Homeಮುಖಪುಟಸುಪ್ರೀಂಕೋರ್ಟ್‌ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂಕೋರ್ಟ್‌ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

- Advertisement -
- Advertisement -

ಖ್ಯಾತ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಫಾಲಿ ನಾರಿಮನ್ ಇಂದು ನಿಧನರಾಗಿದ್ದಾರೆ.

95 ವರ್ಷದ ಫಾಲಿ ನಾರಿಮನ್ ಇಂದು ಬೆಳಗ್ಗೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಫಾಲಿ ನಾರಿಮನ್ ಜನವರಿ 10, 1929ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದ್ದರು. ಫಾಲಿ ನಾರಿಮನ್ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಮೊದಲು ವಕೀಲರಾಗಿ ಅಭ್ಯಾಸವನ್ನು ಪ್ರಾರಂಭಿಸಿದ್ದರು. ನಂತರ ದೆಹಲಿಗೆ ತೆರಳಿದ್ದರು. ಅವರು 1972ರಲ್ಲಿ ಭಾರತದ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು. ಫಾಲಿ ನಾರಿಮನ್ 1975ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯನ್ನು ಘೋಷಿಸುವ ನಿರ್ಧಾರವನ್ನು ವಿರೋಧಿಸಿ ರಾಜೀನಾಮೆ ನೀಡಿದ್ದರು.

ಖ್ಯಾತ ನ್ಯಾಯಶಾಸ್ತ್ರಜ್ಞ  ಫಾಲಿ ನಾರಿಮನ್ ಅವರಿಗೆ 1991ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು, ಈಗ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯಾಗಿದ್ದಾರೆ.

ಫಾಲಿ ನಾರಿಮನ್ ಅವರು 1991ರಿಂದ 2010ರವರೆಗೆ ಭಾರತದ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1989–2005ರವರೆಗೆ ಪ್ಯಾರಿಸ್‌ನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮಂಡಳಿಯ ನ್ಯಾಯಾಲಯದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಿ ಹಲವು ವ್ಯಾಜ್ಯಗಳಲ್ಲಿ ಜಯ ತಂದು ಕೊಟ್ಟಿದ್ದರು.

ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ಫಾಲಿ ನಾರಿಮನ್ ಅವರ ನಿಧನದ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿಯನ್ನು ನೀಡಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದು, ಇದು ಯುಗವೊಂದರ ಅಂತ್ಯ. ಫಾಲಿನಾರಿಮನ್ ನಿಧನರಾದರು, ಅವರು ಕಾನೂನು ಮತ್ತು ಸಾರ್ವಜನಿಕ ಜೀವನದಲ್ಲಿ ಶಾಶ್ವತವಾಗಿ ಹೃದಯ ಮತ್ತು ಮನಸ್ಸಿನಲ್ಲಿ ಉಳಿಯುವ ಜೀವಂತ ದಂತಕಥೆ. ಅವರ ಅಮೋಘ ಸಾಧನೆಯನ್ನು ಮಾಡಿದ್ದಾರೆ. ಅವರು  ತಮ್ಮ ತತ್ವಗಳ ಜೊತೆ ಅಚಲವಾಗಿ ನಿಂತುಕೊಂಡವರು. ಅವರ ನಿಷ್ಠುರವಾಗಿದ್ದ ಗುಣವನ್ನು ಅವರ ಮೇಧಾವಿ ಮಗ ಹೊಂದಿದ್ದಾರೆ ಎಂದು ಫಾಲಿ ನಾರಿಮನ್ ಅವರನ್ನು ಸ್ಮರಿಸುವಾಗ ಅವರ ಮಗ ರೊಹಿಂಗ್ಟನ್ ನಾರಿಮನ್ ಅವರನ್ನು ಸಿಂಘ್ವಿ ಶ್ಲಾಘಿಸಿದ್ದಾರೆ.

ಇದನ್ನು ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...