Homeಕರ್ನಾಟಕಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

- Advertisement -
- Advertisement -

ಹಿರಿಯ ಚಿಂತಕ, ವಿಮರ್ಶ, ಲೇಖಕ ಹಾಗೂ ಜನಪರ ಹೋರಾಟಗಾರ ಜಿ.ರಾಜಶೇಖರ ಅವರು ಬುಧವಾರ ರಾತ್ರಿ 11:15 ಕ್ಕೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಸಂಗಾತಿಗಳನ್ನು ಅಗಲಿದ್ದಾರೆ.

2019 ರಿಂದ ಪ್ರೋಗೆಸಿವ್ ಸುಪ್ರ ನ್ಯೂಕ್ಲಿಯರ್‌‌ ಪಾಲ್ಸಿ ಎಂಬ ಅಪರೂಪದ ಪಾರ್ಕಿನ್‌ಸನ್ಸ್‌ ಕಾಯಿಲೆಯಿಂದ ಬಳಲುತ್ತಿದ್ದ ಜಿ. ರಾಜಶೇಖರ ಅವರನ್ನು, ಹಲವು ದಿನಗಳ ಹಿಂದೆ ಶ್ವಾಸಕೋಶದ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1946ರ ಏಪ್ರಿಲ್ 3ರಂದು ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ಜನಿಸಿದ ಜಿ. ರಾಜಶೇಖರ ಅವರು ಪದವಿಯನ್ನು ಉಡುಪಿಯಲ್ಲಿ ಪಡೆದರು. ಆರಂಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅವರು ಬಳಿಕ ಎಲ್‌ಐಸಿಯ ಉದ್ಯೋಗಿಯಾಗಿದ್ದರು.

ಜಿ. ರಾಜಶೇಖರ ಅವರು ನೇರ ನಿಷ್ಠುರ ವಿಮರ್ಶಕರಾಗಿದ್ದರು. ಬಹುವಚನ ಭಾರತ ಅವರ ಪ್ರಮುಖ ಕೃತಿಯಾಗಿದ್ದು, ಈ ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ 2015ರ ಸಾಲಿನಲ್ಲಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದರು. ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು ಅವರ ಇತರ ಪ್ರಮುಖ ಕೃತಿಗಳಾಗಿವೆ.

ದಲಿತ, ಅಲ್ಪಸಂಖ್ಯಾತ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಡೆಯುವ ಎಲ್ಲಾ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ರಾಜ್ಯದ ಪ್ರಮುಖ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ಜನಪರ ಚಳವಳಿಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಕರಾವಳಿಯಲ್ಲಿ ಕೋಮುವಾದದ ವಿರುದ್ಧ ಅವರದ್ದು ಗಟ್ಟಿ ಧ್ವನಿಯಾಗಿತ್ತು. ಕೋಮುಗಲಭೆಗಳು ನಡೆದ ಪ್ರದೇಶಕ್ಕೆ ತೆರಳಿ ಸತ್ಯಶೋಧನ ವರದಿಯನ್ನು ಮಾಡುತ್ತಿದ್ದರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಜಿ.ರಾಜಶೇಖರ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಿಗ್ಗೆ 8 ಗಂಟೆಯಿಂದ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಸಮೀಪದಲ್ಲಿರುವ ಸಂಬಂಧಿಕರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಅಂತ್ಯಕ್ರಿಯೆಯು ಹತ್ತು ಗಂಟೆಗೆ ಉಡುಪಿಯ ಬೀಡಿನಗುಡ್ಡೆಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಜಿ. ರಾಜಶೇಖರ ಅವರ ನಿಧನಕ್ಕೆ ಹಲವಾರು ಜನರು ಸಂತಾಪ ವ್ಯಕ್ತಪಡಿಸಿದ್ದಾರೆ. ಲೇಖಕ, ಪ್ರಕಾಶಕ ಬಸೂ ಅವರು, “ಕರಾವಳಿಯಲ್ಲಿ ಅನ್ಯಾಯಗಳು ನಡೆದಾಗ ಸದಾ ಪ್ರತಿಭಟಿಸಿದ ಜಾಗೃತ ಕಿಡಿಯೊಂದು ಈಗ ಅದನ್ನು ನಮ್ಮೆದೆಗೆ ದಾಟಿಸಿ ಶಾಂತವಾಗಿದೆ.. ಪ್ರೀತಿಯ ನಮನಗಳು. ಜಿ. ರಾಜಶೇಖರ ಅವರು ಸದಾ ನಮ್ಮೊಡನೆ ಇರುತ್ತಾರೆ ಜಾಗೃತ ಕಿಡಿಯೊಂದು ನಮ್ಮೆದೆಗಳಲ್ಲಿ ನಿಗಿನಿಗಿಸುವ ಹೊತ್ತಿನಷ್ಟು” ಎಂದು ಹೇಳಿದ್ದಾರೆ.

ಲೇಖಕರಾದ ಶ್ರೀಪಾದ್ ಭಟ್‌ ಅವರು, “ಇಂದು ಜಿ. ರಾಜಶೇಖರ ನಮ್ಮನ್ನು ಅಗಲಿದ್ದಾರೆ. ಅವರ ದೀರ್ಘಕಾಲದ ಅನಾರೋಗ್ಯವನ್ನು ಕಂಡಾಗ ಇದು ಅನಿವಾರ್ಯವಾಗಿತ್ತು. ‘ಹೌದುರೀ ನಾನು ಹೀಗೆಯೇ ಜೀವಿಸಿದ್ದೆ ನೋಡಿ’ ಎಂದು ಎಗ್ಗಿಲ್ಲದೆ ಹೇಳಿಕೊಳ್ಳಬಹುದಂತೆ ಬದುಕಿದ್ದರು ಜಿ.ಆರ್. ಆದರೆ ಅವರು ಬದುಕು ಕೇವಲ ಬದುಕಾಗಿರಲಿಲ್ಲ. ಸಮಾಜದ ತಳಮಳವನ್ನು ತನ್ನೊಳಗಿನ ಅಸ್ವಸ್ಥತೆ ಎಂದು ಸ್ಪಂದಿಸುತ್ತಿದ್ದರು. ತನ್ನ ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಮಾಜದಲ್ಲಿನ ಸಾಮರಸ್ಯ ತುಂಬಾ ಅಗತ್ಯ ಎಂದು ಜಿ.ಆರ್ ನಂಬಿದ್ದರು. ಇಂದು ಫ್ಯಾಸಿಸಂ ಪ್ರಭುತ್ವದ ಸಂದರ್ಭದಲ್ಲಿ ಕಂಡೂ ಕಾಣದಂತೆ, ನನ್ನ ಕಡೆಗೆ ನೋಡಬೇಡಿ ಮಾರಾಯ್ರೆ ಎಂಬಂತೆ ಆತ್ಮವಂಚನೆಯಲ್ಲಿ ಬದುಕುತ್ತಿರುವ ಅನೇಕ ಲೇಖಕರನ್ನು ನೋಡಿದಾಗ ಜಿ. ಆರ್. ಮಹತ್ವ ಅರ್ಥವಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಮುಖವಾಡ ಹಾಕುವಲ್ಲಿ ಸಫಲವಾದ ಜೀವವಿರೋಧಿ ಮೋದಿ ಸರ್ಕಾರ: ಜಿ.ರಾಜಶೇಖರ್

ಲೇಖಕರಾದ ಶ್ರೀನಿವಾಸ್ ಕಾರ್ಕಳ ಅವರು, “ಜಿ ರಾಜಶೇಖರ್ ಓರ್ವ ನಿರ್ಭೀತ ಸಾರ್ವಜನಿಕ ಬುದ್ಧಿಜೀವಿ, ನಾಡಿನ ಸಾಕ್ಷಿಪ್ರಜ್ಞೆ. ಪ್ರಖರ ಚಿಂತಕ, ಲೇಖಕ. ರಾಜ್ಯದಲ್ಲಿ, ಅದರಲ್ಲೂ ಮುಖ್ಯವಾಗಿ ಕರಾವಳಿಯಲ್ಲಿ ಕೊನೆಯುಸಿರಿನ ತನಕವೂ ಕೋಮುವಾದದ ವಿರುದ್ಧ ಹೋರಾಡಿದವರು, ಸೌಹಾರ್ದ, ಸಹಬಾಳ್ವೆಯ ಸಮಾಜವನ್ನು ಕನಸಿದವರು, ಅದರ ನಿರ್ಮಾಣಕ್ಕಾಗಿ ತುಡಿದವರು, ದುಡಿದವರು. ಉಡುಪಿಯಲ್ಲಿ ಕೋಮುವಾದಿಗಳ ಆಟಾಟೋಪದ ವಿರುದ್ಧದ ಪ್ರತಿಭಟನೆ ದಾಖಲಿಸಲು ಸುರಿವ ಜಡಿ ಮಳೆಯಲ್ಲೂ ನಾಲ್ಕೇ ನಾಲ್ಕು ಜನ ಭಿತ್ತಿ ಪತ್ರ ಹಿಡಿದು ನಿಲ್ಲುತ್ತಿದ್ದರೂ ಅದರಲ್ಲಿ ಒಬ್ಬರು ರಾಜಶೇಖರ್ ಅವರಾಗಿರುತ್ತಿದ್ದರು. ಅವರ ನಿರ್ಗಮನ ದೊಡ್ಡ ನಷ್ಟ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ ಮುನೀರ್‌ ಕಾಟಿಪಳ್ಳ ಅವರು, “ವಿದಾಯದ ಹೊತ್ತಲ್ಲ ಇದು. ಮತ್ತಷ್ಟು ಜಗಳ, ವಾಗ್ವಾದ, ಪ್ರೀತಿ ಎಲ್ಲವೂ ಬಾಕಿಯಿತ್ತು. ಸಮ ಸಮಾಜದ ಕಡೆಗಿನ ಹೋರಾಟ ಮುಂದುವರಿಯುತ್ತದೆ. ಹೋಗಿ ಬನ್ನಿ ಕಾಮ್ರೇಡ್, ಲಾಲ್ ಸಲಾಂ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಕನ್ನಡದ ಹಿರಿಯ ವಿಮರ್ಶಕ, ನೇರ-ನಿಷ್ಠುರ ನಡವಳಿಕೆಯ ಪ್ರಖರ ಚಿಂತಕ ಮತ್ತು ಸೌಹಾರ್ದ ಬದುಕಿನ ಹೋರಾಟಗಾರ ಜಿ.ರಾಜಶೇಖರ್ ಅಗಲಿಕೆ ನಮ್ಮೆಲ್ಲರ ಪಾಲಿಗೆ ತುಂಬಿಕೊಳ್ಳಲಾಗದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...