Homeರಾಜಕೀಯಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಮಂಡಲ ಆಯೋಗ ಹೋರಾಟದ ‘ಮಸೀಹಾ’ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ಬಣ್ಣಿಸಿದ್ದಾರೆ

- Advertisement -
- Advertisement -

ಹಿರಿಯ ಸಮಾಜವಾದಿ, ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. ಏಳು ಬಾರಿ ಲೋಕಸಭೆಗೆ ಚುನಾಯಿತರಾಗಿರುವ ಅವರು, ಜಯಪ್ರಕಾಶ್ ನಾರಾಯಣ್‌ ಅವರಿಂದ ಹಿಡಿದು ಲಾಲು ಪ್ರಸಾದ್‌ ಯಾದವ್‌ವರೆಗಿನ ರಾಜಕೀಯ ದಿಗ್ಗಜರ ಜೊತೆಗೆ ಅವರು ರಾಜಕೀಯದಲ್ಲಿ ಸಕ್ರೀಯವಾಗಿದ್ದರು.

ಇಂಜಿನಿಯರ್ ಪದವೀಧರರಾಗಿದ್ದ ಶರದ್‌ ಯಾದವ್ ಅವರು ರಾಮ್ ಮನೋಹರ್ ಲೋಹಿಯಾ ಅವರ ಸಮಾಜವಾದಕ್ಕೆ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದರು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪ್ರತಿಭಟನೆಗಳ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಅವರು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಜಯಪ್ರಕಾಶ್ ನಾರಾಯಣ್‌ ಅವರೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶರದ್‌ ಯಾದವ್‌ ಅವರು ಮಗಳು ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್‌ನಲ್ಲಿ ಮೂರು ಪದಗಳ ಪೋಸ್ಟ್‌ನೊಂದಿಗೆ ತಮ್ಮ ತಂದೆಯ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಪಾಪಾ ನಹಿ ರಹೆನ್ (ಅಪ್ಪ ಇನ್ನಿಲ್ಲ)” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಶರದ್‌ ಯಾದವ್ ಅವರು ಪ್ರಬಲ ವಾಗ್ಮಿಯಾಗಿ ತಮ್ಮ ಛಾಪು ಮೂಡಿಸಿದ್ದ ಅವರು ಉತ್ತರ ಪ್ರದೇಶದಲ್ಲಿ ಕೂಡಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಂತಿಮವಾಗಿ ಬಿಹಾರವನ್ನಷ್ಟೆ ತಮ್ಮ ರಾಜಕೀಯ ಕ್ಷೇತ್ರವಾಗಿ ಮಾಡಿಕೊಂಡ ಅವರು ವಿ.ಪಿ. ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟ ಸಚಿವರಾಗಿದ್ದರು.

1980 ಮತ್ತು 90 ರ ದಶಕದಲ್ಲಿ ರಾಜಕೀಯವನ್ನು ರೂಪಿಸುವಲ್ಲಿ ಶರದ್‌ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು. 1989 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು 1980 ರ ದಶಕದಲ್ಲಿ ಜನತಾ ದಳದ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಮಂಡಲ್ ಆಯೋಗದ ವರದಿಯನ್ನು ಜಾರಿಗೆ ತರಲು ಆಗಿನ ಪ್ರಧಾನಿ ವಿ.ಪಿ. ಸಿಂಗ್ ಅವರ ಮೇಲೆ ಒತ್ತಡ ಹೇರಿದ ಪ್ರಮುಖ ನಾಯಕರಲ್ಲಿ ಶರದ್‌ ಯಾದವ್‌ ಕೂಡಾ ಒಬ್ಬರಾಗಿದ್ದಾರೆ. ಆದರೆ ಮಹಿಳೆಯರಿಗೆ 33% ಮೀಸಲಾತಿಯನ್ನು ಪರಿಚಯಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅವರು ಹಿಂದುಳಿದ ವರ್ಗಗಳ ಪ್ರತಿರೋಧವನ್ನು ಸಂಘಟಿಸಿದ್ದರು. ಈ ಬೇಡಿಕೆಯನ್ನು ಅವರು ಮೇಲ್ಜಾತಿ ಗಣ್ಯರ ಪಿತೂರಿ ಎಂದು ಬಣ್ಣಿಸಿದ್ದರು.

2017 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ನೇತೃತ್ವದ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ ಶರದ್ ಯಾದವ್ ಅವರನ್ನು ಅನುಸರಿಸಲು ನಿರಾಕರಿಸಿದರು. ಇದಕ್ಕಾಗಿ ಜೆಡಿಯು ಅವರನ್ನು ರಾಜ್ಯಸಭೆಯಿಂದ ಹೊರಹಾಕಲು ಪ್ರಯತ್ನಿಸಿತು. ನಂತರ, ಅವರು ನಿತೀಶ್ ಕುಮಾರ್ ಅವರೊಂದಿಗೆ ಬೇರ್ಪಟ್ಟು 2018 ರಲ್ಲಿ ತಮ್ಮದೇ ಆದ ಪಕ್ಷವಾದ ಲೋಕತಾಂತ್ರಿಕ ಜನತಾ ದಳ (LJD) ಅನ್ನು ಸ್ಥಾಪಿಸಿದರು. ಈ ಪಕ್ಷವನ್ನು ಐದು ವರ್ಷಗಳ ನಂತರ, 2022 ರಲ್ಲಿ ರಾಷ್ಟ್ರೀಯ ಜನತಾ ದಳ (RJD) ನೊಂದಿಗೆ ವಿಲೀನಗೊಳಿಸಿದರು. ಅವರ ಪುತ್ರಿ ಸುಭಾಷಿಣಿಗೆ ಆರ್‌ಜೆಡಿಯ ರಾಷ್ಟ್ರೀಯ ಮಂಡಳಿಯಲ್ಲಿ ಸ್ಥಾನವನ್ನೂ ನೀಡಲಾಗಿತ್ತು.

ಶರದ್‌ ಯಾದವ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

“ಶ್ರೀ ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರು ಸುದೀರ್ಘ ವರ್ಷಗಳಲ್ಲಿ ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಹೆಚ್ಚು ಪ್ರೇರಿತರಾಗಿದ್ದರು. ನಾನು ನಮ್ಮ ನಡುವಿನ ಸಂವಾದಗಳನ್ನು ಯಾವಾಗಲೂ ಗೌರವಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಹೇಳಿದ್ದಾರೆ.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ‘ಮಂಡಲ ಮಸೀಹಾ’ ಎಂದು ಬಣ್ಣಿಸಿದ್ದಾರೆ.

“ಮಹಾನ್ ಸಮಾಜವಾದಿ ನಾಯಕ, ನನ್ನ ಆಪ್ತರ ನಿಧನದ ಬಗ್ಗೆ ತಿಳಿದು ನಾನು ತೀವ್ರ ದುಃಖದಲ್ಲಿದ್ದೇನೆ. ನನಗೆ ಏನನ್ನೂ ಹೇಳಲು ಸಾಧ್ಯವಾಗುತ್ತಿಲ್ಲ. ನಾನು ಮಾತಾ ಜೀ ಮತ್ತು ಸಹೋದರ ಶಾಂತನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ದುಃಖದ ಸಮಯದಲ್ಲಿ, ಇಡೀ ಸಮಾಜವಾದಿ ಕುಟುಂಬ ಅವರೊಂದಿಗಿದೆ” ಎಂದು ಹೇಳಿದ್ದಾರೆ.

https://twitter.com/TejashwiOffice/status/1613612650642169856.

ಮಾಜಿ ಪ್ರಧಾನಿ ದೇವೇಗೌಡ ಅವರು ಟ್ವೀಟ್ ಮಾಡಿ, “ನನ್ನ ಬಹುಕಾಲದ ಗೆಳೆಯ ಮತ್ತು ಜನತಾ ಪರಿವಾರದ ಸಹೋದ್ಯೋಗಿ ಶ್ರೀ ಶರದ್ ಯಾದವ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಆರೋಗ್ಯ ವಿಚಾರಿಸಲು ಕೆಲ ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅವನ್ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...