Homeಮುಖಪುಟಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

ಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

- Advertisement -
- Advertisement -

ಕನ್ನಡ ಸಾಂಸ್ಕೃತಿಕ ಕ್ಷೇತ್ರದ ಹಿರಿಯ ವಿದ್ವಾಂಸ, ಅಂತರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಪ್ರೊ. ಷಡಕ್ಷರಪ್ಪ ಶೆಟ್ಟರ್ (1935-2020) ರವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಒಂದು ವಾರದಿಂದಲೂ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕ ಬಡವಾಯಿತು, ತುಂಬಲಾರದ ನಷ್ಟ ಎಂದು ಬಹಳಷ್ಟು ಜನ ಸಂತಾಪ ಸೂಚಿಸಿದ್ದಾರೆ.

ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ಶಾಸನ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಸಾಹಿತ್ಯದ ಕುರಿತು ಪ್ರೊ.ಶೆಟ್ಟರ್ ಅವರು ಬರೆದ ಸುಮಾರು 30ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳು ಬಹಳಷ್ಟು ಜನರನ್ನು ಪ್ರಭಾವಿಸಿದೆ. ಇಂದಿಗೂ ಸಾವಿರಾರು ಜನರು ಅವರನ್ನು ತಮ್ಮ ಮಾರ್ಗದರ್ಶಕರು, ಗುರುಗಳು ಎಂದೇ ಪರಿಗಣಿಸುತ್ತಿದ್ದಾರೆ.

ಸ್ವಲ್ಪ ತಡವಾಗಿ ಕನ್ನಡದಲ್ಲಿ ಬರೆಯಲು ಆರಂಭಿಸಿದ ಅವರು ತಮ್ಮ ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ, ಹಳಗನ್ನಡ- ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ , ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ, ಪ್ರಾಕೃತ ಜಗದ್ವಲಯ ಮೊದಲಾದ ಕೃತಿಗಳ ಮೂಲಕ ಕಳೆಗುಂದುತ್ತಿದ್ದ ಕನ್ನಡ ಸಂಶೋಧನೆಗೆ ನವ ಚೈತನ್ಯ ನೀಡಿದರು. ಕಳೆದ ನಾಲ್ಕಾರು ವರ್ಷಗಳಿಂದ ಅವರು ತೊಡಗಿಸಿಕೊಂಡಿದ್ದ ಶಾಸನಾಧರಿತ ಯೋಜನೆಗಳನ್ನು ಈಗ ಯಾರು ಮುಗಿಸಿಕೊಡುವರೋ ತಿಳಿದಿಲ್ಲ ಎಂದು ದೆಹಲಿಯ ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಪುರುಷೋತ್ತಮ ಬಿಳಿಮನೆಯವರು ಸಂತಾಪ ಸೂಚಿಸಿದ್ದಾರೆ.

ಷ.ಶೆಟ್ಟರ್ ಅಗಲಿಕೆ ತೋರಿಕೆಗಲ್ಲದೆ ನಿಜಾರ್ಥದಲ್ಲಿ ತುಂಬಲಾರದ ನಷ್ಟ. ಶಾಸನಾಧ್ಯಯನ ಜನಸಾಮಾನ್ಯರಿಗಲ್ಲ ಎನ್ನುವ ವಾತಾವರಣ ಇರುವಾಗ ಶಾಸನಗಳಲ್ಲಿಯೇ ಜನಸಾಮಾನ್ಯರ ಬದುಕನ್ನು ಹುಡುಕಲೆತ್ನಿಸಿದ ದೈತ್ಯ ಪ್ರತಿಭೆ. ಅವರ ಕೃತಿಗಳನ್ನು ಓದುತ್ತಿದ್ದರೆ ಅವರ ಕಠಿಣ ಶ್ರಮ ಪಾಂಡಿತ್ಯ ಆಳದ ಹುಡುಕಾಟದ ಹಂಬಲಗಳು ಉಸಿರಿನಂತೆ ತಾಕುತ್ತವೆ ಎಂದು ಅರುಣ್‌ ಜೋಳದ ಕೂಡ್ಲಿಗಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಸ್ನಾತಕೋತ್ತರ ಹಂತದಲ್ಲಿ ನನಗೆ ಇತಿಹಾಸ ಬೋಧಿಸಿದ ಗುರುಗಳು, 1986 ರಿಂದ 1995 ರವರೆಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದಲ್ಲಿ ಹಿರಿಯ ಸಹೋದ್ಯೋಗಿಯಾಗಿ ನನಗೆ ಮಾರ್ಗದರ್ಶನ ಮಾಡಿದ ಹಿತೈಷಿಗಳು, ಬಹುಶ್ರುತ ವಿದ್ವಾಂಸರು ಮತ್ತು ಖ್ಯಾತ ಇತಿಹಾಸಕಾರರಾದ ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಇನ್ನಿಲ್ಲ. ಅವರ ಅಗಲಿಕೆಯ ಶೂನ್ಯವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರಿಗೆ ಸಾಧ್ಯವಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ ಎಂದು ಅಶೋಕ್‌ ಶೆಟ್ಟರ್‌ರವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇವರಿಗೆ ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...