Homeರಾಜಕೀಯಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಮಂಡಲ ಆಯೋಗ ಹೋರಾಟದ ‘ಮಸೀಹಾ’ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ಬಣ್ಣಿಸಿದ್ದಾರೆ

- Advertisement -
- Advertisement -

ಹಿರಿಯ ಸಮಾಜವಾದಿ, ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. ಏಳು ಬಾರಿ ಲೋಕಸಭೆಗೆ ಚುನಾಯಿತರಾಗಿರುವ ಅವರು, ಜಯಪ್ರಕಾಶ್ ನಾರಾಯಣ್‌ ಅವರಿಂದ ಹಿಡಿದು ಲಾಲು ಪ್ರಸಾದ್‌ ಯಾದವ್‌ವರೆಗಿನ ರಾಜಕೀಯ ದಿಗ್ಗಜರ ಜೊತೆಗೆ ಅವರು ರಾಜಕೀಯದಲ್ಲಿ ಸಕ್ರೀಯವಾಗಿದ್ದರು.

ಇಂಜಿನಿಯರ್ ಪದವೀಧರರಾಗಿದ್ದ ಶರದ್‌ ಯಾದವ್ ಅವರು ರಾಮ್ ಮನೋಹರ್ ಲೋಹಿಯಾ ಅವರ ಸಮಾಜವಾದಕ್ಕೆ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದರು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪ್ರತಿಭಟನೆಗಳ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಅವರು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಜಯಪ್ರಕಾಶ್ ನಾರಾಯಣ್‌ ಅವರೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶರದ್‌ ಯಾದವ್‌ ಅವರು ಮಗಳು ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್‌ನಲ್ಲಿ ಮೂರು ಪದಗಳ ಪೋಸ್ಟ್‌ನೊಂದಿಗೆ ತಮ್ಮ ತಂದೆಯ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಪಾಪಾ ನಹಿ ರಹೆನ್ (ಅಪ್ಪ ಇನ್ನಿಲ್ಲ)” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಶರದ್‌ ಯಾದವ್ ಅವರು ಪ್ರಬಲ ವಾಗ್ಮಿಯಾಗಿ ತಮ್ಮ ಛಾಪು ಮೂಡಿಸಿದ್ದ ಅವರು ಉತ್ತರ ಪ್ರದೇಶದಲ್ಲಿ ಕೂಡಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಂತಿಮವಾಗಿ ಬಿಹಾರವನ್ನಷ್ಟೆ ತಮ್ಮ ರಾಜಕೀಯ ಕ್ಷೇತ್ರವಾಗಿ ಮಾಡಿಕೊಂಡ ಅವರು ವಿ.ಪಿ. ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟ ಸಚಿವರಾಗಿದ್ದರು.

1980 ಮತ್ತು 90 ರ ದಶಕದಲ್ಲಿ ರಾಜಕೀಯವನ್ನು ರೂಪಿಸುವಲ್ಲಿ ಶರದ್‌ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು. 1989 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು 1980 ರ ದಶಕದಲ್ಲಿ ಜನತಾ ದಳದ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಮಂಡಲ್ ಆಯೋಗದ ವರದಿಯನ್ನು ಜಾರಿಗೆ ತರಲು ಆಗಿನ ಪ್ರಧಾನಿ ವಿ.ಪಿ. ಸಿಂಗ್ ಅವರ ಮೇಲೆ ಒತ್ತಡ ಹೇರಿದ ಪ್ರಮುಖ ನಾಯಕರಲ್ಲಿ ಶರದ್‌ ಯಾದವ್‌ ಕೂಡಾ ಒಬ್ಬರಾಗಿದ್ದಾರೆ. ಆದರೆ ಮಹಿಳೆಯರಿಗೆ 33% ಮೀಸಲಾತಿಯನ್ನು ಪರಿಚಯಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅವರು ಹಿಂದುಳಿದ ವರ್ಗಗಳ ಪ್ರತಿರೋಧವನ್ನು ಸಂಘಟಿಸಿದ್ದರು. ಈ ಬೇಡಿಕೆಯನ್ನು ಅವರು ಮೇಲ್ಜಾತಿ ಗಣ್ಯರ ಪಿತೂರಿ ಎಂದು ಬಣ್ಣಿಸಿದ್ದರು.

2017 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ನೇತೃತ್ವದ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ ಶರದ್ ಯಾದವ್ ಅವರನ್ನು ಅನುಸರಿಸಲು ನಿರಾಕರಿಸಿದರು. ಇದಕ್ಕಾಗಿ ಜೆಡಿಯು ಅವರನ್ನು ರಾಜ್ಯಸಭೆಯಿಂದ ಹೊರಹಾಕಲು ಪ್ರಯತ್ನಿಸಿತು. ನಂತರ, ಅವರು ನಿತೀಶ್ ಕುಮಾರ್ ಅವರೊಂದಿಗೆ ಬೇರ್ಪಟ್ಟು 2018 ರಲ್ಲಿ ತಮ್ಮದೇ ಆದ ಪಕ್ಷವಾದ ಲೋಕತಾಂತ್ರಿಕ ಜನತಾ ದಳ (LJD) ಅನ್ನು ಸ್ಥಾಪಿಸಿದರು. ಈ ಪಕ್ಷವನ್ನು ಐದು ವರ್ಷಗಳ ನಂತರ, 2022 ರಲ್ಲಿ ರಾಷ್ಟ್ರೀಯ ಜನತಾ ದಳ (RJD) ನೊಂದಿಗೆ ವಿಲೀನಗೊಳಿಸಿದರು. ಅವರ ಪುತ್ರಿ ಸುಭಾಷಿಣಿಗೆ ಆರ್‌ಜೆಡಿಯ ರಾಷ್ಟ್ರೀಯ ಮಂಡಳಿಯಲ್ಲಿ ಸ್ಥಾನವನ್ನೂ ನೀಡಲಾಗಿತ್ತು.

ಶರದ್‌ ಯಾದವ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

“ಶ್ರೀ ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರು ಸುದೀರ್ಘ ವರ್ಷಗಳಲ್ಲಿ ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಹೆಚ್ಚು ಪ್ರೇರಿತರಾಗಿದ್ದರು. ನಾನು ನಮ್ಮ ನಡುವಿನ ಸಂವಾದಗಳನ್ನು ಯಾವಾಗಲೂ ಗೌರವಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಹೇಳಿದ್ದಾರೆ.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ‘ಮಂಡಲ ಮಸೀಹಾ’ ಎಂದು ಬಣ್ಣಿಸಿದ್ದಾರೆ.

“ಮಹಾನ್ ಸಮಾಜವಾದಿ ನಾಯಕ, ನನ್ನ ಆಪ್ತರ ನಿಧನದ ಬಗ್ಗೆ ತಿಳಿದು ನಾನು ತೀವ್ರ ದುಃಖದಲ್ಲಿದ್ದೇನೆ. ನನಗೆ ಏನನ್ನೂ ಹೇಳಲು ಸಾಧ್ಯವಾಗುತ್ತಿಲ್ಲ. ನಾನು ಮಾತಾ ಜೀ ಮತ್ತು ಸಹೋದರ ಶಾಂತನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ದುಃಖದ ಸಮಯದಲ್ಲಿ, ಇಡೀ ಸಮಾಜವಾದಿ ಕುಟುಂಬ ಅವರೊಂದಿಗಿದೆ” ಎಂದು ಹೇಳಿದ್ದಾರೆ.

https://twitter.com/TejashwiOffice/status/1613612650642169856.

ಮಾಜಿ ಪ್ರಧಾನಿ ದೇವೇಗೌಡ ಅವರು ಟ್ವೀಟ್ ಮಾಡಿ, “ನನ್ನ ಬಹುಕಾಲದ ಗೆಳೆಯ ಮತ್ತು ಜನತಾ ಪರಿವಾರದ ಸಹೋದ್ಯೋಗಿ ಶ್ರೀ ಶರದ್ ಯಾದವ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಆರೋಗ್ಯ ವಿಚಾರಿಸಲು ಕೆಲ ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅವನ್ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...