Homeಮುಖಪುಟಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

ಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

- Advertisement -
- Advertisement -

ಕನ್ನಡ ಸಾಂಸ್ಕೃತಿಕ ಕ್ಷೇತ್ರದ ಹಿರಿಯ ವಿದ್ವಾಂಸ, ಅಂತರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಪ್ರೊ. ಷಡಕ್ಷರಪ್ಪ ಶೆಟ್ಟರ್ (1935-2020) ರವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಒಂದು ವಾರದಿಂದಲೂ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕ ಬಡವಾಯಿತು, ತುಂಬಲಾರದ ನಷ್ಟ ಎಂದು ಬಹಳಷ್ಟು ಜನ ಸಂತಾಪ ಸೂಚಿಸಿದ್ದಾರೆ.

ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ಶಾಸನ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಸಾಹಿತ್ಯದ ಕುರಿತು ಪ್ರೊ.ಶೆಟ್ಟರ್ ಅವರು ಬರೆದ ಸುಮಾರು 30ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳು ಬಹಳಷ್ಟು ಜನರನ್ನು ಪ್ರಭಾವಿಸಿದೆ. ಇಂದಿಗೂ ಸಾವಿರಾರು ಜನರು ಅವರನ್ನು ತಮ್ಮ ಮಾರ್ಗದರ್ಶಕರು, ಗುರುಗಳು ಎಂದೇ ಪರಿಗಣಿಸುತ್ತಿದ್ದಾರೆ.

ಸ್ವಲ್ಪ ತಡವಾಗಿ ಕನ್ನಡದಲ್ಲಿ ಬರೆಯಲು ಆರಂಭಿಸಿದ ಅವರು ತಮ್ಮ ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ, ಹಳಗನ್ನಡ- ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ , ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ, ಪ್ರಾಕೃತ ಜಗದ್ವಲಯ ಮೊದಲಾದ ಕೃತಿಗಳ ಮೂಲಕ ಕಳೆಗುಂದುತ್ತಿದ್ದ ಕನ್ನಡ ಸಂಶೋಧನೆಗೆ ನವ ಚೈತನ್ಯ ನೀಡಿದರು. ಕಳೆದ ನಾಲ್ಕಾರು ವರ್ಷಗಳಿಂದ ಅವರು ತೊಡಗಿಸಿಕೊಂಡಿದ್ದ ಶಾಸನಾಧರಿತ ಯೋಜನೆಗಳನ್ನು ಈಗ ಯಾರು ಮುಗಿಸಿಕೊಡುವರೋ ತಿಳಿದಿಲ್ಲ ಎಂದು ದೆಹಲಿಯ ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಪುರುಷೋತ್ತಮ ಬಿಳಿಮನೆಯವರು ಸಂತಾಪ ಸೂಚಿಸಿದ್ದಾರೆ.

ಷ.ಶೆಟ್ಟರ್ ಅಗಲಿಕೆ ತೋರಿಕೆಗಲ್ಲದೆ ನಿಜಾರ್ಥದಲ್ಲಿ ತುಂಬಲಾರದ ನಷ್ಟ. ಶಾಸನಾಧ್ಯಯನ ಜನಸಾಮಾನ್ಯರಿಗಲ್ಲ ಎನ್ನುವ ವಾತಾವರಣ ಇರುವಾಗ ಶಾಸನಗಳಲ್ಲಿಯೇ ಜನಸಾಮಾನ್ಯರ ಬದುಕನ್ನು ಹುಡುಕಲೆತ್ನಿಸಿದ ದೈತ್ಯ ಪ್ರತಿಭೆ. ಅವರ ಕೃತಿಗಳನ್ನು ಓದುತ್ತಿದ್ದರೆ ಅವರ ಕಠಿಣ ಶ್ರಮ ಪಾಂಡಿತ್ಯ ಆಳದ ಹುಡುಕಾಟದ ಹಂಬಲಗಳು ಉಸಿರಿನಂತೆ ತಾಕುತ್ತವೆ ಎಂದು ಅರುಣ್‌ ಜೋಳದ ಕೂಡ್ಲಿಗಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಸ್ನಾತಕೋತ್ತರ ಹಂತದಲ್ಲಿ ನನಗೆ ಇತಿಹಾಸ ಬೋಧಿಸಿದ ಗುರುಗಳು, 1986 ರಿಂದ 1995 ರವರೆಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದಲ್ಲಿ ಹಿರಿಯ ಸಹೋದ್ಯೋಗಿಯಾಗಿ ನನಗೆ ಮಾರ್ಗದರ್ಶನ ಮಾಡಿದ ಹಿತೈಷಿಗಳು, ಬಹುಶ್ರುತ ವಿದ್ವಾಂಸರು ಮತ್ತು ಖ್ಯಾತ ಇತಿಹಾಸಕಾರರಾದ ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಇನ್ನಿಲ್ಲ. ಅವರ ಅಗಲಿಕೆಯ ಶೂನ್ಯವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರಿಗೆ ಸಾಧ್ಯವಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ ಎಂದು ಅಶೋಕ್‌ ಶೆಟ್ಟರ್‌ರವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇವರಿಗೆ ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...