Homeಕರ್ನಾಟಕಹಿರಿಯ ಸಾಹಿತಿ ಚಂಪಾ ನಿಧನ

ಹಿರಿಯ ಸಾಹಿತಿ ಚಂಪಾ ನಿಧನ

- Advertisement -
- Advertisement -

ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾದರು. ಸುಮಾರು 15 ವರ್ಷಗಳ ಹಿಂದೆ ಚಂ‍ಪಾ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬರು ಪುತ್ರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ಅಥವಾ ಹಾವೇರಿ ಸಮೀಪದ ಡೊಂಬರಮತ್ತೂರಿನಲ್ಲಿ ನಡೆಸುವುದೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕೋವಿಡ್‌ ಪ್ರಕರಣಗಳ ಕಾರಣ ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತಾದರು.

ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧನಾ ವೃತ್ತಿ ಆರಂಭಿಸಿದರು.

ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, ೨೬ ದಿನ ೨೫ ರಾತ್ರಿ, ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ‘ಸಂಕ್ರಮಣ’ ಪತ್ರಿಕೆಯ ಮೂಲಕ ಸಾಹಿತ್ಯ ಚರ್ಚೆಗೆ ಹೊಸ ದಿಕ್ಕು ತೋರಿದವರು ಚಂಪಾ. ದಲಿತ,ಬಂಡಾಯ ಸಾಹಿತ್ಯದ ಯುವ ಬರಹಗಾರರಿಗೆ ಸಂಕ್ರಮಣ ವೇದಿಕೆಯಾಗಿತ್ತು.

ನಾಡು ನುಡಿಯ ವಿಚಾರದಲ್ಲಿ ಚಂಪಾ ದಿಟ್ಟ ದನಿ. ಕನ್ನಡ ಸಾಹಿತ್ಯ ಪರಿಷತ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. 2017ರಲ್ಲಿ ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಅವರ ಸಾಹಿತ್ಯ ಸೇವೆಗಾಗಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ.

ಚಂಪಾ ನಿಧನಕ್ಕೆ ಸಂತಾಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. “ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ” ಎಂದು ಮುಖ್ಯಮಂತ್ರಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಟ್ವೀಟ್ ಮಾಡಿ, “ಅನ್ಯಾಯ, ಅಸಮಾನತೆ,‌‌ ಸರ್ವಾಧಿಕಾರದ ವಿರುದ್ದ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದು:ಖಿತನಾಗಿದ್ದೇನೆ. ಇವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಭಾವಪೂರ್ಣ ಶ್ರದ್ಧಾಂಜಲಿ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, “ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ” ಎಂದಿದ್ದಾರೆ.

ಅನೇಕ ಬರಹಗಾರರು ಚಂಪಾ ಅವರ ಕವಿತೆಯನ್ನು ಹಂಚಿಕೊಂಡಿದ್ದಾರೆ.

ಪ್ರಶ್ನೋತ್ತರ


ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.
ಅವರ ಶ್ವಾಸೋಚ್ಛ್ವಾಸದ ಹಳ್ಳ ಕೊಳ್ಳಗಳಲ್ಲಿ
ಹಾವಾಗಿ ಹರಿದಾಡುತ್ತಾರೆ.
ಅವರ ಆಕಾಶದ ತುಂಬ
ಹುಡಿಯಾಗಿ ಅಡರುತ್ತಾರೆ.
ಹಕ್ಕಿಯಾಗಿ ರೆಕ್ಕೆ ಬಿಚ್ಚುತ್ತಾರೆ.
ಚಿಕ್ಕೆಯಾಗಿ ಚಿಮುಕುತ್ತಾರೆ.
ಎಲ್ಲಿಯ ತನಕ?
ಇದ್ದವರು ಸಾಯುವ ತನಕ.
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
(1986)


-ಚಂದ್ರಶೇಖರ ಪಾಟೀಲ


ಕೃಪೆ: -‘ಅರ್ಧ ಸತ್ಯದ ಹುಡುಗಿ’ (ಕವನ ಸಂಕಲನ, 1989)


ಇದನ್ನೂ ಓದಿರಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...