ಹಿರಿಯ ಸಮಾಜವಾದಿ, ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. ಏಳು ಬಾರಿ ಲೋಕಸಭೆಗೆ ಚುನಾಯಿತರಾಗಿರುವ ಅವರು, ಜಯಪ್ರಕಾಶ್ ನಾರಾಯಣ್ ಅವರಿಂದ ಹಿಡಿದು ಲಾಲು ಪ್ರಸಾದ್ ಯಾದವ್ವರೆಗಿನ ರಾಜಕೀಯ ದಿಗ್ಗಜರ ಜೊತೆಗೆ ಅವರು ರಾಜಕೀಯದಲ್ಲಿ ಸಕ್ರೀಯವಾಗಿದ್ದರು.
ಇಂಜಿನಿಯರ್ ಪದವೀಧರರಾಗಿದ್ದ ಶರದ್ ಯಾದವ್ ಅವರು ರಾಮ್ ಮನೋಹರ್ ಲೋಹಿಯಾ ಅವರ ಸಮಾಜವಾದಕ್ಕೆ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದರು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪ್ರತಿಭಟನೆಗಳ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಅವರು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಜಯಪ್ರಕಾಶ್ ನಾರಾಯಣ್ ಅವರೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಶರದ್ ಯಾದವ್ ಅವರು ಮಗಳು ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ ಮೂರು ಪದಗಳ ಪೋಸ್ಟ್ನೊಂದಿಗೆ ತಮ್ಮ ತಂದೆಯ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಪಾಪಾ ನಹಿ ರಹೆನ್ (ಅಪ್ಪ ಇನ್ನಿಲ್ಲ)” ಎಂದು ಅವರು ಟ್ವೀಟ್ ಮಾಡಿದ್ದಾರೆ.
पापा नहीं रहे 😭
— Subhashini Sharad Yadav (@Subhashini_12b) January 12, 2023
ಶರದ್ ಯಾದವ್ ಅವರು ಪ್ರಬಲ ವಾಗ್ಮಿಯಾಗಿ ತಮ್ಮ ಛಾಪು ಮೂಡಿಸಿದ್ದ ಅವರು ಉತ್ತರ ಪ್ರದೇಶದಲ್ಲಿ ಕೂಡಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಂತಿಮವಾಗಿ ಬಿಹಾರವನ್ನಷ್ಟೆ ತಮ್ಮ ರಾಜಕೀಯ ಕ್ಷೇತ್ರವಾಗಿ ಮಾಡಿಕೊಂಡ ಅವರು ವಿ.ಪಿ. ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟ ಸಚಿವರಾಗಿದ್ದರು.
1980 ಮತ್ತು 90 ರ ದಶಕದಲ್ಲಿ ರಾಜಕೀಯವನ್ನು ರೂಪಿಸುವಲ್ಲಿ ಶರದ್ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು. 1989 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು 1980 ರ ದಶಕದಲ್ಲಿ ಜನತಾ ದಳದ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಮಂಡಲ್ ಆಯೋಗದ ವರದಿಯನ್ನು ಜಾರಿಗೆ ತರಲು ಆಗಿನ ಪ್ರಧಾನಿ ವಿ.ಪಿ. ಸಿಂಗ್ ಅವರ ಮೇಲೆ ಒತ್ತಡ ಹೇರಿದ ಪ್ರಮುಖ ನಾಯಕರಲ್ಲಿ ಶರದ್ ಯಾದವ್ ಕೂಡಾ ಒಬ್ಬರಾಗಿದ್ದಾರೆ. ಆದರೆ ಮಹಿಳೆಯರಿಗೆ 33% ಮೀಸಲಾತಿಯನ್ನು ಪರಿಚಯಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅವರು ಹಿಂದುಳಿದ ವರ್ಗಗಳ ಪ್ರತಿರೋಧವನ್ನು ಸಂಘಟಿಸಿದ್ದರು. ಈ ಬೇಡಿಕೆಯನ್ನು ಅವರು ಮೇಲ್ಜಾತಿ ಗಣ್ಯರ ಪಿತೂರಿ ಎಂದು ಬಣ್ಣಿಸಿದ್ದರು.
2017 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ನೇತೃತ್ವದ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ ಶರದ್ ಯಾದವ್ ಅವರನ್ನು ಅನುಸರಿಸಲು ನಿರಾಕರಿಸಿದರು. ಇದಕ್ಕಾಗಿ ಜೆಡಿಯು ಅವರನ್ನು ರಾಜ್ಯಸಭೆಯಿಂದ ಹೊರಹಾಕಲು ಪ್ರಯತ್ನಿಸಿತು. ನಂತರ, ಅವರು ನಿತೀಶ್ ಕುಮಾರ್ ಅವರೊಂದಿಗೆ ಬೇರ್ಪಟ್ಟು 2018 ರಲ್ಲಿ ತಮ್ಮದೇ ಆದ ಪಕ್ಷವಾದ ಲೋಕತಾಂತ್ರಿಕ ಜನತಾ ದಳ (LJD) ಅನ್ನು ಸ್ಥಾಪಿಸಿದರು. ಈ ಪಕ್ಷವನ್ನು ಐದು ವರ್ಷಗಳ ನಂತರ, 2022 ರಲ್ಲಿ ರಾಷ್ಟ್ರೀಯ ಜನತಾ ದಳ (RJD) ನೊಂದಿಗೆ ವಿಲೀನಗೊಳಿಸಿದರು. ಅವರ ಪುತ್ರಿ ಸುಭಾಷಿಣಿಗೆ ಆರ್ಜೆಡಿಯ ರಾಷ್ಟ್ರೀಯ ಮಂಡಳಿಯಲ್ಲಿ ಸ್ಥಾನವನ್ನೂ ನೀಡಲಾಗಿತ್ತು.
ಶರದ್ ಯಾದವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
“ಶ್ರೀ ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರು ಸುದೀರ್ಘ ವರ್ಷಗಳಲ್ಲಿ ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಹೆಚ್ಚು ಪ್ರೇರಿತರಾಗಿದ್ದರು. ನಾನು ನಮ್ಮ ನಡುವಿನ ಸಂವಾದಗಳನ್ನು ಯಾವಾಗಲೂ ಗೌರವಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಹೇಳಿದ್ದಾರೆ.
Pained by the passing away of Shri Sharad Yadav Ji. In his long years in public life, he distinguished himself as MP and Minister. He was greatly inspired by Dr. Lohia’s ideals. I will always cherish our interactions. Condolences to his family and admirers. Om Shanti.
— Narendra Modi (@narendramodi) January 12, 2023
ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್ ಯಾದವ್ ಅವರನ್ನು ‘ಮಂಡಲ ಮಸೀಹಾ’ ಎಂದು ಬಣ್ಣಿಸಿದ್ದಾರೆ.
“ಮಹಾನ್ ಸಮಾಜವಾದಿ ನಾಯಕ, ನನ್ನ ಆಪ್ತರ ನಿಧನದ ಬಗ್ಗೆ ತಿಳಿದು ನಾನು ತೀವ್ರ ದುಃಖದಲ್ಲಿದ್ದೇನೆ. ನನಗೆ ಏನನ್ನೂ ಹೇಳಲು ಸಾಧ್ಯವಾಗುತ್ತಿಲ್ಲ. ನಾನು ಮಾತಾ ಜೀ ಮತ್ತು ಸಹೋದರ ಶಾಂತನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ದುಃಖದ ಸಮಯದಲ್ಲಿ, ಇಡೀ ಸಮಾಜವಾದಿ ಕುಟುಂಬ ಅವರೊಂದಿಗಿದೆ” ಎಂದು ಹೇಳಿದ್ದಾರೆ.
https://twitter.com/TejashwiOffice/status/1613612650642169856.
ಮಾಜಿ ಪ್ರಧಾನಿ ದೇವೇಗೌಡ ಅವರು ಟ್ವೀಟ್ ಮಾಡಿ, “ನನ್ನ ಬಹುಕಾಲದ ಗೆಳೆಯ ಮತ್ತು ಜನತಾ ಪರಿವಾರದ ಸಹೋದ್ಯೋಗಿ ಶ್ರೀ ಶರದ್ ಯಾದವ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಆರೋಗ್ಯ ವಿಚಾರಿಸಲು ಕೆಲ ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅವನ್ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ.” ಎಂದು ಹೇಳಿದ್ದಾರೆ.
I feel very sad to learn about the demise of my long time friend and Janata Parivar colleague Shri #SharadYadav. I had met him a few months back to enquire after his health. May his soul rest in peace. Om Shanti. pic.twitter.com/Fv4pWrd5Ul
— H D Devegowda (@H_D_Devegowda) January 12, 2023