Homeಮುಖಪುಟಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

ಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

- Advertisement -
- Advertisement -

ಕನ್ನಡ ಸಾಂಸ್ಕೃತಿಕ ಕ್ಷೇತ್ರದ ಹಿರಿಯ ವಿದ್ವಾಂಸ, ಅಂತರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಪ್ರೊ. ಷಡಕ್ಷರಪ್ಪ ಶೆಟ್ಟರ್ (1935-2020) ರವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಒಂದು ವಾರದಿಂದಲೂ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕ ಬಡವಾಯಿತು, ತುಂಬಲಾರದ ನಷ್ಟ ಎಂದು ಬಹಳಷ್ಟು ಜನ ಸಂತಾಪ ಸೂಚಿಸಿದ್ದಾರೆ.

ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ಶಾಸನ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಸಾಹಿತ್ಯದ ಕುರಿತು ಪ್ರೊ.ಶೆಟ್ಟರ್ ಅವರು ಬರೆದ ಸುಮಾರು 30ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳು ಬಹಳಷ್ಟು ಜನರನ್ನು ಪ್ರಭಾವಿಸಿದೆ. ಇಂದಿಗೂ ಸಾವಿರಾರು ಜನರು ಅವರನ್ನು ತಮ್ಮ ಮಾರ್ಗದರ್ಶಕರು, ಗುರುಗಳು ಎಂದೇ ಪರಿಗಣಿಸುತ್ತಿದ್ದಾರೆ.

ಸ್ವಲ್ಪ ತಡವಾಗಿ ಕನ್ನಡದಲ್ಲಿ ಬರೆಯಲು ಆರಂಭಿಸಿದ ಅವರು ತಮ್ಮ ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ, ಹಳಗನ್ನಡ- ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ , ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ, ಪ್ರಾಕೃತ ಜಗದ್ವಲಯ ಮೊದಲಾದ ಕೃತಿಗಳ ಮೂಲಕ ಕಳೆಗುಂದುತ್ತಿದ್ದ ಕನ್ನಡ ಸಂಶೋಧನೆಗೆ ನವ ಚೈತನ್ಯ ನೀಡಿದರು. ಕಳೆದ ನಾಲ್ಕಾರು ವರ್ಷಗಳಿಂದ ಅವರು ತೊಡಗಿಸಿಕೊಂಡಿದ್ದ ಶಾಸನಾಧರಿತ ಯೋಜನೆಗಳನ್ನು ಈಗ ಯಾರು ಮುಗಿಸಿಕೊಡುವರೋ ತಿಳಿದಿಲ್ಲ ಎಂದು ದೆಹಲಿಯ ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಪುರುಷೋತ್ತಮ ಬಿಳಿಮನೆಯವರು ಸಂತಾಪ ಸೂಚಿಸಿದ್ದಾರೆ.

ಷ.ಶೆಟ್ಟರ್ ಅಗಲಿಕೆ ತೋರಿಕೆಗಲ್ಲದೆ ನಿಜಾರ್ಥದಲ್ಲಿ ತುಂಬಲಾರದ ನಷ್ಟ. ಶಾಸನಾಧ್ಯಯನ ಜನಸಾಮಾನ್ಯರಿಗಲ್ಲ ಎನ್ನುವ ವಾತಾವರಣ ಇರುವಾಗ ಶಾಸನಗಳಲ್ಲಿಯೇ ಜನಸಾಮಾನ್ಯರ ಬದುಕನ್ನು ಹುಡುಕಲೆತ್ನಿಸಿದ ದೈತ್ಯ ಪ್ರತಿಭೆ. ಅವರ ಕೃತಿಗಳನ್ನು ಓದುತ್ತಿದ್ದರೆ ಅವರ ಕಠಿಣ ಶ್ರಮ ಪಾಂಡಿತ್ಯ ಆಳದ ಹುಡುಕಾಟದ ಹಂಬಲಗಳು ಉಸಿರಿನಂತೆ ತಾಕುತ್ತವೆ ಎಂದು ಅರುಣ್‌ ಜೋಳದ ಕೂಡ್ಲಿಗಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಸ್ನಾತಕೋತ್ತರ ಹಂತದಲ್ಲಿ ನನಗೆ ಇತಿಹಾಸ ಬೋಧಿಸಿದ ಗುರುಗಳು, 1986 ರಿಂದ 1995 ರವರೆಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದಲ್ಲಿ ಹಿರಿಯ ಸಹೋದ್ಯೋಗಿಯಾಗಿ ನನಗೆ ಮಾರ್ಗದರ್ಶನ ಮಾಡಿದ ಹಿತೈಷಿಗಳು, ಬಹುಶ್ರುತ ವಿದ್ವಾಂಸರು ಮತ್ತು ಖ್ಯಾತ ಇತಿಹಾಸಕಾರರಾದ ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಇನ್ನಿಲ್ಲ. ಅವರ ಅಗಲಿಕೆಯ ಶೂನ್ಯವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರಿಗೆ ಸಾಧ್ಯವಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ ಎಂದು ಅಶೋಕ್‌ ಶೆಟ್ಟರ್‌ರವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇವರಿಗೆ ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...