಳು ಸೇರಿದಂತೆ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ. ಹಿರಿಯ ಚಿಂತಕ, ಹೋರಾಟಗಾರ ಸನತ್ ಕುಮಾರ್‌ ಬೆಳಗಲಿ ಅವರು, “ನಾಡಿನ ಹಿರಿಯ ಚಿಂತಕ, ಲೇಖಕ ಗಂಗಾಧರ ಮೂರ್ತಿ ಅವರು ಶನಿವಾರ ನಮ್ಮನ್ನು ಅಗಲಿದ್ದಾರೆ. ಗೌರಿಬಿದನೂರಿನಲ್ಲಿ ನ್ಯಾಷನಲ್ ಕಾಲೇಜ್ ಉಪನ್ಯಾಸಕರಾಗಿ ಸೇವೆ ಆರಂಭಿಸಿ ಅಲ್ಲೇ ನೆಲೆಸಿದ್ದ ಮೂರ್ತಿ ಹಲವಾರು ಜನ ಹೋರಾಟ ಗಳ ಸ್ಫೂರ್ತಿಯ ಸೆಲೆಯಾಗಿದ್ದವರು. ವಿಧುರಾಶ್ವತ್ಥದ ಸ್ವಾತಂತ್ರ ಹೋರಾಟದ ಸ್ಮಾರಕದ ಶಿಲ್ಪಿ ಮೂರ್ತಿ. ಅವರ ಅಗಲಿಕೆ ಅವಿಭಜಿತ ಕೋಲಾರ ಜಿಲ್ಲೆಗೆ ಮಾತ್ರವಲ್ಲದೆ, ಕರ್ನಾಟಕಕ್ಕೆ ಬಹುದೊಡ್ಡ ನಷ್ಟ. ನನ್ನ ಅತ್ಯಂತ ಆತ್ಮೀಯ ಹಿರಿಯ ಒಡನಾಡಿಯನ್ನು ಕಳೆದುಕೊಂಡೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....