Homeಕರ್ನಾಟಕಹಿರಿಯ ಸಾಹಿತಿ ಚಂಪಾ ನಿಧನ

ಹಿರಿಯ ಸಾಹಿತಿ ಚಂಪಾ ನಿಧನ

- Advertisement -
- Advertisement -

ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾದರು. ಸುಮಾರು 15 ವರ್ಷಗಳ ಹಿಂದೆ ಚಂ‍ಪಾ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬರು ಪುತ್ರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ಅಥವಾ ಹಾವೇರಿ ಸಮೀಪದ ಡೊಂಬರಮತ್ತೂರಿನಲ್ಲಿ ನಡೆಸುವುದೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕೋವಿಡ್‌ ಪ್ರಕರಣಗಳ ಕಾರಣ ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತಾದರು.

ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧನಾ ವೃತ್ತಿ ಆರಂಭಿಸಿದರು.

ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, ೨೬ ದಿನ ೨೫ ರಾತ್ರಿ, ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ‘ಸಂಕ್ರಮಣ’ ಪತ್ರಿಕೆಯ ಮೂಲಕ ಸಾಹಿತ್ಯ ಚರ್ಚೆಗೆ ಹೊಸ ದಿಕ್ಕು ತೋರಿದವರು ಚಂಪಾ. ದಲಿತ,ಬಂಡಾಯ ಸಾಹಿತ್ಯದ ಯುವ ಬರಹಗಾರರಿಗೆ ಸಂಕ್ರಮಣ ವೇದಿಕೆಯಾಗಿತ್ತು.

ನಾಡು ನುಡಿಯ ವಿಚಾರದಲ್ಲಿ ಚಂಪಾ ದಿಟ್ಟ ದನಿ. ಕನ್ನಡ ಸಾಹಿತ್ಯ ಪರಿಷತ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. 2017ರಲ್ಲಿ ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಅವರ ಸಾಹಿತ್ಯ ಸೇವೆಗಾಗಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ.

ಚಂಪಾ ನಿಧನಕ್ಕೆ ಸಂತಾಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. “ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ” ಎಂದು ಮುಖ್ಯಮಂತ್ರಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಟ್ವೀಟ್ ಮಾಡಿ, “ಅನ್ಯಾಯ, ಅಸಮಾನತೆ,‌‌ ಸರ್ವಾಧಿಕಾರದ ವಿರುದ್ದ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದು:ಖಿತನಾಗಿದ್ದೇನೆ. ಇವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಭಾವಪೂರ್ಣ ಶ್ರದ್ಧಾಂಜಲಿ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, “ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ” ಎಂದಿದ್ದಾರೆ.

ಅನೇಕ ಬರಹಗಾರರು ಚಂಪಾ ಅವರ ಕವಿತೆಯನ್ನು ಹಂಚಿಕೊಂಡಿದ್ದಾರೆ.

ಪ್ರಶ್ನೋತ್ತರ


ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.
ಅವರ ಶ್ವಾಸೋಚ್ಛ್ವಾಸದ ಹಳ್ಳ ಕೊಳ್ಳಗಳಲ್ಲಿ
ಹಾವಾಗಿ ಹರಿದಾಡುತ್ತಾರೆ.
ಅವರ ಆಕಾಶದ ತುಂಬ
ಹುಡಿಯಾಗಿ ಅಡರುತ್ತಾರೆ.
ಹಕ್ಕಿಯಾಗಿ ರೆಕ್ಕೆ ಬಿಚ್ಚುತ್ತಾರೆ.
ಚಿಕ್ಕೆಯಾಗಿ ಚಿಮುಕುತ್ತಾರೆ.
ಎಲ್ಲಿಯ ತನಕ?
ಇದ್ದವರು ಸಾಯುವ ತನಕ.
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
(1986)


-ಚಂದ್ರಶೇಖರ ಪಾಟೀಲ


ಕೃಪೆ: -‘ಅರ್ಧ ಸತ್ಯದ ಹುಡುಗಿ’ (ಕವನ ಸಂಕಲನ, 1989)


ಇದನ್ನೂ ಓದಿರಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...