Homeಕರ್ನಾಟಕಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

- Advertisement -
- Advertisement -

ಹಿರಿಯ ಚಿಂತಕ, ವಿಮರ್ಶ, ಲೇಖಕ ಹಾಗೂ ಜನಪರ ಹೋರಾಟಗಾರ ಜಿ.ರಾಜಶೇಖರ ಅವರು ಬುಧವಾರ ರಾತ್ರಿ 11:15 ಕ್ಕೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಸಂಗಾತಿಗಳನ್ನು ಅಗಲಿದ್ದಾರೆ.

2019 ರಿಂದ ಪ್ರೋಗೆಸಿವ್ ಸುಪ್ರ ನ್ಯೂಕ್ಲಿಯರ್‌‌ ಪಾಲ್ಸಿ ಎಂಬ ಅಪರೂಪದ ಪಾರ್ಕಿನ್‌ಸನ್ಸ್‌ ಕಾಯಿಲೆಯಿಂದ ಬಳಲುತ್ತಿದ್ದ ಜಿ. ರಾಜಶೇಖರ ಅವರನ್ನು, ಹಲವು ದಿನಗಳ ಹಿಂದೆ ಶ್ವಾಸಕೋಶದ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1946ರ ಏಪ್ರಿಲ್ 3ರಂದು ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ಜನಿಸಿದ ಜಿ. ರಾಜಶೇಖರ ಅವರು ಪದವಿಯನ್ನು ಉಡುಪಿಯಲ್ಲಿ ಪಡೆದರು. ಆರಂಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅವರು ಬಳಿಕ ಎಲ್‌ಐಸಿಯ ಉದ್ಯೋಗಿಯಾಗಿದ್ದರು.

ಜಿ. ರಾಜಶೇಖರ ಅವರು ನೇರ ನಿಷ್ಠುರ ವಿಮರ್ಶಕರಾಗಿದ್ದರು. ಬಹುವಚನ ಭಾರತ ಅವರ ಪ್ರಮುಖ ಕೃತಿಯಾಗಿದ್ದು, ಈ ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ 2015ರ ಸಾಲಿನಲ್ಲಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದರು. ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು ಅವರ ಇತರ ಪ್ರಮುಖ ಕೃತಿಗಳಾಗಿವೆ.

ದಲಿತ, ಅಲ್ಪಸಂಖ್ಯಾತ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಡೆಯುವ ಎಲ್ಲಾ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ರಾಜ್ಯದ ಪ್ರಮುಖ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ಜನಪರ ಚಳವಳಿಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಕರಾವಳಿಯಲ್ಲಿ ಕೋಮುವಾದದ ವಿರುದ್ಧ ಅವರದ್ದು ಗಟ್ಟಿ ಧ್ವನಿಯಾಗಿತ್ತು. ಕೋಮುಗಲಭೆಗಳು ನಡೆದ ಪ್ರದೇಶಕ್ಕೆ ತೆರಳಿ ಸತ್ಯಶೋಧನ ವರದಿಯನ್ನು ಮಾಡುತ್ತಿದ್ದರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಜಿ.ರಾಜಶೇಖರ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಿಗ್ಗೆ 8 ಗಂಟೆಯಿಂದ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಸಮೀಪದಲ್ಲಿರುವ ಸಂಬಂಧಿಕರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಅಂತ್ಯಕ್ರಿಯೆಯು ಹತ್ತು ಗಂಟೆಗೆ ಉಡುಪಿಯ ಬೀಡಿನಗುಡ್ಡೆಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಜಿ. ರಾಜಶೇಖರ ಅವರ ನಿಧನಕ್ಕೆ ಹಲವಾರು ಜನರು ಸಂತಾಪ ವ್ಯಕ್ತಪಡಿಸಿದ್ದಾರೆ. ಲೇಖಕ, ಪ್ರಕಾಶಕ ಬಸೂ ಅವರು, “ಕರಾವಳಿಯಲ್ಲಿ ಅನ್ಯಾಯಗಳು ನಡೆದಾಗ ಸದಾ ಪ್ರತಿಭಟಿಸಿದ ಜಾಗೃತ ಕಿಡಿಯೊಂದು ಈಗ ಅದನ್ನು ನಮ್ಮೆದೆಗೆ ದಾಟಿಸಿ ಶಾಂತವಾಗಿದೆ.. ಪ್ರೀತಿಯ ನಮನಗಳು. ಜಿ. ರಾಜಶೇಖರ ಅವರು ಸದಾ ನಮ್ಮೊಡನೆ ಇರುತ್ತಾರೆ ಜಾಗೃತ ಕಿಡಿಯೊಂದು ನಮ್ಮೆದೆಗಳಲ್ಲಿ ನಿಗಿನಿಗಿಸುವ ಹೊತ್ತಿನಷ್ಟು” ಎಂದು ಹೇಳಿದ್ದಾರೆ.

ಲೇಖಕರಾದ ಶ್ರೀಪಾದ್ ಭಟ್‌ ಅವರು, “ಇಂದು ಜಿ. ರಾಜಶೇಖರ ನಮ್ಮನ್ನು ಅಗಲಿದ್ದಾರೆ. ಅವರ ದೀರ್ಘಕಾಲದ ಅನಾರೋಗ್ಯವನ್ನು ಕಂಡಾಗ ಇದು ಅನಿವಾರ್ಯವಾಗಿತ್ತು. ‘ಹೌದುರೀ ನಾನು ಹೀಗೆಯೇ ಜೀವಿಸಿದ್ದೆ ನೋಡಿ’ ಎಂದು ಎಗ್ಗಿಲ್ಲದೆ ಹೇಳಿಕೊಳ್ಳಬಹುದಂತೆ ಬದುಕಿದ್ದರು ಜಿ.ಆರ್. ಆದರೆ ಅವರು ಬದುಕು ಕೇವಲ ಬದುಕಾಗಿರಲಿಲ್ಲ. ಸಮಾಜದ ತಳಮಳವನ್ನು ತನ್ನೊಳಗಿನ ಅಸ್ವಸ್ಥತೆ ಎಂದು ಸ್ಪಂದಿಸುತ್ತಿದ್ದರು. ತನ್ನ ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಮಾಜದಲ್ಲಿನ ಸಾಮರಸ್ಯ ತುಂಬಾ ಅಗತ್ಯ ಎಂದು ಜಿ.ಆರ್ ನಂಬಿದ್ದರು. ಇಂದು ಫ್ಯಾಸಿಸಂ ಪ್ರಭುತ್ವದ ಸಂದರ್ಭದಲ್ಲಿ ಕಂಡೂ ಕಾಣದಂತೆ, ನನ್ನ ಕಡೆಗೆ ನೋಡಬೇಡಿ ಮಾರಾಯ್ರೆ ಎಂಬಂತೆ ಆತ್ಮವಂಚನೆಯಲ್ಲಿ ಬದುಕುತ್ತಿರುವ ಅನೇಕ ಲೇಖಕರನ್ನು ನೋಡಿದಾಗ ಜಿ. ಆರ್. ಮಹತ್ವ ಅರ್ಥವಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಮುಖವಾಡ ಹಾಕುವಲ್ಲಿ ಸಫಲವಾದ ಜೀವವಿರೋಧಿ ಮೋದಿ ಸರ್ಕಾರ: ಜಿ.ರಾಜಶೇಖರ್

ಲೇಖಕರಾದ ಶ್ರೀನಿವಾಸ್ ಕಾರ್ಕಳ ಅವರು, “ಜಿ ರಾಜಶೇಖರ್ ಓರ್ವ ನಿರ್ಭೀತ ಸಾರ್ವಜನಿಕ ಬುದ್ಧಿಜೀವಿ, ನಾಡಿನ ಸಾಕ್ಷಿಪ್ರಜ್ಞೆ. ಪ್ರಖರ ಚಿಂತಕ, ಲೇಖಕ. ರಾಜ್ಯದಲ್ಲಿ, ಅದರಲ್ಲೂ ಮುಖ್ಯವಾಗಿ ಕರಾವಳಿಯಲ್ಲಿ ಕೊನೆಯುಸಿರಿನ ತನಕವೂ ಕೋಮುವಾದದ ವಿರುದ್ಧ ಹೋರಾಡಿದವರು, ಸೌಹಾರ್ದ, ಸಹಬಾಳ್ವೆಯ ಸಮಾಜವನ್ನು ಕನಸಿದವರು, ಅದರ ನಿರ್ಮಾಣಕ್ಕಾಗಿ ತುಡಿದವರು, ದುಡಿದವರು. ಉಡುಪಿಯಲ್ಲಿ ಕೋಮುವಾದಿಗಳ ಆಟಾಟೋಪದ ವಿರುದ್ಧದ ಪ್ರತಿಭಟನೆ ದಾಖಲಿಸಲು ಸುರಿವ ಜಡಿ ಮಳೆಯಲ್ಲೂ ನಾಲ್ಕೇ ನಾಲ್ಕು ಜನ ಭಿತ್ತಿ ಪತ್ರ ಹಿಡಿದು ನಿಲ್ಲುತ್ತಿದ್ದರೂ ಅದರಲ್ಲಿ ಒಬ್ಬರು ರಾಜಶೇಖರ್ ಅವರಾಗಿರುತ್ತಿದ್ದರು. ಅವರ ನಿರ್ಗಮನ ದೊಡ್ಡ ನಷ್ಟ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ ಮುನೀರ್‌ ಕಾಟಿಪಳ್ಳ ಅವರು, “ವಿದಾಯದ ಹೊತ್ತಲ್ಲ ಇದು. ಮತ್ತಷ್ಟು ಜಗಳ, ವಾಗ್ವಾದ, ಪ್ರೀತಿ ಎಲ್ಲವೂ ಬಾಕಿಯಿತ್ತು. ಸಮ ಸಮಾಜದ ಕಡೆಗಿನ ಹೋರಾಟ ಮುಂದುವರಿಯುತ್ತದೆ. ಹೋಗಿ ಬನ್ನಿ ಕಾಮ್ರೇಡ್, ಲಾಲ್ ಸಲಾಂ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಕನ್ನಡದ ಹಿರಿಯ ವಿಮರ್ಶಕ, ನೇರ-ನಿಷ್ಠುರ ನಡವಳಿಕೆಯ ಪ್ರಖರ ಚಿಂತಕ ಮತ್ತು ಸೌಹಾರ್ದ ಬದುಕಿನ ಹೋರಾಟಗಾರ ಜಿ.ರಾಜಶೇಖರ್ ಅಗಲಿಕೆ ನಮ್ಮೆಲ್ಲರ ಪಾಲಿಗೆ ತುಂಬಿಕೊಳ್ಳಲಾಗದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...