Homeಮುಖಪುಟಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

ಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

- Advertisement -
- Advertisement -

ಕನ್ನಡ ಸಾಂಸ್ಕೃತಿಕ ಕ್ಷೇತ್ರದ ಹಿರಿಯ ವಿದ್ವಾಂಸ, ಅಂತರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಪ್ರೊ. ಷಡಕ್ಷರಪ್ಪ ಶೆಟ್ಟರ್ (1935-2020) ರವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಒಂದು ವಾರದಿಂದಲೂ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕ ಬಡವಾಯಿತು, ತುಂಬಲಾರದ ನಷ್ಟ ಎಂದು ಬಹಳಷ್ಟು ಜನ ಸಂತಾಪ ಸೂಚಿಸಿದ್ದಾರೆ.

ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ಶಾಸನ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಸಾಹಿತ್ಯದ ಕುರಿತು ಪ್ರೊ.ಶೆಟ್ಟರ್ ಅವರು ಬರೆದ ಸುಮಾರು 30ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳು ಬಹಳಷ್ಟು ಜನರನ್ನು ಪ್ರಭಾವಿಸಿದೆ. ಇಂದಿಗೂ ಸಾವಿರಾರು ಜನರು ಅವರನ್ನು ತಮ್ಮ ಮಾರ್ಗದರ್ಶಕರು, ಗುರುಗಳು ಎಂದೇ ಪರಿಗಣಿಸುತ್ತಿದ್ದಾರೆ.

ಸ್ವಲ್ಪ ತಡವಾಗಿ ಕನ್ನಡದಲ್ಲಿ ಬರೆಯಲು ಆರಂಭಿಸಿದ ಅವರು ತಮ್ಮ ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ, ಹಳಗನ್ನಡ- ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ , ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ, ಪ್ರಾಕೃತ ಜಗದ್ವಲಯ ಮೊದಲಾದ ಕೃತಿಗಳ ಮೂಲಕ ಕಳೆಗುಂದುತ್ತಿದ್ದ ಕನ್ನಡ ಸಂಶೋಧನೆಗೆ ನವ ಚೈತನ್ಯ ನೀಡಿದರು. ಕಳೆದ ನಾಲ್ಕಾರು ವರ್ಷಗಳಿಂದ ಅವರು ತೊಡಗಿಸಿಕೊಂಡಿದ್ದ ಶಾಸನಾಧರಿತ ಯೋಜನೆಗಳನ್ನು ಈಗ ಯಾರು ಮುಗಿಸಿಕೊಡುವರೋ ತಿಳಿದಿಲ್ಲ ಎಂದು ದೆಹಲಿಯ ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಪುರುಷೋತ್ತಮ ಬಿಳಿಮನೆಯವರು ಸಂತಾಪ ಸೂಚಿಸಿದ್ದಾರೆ.

ಷ.ಶೆಟ್ಟರ್ ಅಗಲಿಕೆ ತೋರಿಕೆಗಲ್ಲದೆ ನಿಜಾರ್ಥದಲ್ಲಿ ತುಂಬಲಾರದ ನಷ್ಟ. ಶಾಸನಾಧ್ಯಯನ ಜನಸಾಮಾನ್ಯರಿಗಲ್ಲ ಎನ್ನುವ ವಾತಾವರಣ ಇರುವಾಗ ಶಾಸನಗಳಲ್ಲಿಯೇ ಜನಸಾಮಾನ್ಯರ ಬದುಕನ್ನು ಹುಡುಕಲೆತ್ನಿಸಿದ ದೈತ್ಯ ಪ್ರತಿಭೆ. ಅವರ ಕೃತಿಗಳನ್ನು ಓದುತ್ತಿದ್ದರೆ ಅವರ ಕಠಿಣ ಶ್ರಮ ಪಾಂಡಿತ್ಯ ಆಳದ ಹುಡುಕಾಟದ ಹಂಬಲಗಳು ಉಸಿರಿನಂತೆ ತಾಕುತ್ತವೆ ಎಂದು ಅರುಣ್‌ ಜೋಳದ ಕೂಡ್ಲಿಗಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಸ್ನಾತಕೋತ್ತರ ಹಂತದಲ್ಲಿ ನನಗೆ ಇತಿಹಾಸ ಬೋಧಿಸಿದ ಗುರುಗಳು, 1986 ರಿಂದ 1995 ರವರೆಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದಲ್ಲಿ ಹಿರಿಯ ಸಹೋದ್ಯೋಗಿಯಾಗಿ ನನಗೆ ಮಾರ್ಗದರ್ಶನ ಮಾಡಿದ ಹಿತೈಷಿಗಳು, ಬಹುಶ್ರುತ ವಿದ್ವಾಂಸರು ಮತ್ತು ಖ್ಯಾತ ಇತಿಹಾಸಕಾರರಾದ ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಇನ್ನಿಲ್ಲ. ಅವರ ಅಗಲಿಕೆಯ ಶೂನ್ಯವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರಿಗೆ ಸಾಧ್ಯವಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ ಎಂದು ಅಶೋಕ್‌ ಶೆಟ್ಟರ್‌ರವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇವರಿಗೆ ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...