Homeಕರ್ನಾಟಕಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

- Advertisement -
- Advertisement -

ಹಿರಿಯ ಚಿಂತಕ, ವಿಮರ್ಶ, ಲೇಖಕ ಹಾಗೂ ಜನಪರ ಹೋರಾಟಗಾರ ಜಿ.ರಾಜಶೇಖರ ಅವರು ಬುಧವಾರ ರಾತ್ರಿ 11:15 ಕ್ಕೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಸಂಗಾತಿಗಳನ್ನು ಅಗಲಿದ್ದಾರೆ.

2019 ರಿಂದ ಪ್ರೋಗೆಸಿವ್ ಸುಪ್ರ ನ್ಯೂಕ್ಲಿಯರ್‌‌ ಪಾಲ್ಸಿ ಎಂಬ ಅಪರೂಪದ ಪಾರ್ಕಿನ್‌ಸನ್ಸ್‌ ಕಾಯಿಲೆಯಿಂದ ಬಳಲುತ್ತಿದ್ದ ಜಿ. ರಾಜಶೇಖರ ಅವರನ್ನು, ಹಲವು ದಿನಗಳ ಹಿಂದೆ ಶ್ವಾಸಕೋಶದ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1946ರ ಏಪ್ರಿಲ್ 3ರಂದು ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ಜನಿಸಿದ ಜಿ. ರಾಜಶೇಖರ ಅವರು ಪದವಿಯನ್ನು ಉಡುಪಿಯಲ್ಲಿ ಪಡೆದರು. ಆರಂಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅವರು ಬಳಿಕ ಎಲ್‌ಐಸಿಯ ಉದ್ಯೋಗಿಯಾಗಿದ್ದರು.

ಜಿ. ರಾಜಶೇಖರ ಅವರು ನೇರ ನಿಷ್ಠುರ ವಿಮರ್ಶಕರಾಗಿದ್ದರು. ಬಹುವಚನ ಭಾರತ ಅವರ ಪ್ರಮುಖ ಕೃತಿಯಾಗಿದ್ದು, ಈ ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ 2015ರ ಸಾಲಿನಲ್ಲಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದರು. ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು ಅವರ ಇತರ ಪ್ರಮುಖ ಕೃತಿಗಳಾಗಿವೆ.

ದಲಿತ, ಅಲ್ಪಸಂಖ್ಯಾತ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಡೆಯುವ ಎಲ್ಲಾ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ರಾಜ್ಯದ ಪ್ರಮುಖ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ಜನಪರ ಚಳವಳಿಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಕರಾವಳಿಯಲ್ಲಿ ಕೋಮುವಾದದ ವಿರುದ್ಧ ಅವರದ್ದು ಗಟ್ಟಿ ಧ್ವನಿಯಾಗಿತ್ತು. ಕೋಮುಗಲಭೆಗಳು ನಡೆದ ಪ್ರದೇಶಕ್ಕೆ ತೆರಳಿ ಸತ್ಯಶೋಧನ ವರದಿಯನ್ನು ಮಾಡುತ್ತಿದ್ದರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಜಿ.ರಾಜಶೇಖರ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಿಗ್ಗೆ 8 ಗಂಟೆಯಿಂದ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಸಮೀಪದಲ್ಲಿರುವ ಸಂಬಂಧಿಕರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಅಂತ್ಯಕ್ರಿಯೆಯು ಹತ್ತು ಗಂಟೆಗೆ ಉಡುಪಿಯ ಬೀಡಿನಗುಡ್ಡೆಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಜಿ. ರಾಜಶೇಖರ ಅವರ ನಿಧನಕ್ಕೆ ಹಲವಾರು ಜನರು ಸಂತಾಪ ವ್ಯಕ್ತಪಡಿಸಿದ್ದಾರೆ. ಲೇಖಕ, ಪ್ರಕಾಶಕ ಬಸೂ ಅವರು, “ಕರಾವಳಿಯಲ್ಲಿ ಅನ್ಯಾಯಗಳು ನಡೆದಾಗ ಸದಾ ಪ್ರತಿಭಟಿಸಿದ ಜಾಗೃತ ಕಿಡಿಯೊಂದು ಈಗ ಅದನ್ನು ನಮ್ಮೆದೆಗೆ ದಾಟಿಸಿ ಶಾಂತವಾಗಿದೆ.. ಪ್ರೀತಿಯ ನಮನಗಳು. ಜಿ. ರಾಜಶೇಖರ ಅವರು ಸದಾ ನಮ್ಮೊಡನೆ ಇರುತ್ತಾರೆ ಜಾಗೃತ ಕಿಡಿಯೊಂದು ನಮ್ಮೆದೆಗಳಲ್ಲಿ ನಿಗಿನಿಗಿಸುವ ಹೊತ್ತಿನಷ್ಟು” ಎಂದು ಹೇಳಿದ್ದಾರೆ.

ಲೇಖಕರಾದ ಶ್ರೀಪಾದ್ ಭಟ್‌ ಅವರು, “ಇಂದು ಜಿ. ರಾಜಶೇಖರ ನಮ್ಮನ್ನು ಅಗಲಿದ್ದಾರೆ. ಅವರ ದೀರ್ಘಕಾಲದ ಅನಾರೋಗ್ಯವನ್ನು ಕಂಡಾಗ ಇದು ಅನಿವಾರ್ಯವಾಗಿತ್ತು. ‘ಹೌದುರೀ ನಾನು ಹೀಗೆಯೇ ಜೀವಿಸಿದ್ದೆ ನೋಡಿ’ ಎಂದು ಎಗ್ಗಿಲ್ಲದೆ ಹೇಳಿಕೊಳ್ಳಬಹುದಂತೆ ಬದುಕಿದ್ದರು ಜಿ.ಆರ್. ಆದರೆ ಅವರು ಬದುಕು ಕೇವಲ ಬದುಕಾಗಿರಲಿಲ್ಲ. ಸಮಾಜದ ತಳಮಳವನ್ನು ತನ್ನೊಳಗಿನ ಅಸ್ವಸ್ಥತೆ ಎಂದು ಸ್ಪಂದಿಸುತ್ತಿದ್ದರು. ತನ್ನ ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಮಾಜದಲ್ಲಿನ ಸಾಮರಸ್ಯ ತುಂಬಾ ಅಗತ್ಯ ಎಂದು ಜಿ.ಆರ್ ನಂಬಿದ್ದರು. ಇಂದು ಫ್ಯಾಸಿಸಂ ಪ್ರಭುತ್ವದ ಸಂದರ್ಭದಲ್ಲಿ ಕಂಡೂ ಕಾಣದಂತೆ, ನನ್ನ ಕಡೆಗೆ ನೋಡಬೇಡಿ ಮಾರಾಯ್ರೆ ಎಂಬಂತೆ ಆತ್ಮವಂಚನೆಯಲ್ಲಿ ಬದುಕುತ್ತಿರುವ ಅನೇಕ ಲೇಖಕರನ್ನು ನೋಡಿದಾಗ ಜಿ. ಆರ್. ಮಹತ್ವ ಅರ್ಥವಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಮುಖವಾಡ ಹಾಕುವಲ್ಲಿ ಸಫಲವಾದ ಜೀವವಿರೋಧಿ ಮೋದಿ ಸರ್ಕಾರ: ಜಿ.ರಾಜಶೇಖರ್

ಲೇಖಕರಾದ ಶ್ರೀನಿವಾಸ್ ಕಾರ್ಕಳ ಅವರು, “ಜಿ ರಾಜಶೇಖರ್ ಓರ್ವ ನಿರ್ಭೀತ ಸಾರ್ವಜನಿಕ ಬುದ್ಧಿಜೀವಿ, ನಾಡಿನ ಸಾಕ್ಷಿಪ್ರಜ್ಞೆ. ಪ್ರಖರ ಚಿಂತಕ, ಲೇಖಕ. ರಾಜ್ಯದಲ್ಲಿ, ಅದರಲ್ಲೂ ಮುಖ್ಯವಾಗಿ ಕರಾವಳಿಯಲ್ಲಿ ಕೊನೆಯುಸಿರಿನ ತನಕವೂ ಕೋಮುವಾದದ ವಿರುದ್ಧ ಹೋರಾಡಿದವರು, ಸೌಹಾರ್ದ, ಸಹಬಾಳ್ವೆಯ ಸಮಾಜವನ್ನು ಕನಸಿದವರು, ಅದರ ನಿರ್ಮಾಣಕ್ಕಾಗಿ ತುಡಿದವರು, ದುಡಿದವರು. ಉಡುಪಿಯಲ್ಲಿ ಕೋಮುವಾದಿಗಳ ಆಟಾಟೋಪದ ವಿರುದ್ಧದ ಪ್ರತಿಭಟನೆ ದಾಖಲಿಸಲು ಸುರಿವ ಜಡಿ ಮಳೆಯಲ್ಲೂ ನಾಲ್ಕೇ ನಾಲ್ಕು ಜನ ಭಿತ್ತಿ ಪತ್ರ ಹಿಡಿದು ನಿಲ್ಲುತ್ತಿದ್ದರೂ ಅದರಲ್ಲಿ ಒಬ್ಬರು ರಾಜಶೇಖರ್ ಅವರಾಗಿರುತ್ತಿದ್ದರು. ಅವರ ನಿರ್ಗಮನ ದೊಡ್ಡ ನಷ್ಟ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ ಮುನೀರ್‌ ಕಾಟಿಪಳ್ಳ ಅವರು, “ವಿದಾಯದ ಹೊತ್ತಲ್ಲ ಇದು. ಮತ್ತಷ್ಟು ಜಗಳ, ವಾಗ್ವಾದ, ಪ್ರೀತಿ ಎಲ್ಲವೂ ಬಾಕಿಯಿತ್ತು. ಸಮ ಸಮಾಜದ ಕಡೆಗಿನ ಹೋರಾಟ ಮುಂದುವರಿಯುತ್ತದೆ. ಹೋಗಿ ಬನ್ನಿ ಕಾಮ್ರೇಡ್, ಲಾಲ್ ಸಲಾಂ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಕನ್ನಡದ ಹಿರಿಯ ವಿಮರ್ಶಕ, ನೇರ-ನಿಷ್ಠುರ ನಡವಳಿಕೆಯ ಪ್ರಖರ ಚಿಂತಕ ಮತ್ತು ಸೌಹಾರ್ದ ಬದುಕಿನ ಹೋರಾಟಗಾರ ಜಿ.ರಾಜಶೇಖರ್ ಅಗಲಿಕೆ ನಮ್ಮೆಲ್ಲರ ಪಾಲಿಗೆ ತುಂಬಿಕೊಳ್ಳಲಾಗದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...