Homeಕರ್ನಾಟಕಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ನಿಧನ

ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ನಿಧನ

- Advertisement -
- Advertisement -

ಕನ್ನಡದ ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಮತ್ತು ದಲಿತ ಕಾವ್ಯ ಚಳವಳಿಯ ಪ್ರಮುಖ ಧ್ವನಿಯಾಗಿದ್ದ ಡಾ. ಮೊಗಳ್ಳಿ ಗಣೇಶ್ ಭಾನುವಾರ (ಅ.5) ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಡಾ. ಮೊಗಳ್ಳಿ ಗಣೇಶ್ ಅವರು 1962ರ ಜುಲೈ 1ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂತೇಮೊಗಳ್ಳಿ ಗ್ರಾಮದಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಹಳ್ಳಿಯಲ್ಲೇ ಪಡೆದ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿದರು. ನಂತರ ಜಾನಪದ ಅಧ್ಯಯನದಲ್ಲಿ ಡಾಕ್ಟರೇಟ್ ಪಡೆದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇರಿ, ಕೊನೆಗೆ ವಿಭಾಗದ ಮುಖ್ಯಸ್ಥರಾದರು. ಅವರ ಸಂಶೋಧನಾ ಕೃತಿ ‘ಆದಿಮ’ ಜಾನಪದ ಚಿಂತನೆಯಲ್ಲಿ ಮಹತ್ವದ ಕೊಡುಗೆಯಾಗಿದೆ.

ಕಥೆ, ಕವನ, ವಿಮರ್ಶೆ ಮತ್ತು ಆತ್ಮಕಥನದಲ್ಲಿ ಗಣೇಶ್ ಅವರು ತಮ್ಮ ಛಾಪು ಮೂಡಿಸಿದ್ದರು. ಅವರ ಮೊದಲ ಕಥಾ ಸಂಕಲನ ‘ಬುಗುರಿ’ (1993) ಪ್ರಜಾವಾಣಿ ದೀಪಾವಳಿ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿತ್ತು. ನಂತರದ ಎರಡು ವರ್ಷಗಳಲ್ಲಿ ಮತ್ತೆ ಎರಡು ಬಾರಿ ಮೊದಲ ಬಹುಮಾನ ಪಡೆದಿದ್ದರು. ‘ಮಣ್ಣು’, ‘ಅತ್ತೆ’, ‘ಭೂಮಿ’, ‘ಕನ್ನೆಮಳೆ’, ‘ದೇವರ ದಾರಿ’ ಗಣೇಶ್ ಅವರ ಇತರ ಕಥಾ ಸಂಕಲನಗಳು. ‘ಮೊಗಳ್ಳಿ ಕಥೆಗಳು’ ಗಣೇಶ್ ಅವರ ಬಹುಪಾಲು ಕಥೆಗಳ ಸಂಕಲನವಾಗಿದೆ. ಇದು ದೇಸಿ ಜೀವನದ ಸೂಕ್ಷ್ಮತೆಗಳನ್ನು ಬಿಂಬಿಸುತ್ತವೆ. ‘ದೇವರ ದಾರಿ’ಗೆ ಡಾ. ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಲಭಿಸಿದೆ.

ಕಾವ್ಯ ಕ್ಷೇತ್ರದಲ್ಲಿ ‘ದೇವಸ್ಮಶಾನ’ ಸಂಕಲನ ಮಹತ್ವದ್ದು. ಇದಕ್ಕೆ ಪು.ತಿ.ನ. ಕಾವ್ಯ ಪ್ರಶಸ್ತಿ ಲಭಿಸಿದೆ. ದಲಿತ ಕಾವ್ಯ ಮತ್ತು ಸಾಹಿತ್ಯಕ್ಕೆ ಗಣೇಶ್ ಅವರ ಕೊಡುಗೆ ಅಪಾರ. ದಲಿತರ ದೌರ್ಜನ್ಯ ಮತ್ತು ಜಾಗತೀಕರಣದ ಪ್ರಭಾವಗಳನ್ನು ಅವರು ಕಾವ್ಯಾತ್ಮಕವಾಗಿ ವ್ಯಕ್ತಪಡಿಸಿದರು. ವೈಚಾರಿಕ ವಿಮರ್ಶೆಯಲ್ಲಿ ‘ದಲಿತರು ಮತ್ತು ಜಾಗತೀಕರಣ (1998) ಮತ್ತು ‘ತಕರಾರು’ ಕೃತಿಗಳು ಮಹತ್ವದ್ದು. ‘ತಕರಾರು’ಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಲಭಿಸಿದೆ.

‘ನಾನೆಂಬುದು ಕಿಂಚಿತ್ತು’ ಆತ್ಮಕಥನದಲ್ಲಿ ಗಣೇಶ್ ಅವರು ದಲಿತ ಅನುಭವಗಳನ್ನು ಸಮಾಜ ವಿಮರ್ಶೆಯೊಂದಿಗೆ ಜೋಡಿಸಿ, ದಲಿತ ಚಳವಳಿಯನ್ನು ಬಲಪಡಿಸಿದರು. ಲಂಕೇಶ್ ಪತ್ರಿಕೆಯಲ್ಲಿ ಬರೆದ ವಿಮರ್ಶೆಗಳು ಮತ್ತು ಕಥೆಗಳು ಅವರನ್ನು ಪ್ರಸಿದ್ಧಿಗೆ ತಂದವು.

ಗಣೇಶ್ ಅವರ ನಿಧನದಿಂದ ಕನ್ನಡದ ಪ್ರಗತಿಪರ ಸಾಹಿತ್ಯ ಲೋಕವು ತನ್ನ ಅತ್ಯಂತ ಪ್ರಭಾವಿ ಧ್ವನಿಯನ್ನು ಕಳೆದುಕೊಂಡಂತಾಗಿದೆ. ಸಾಹಿತಿಗಳು ಸೇರಿದಂತೆ ಅನೇಕ ಪ್ರಮುಖರು ಗಣೇಶ್ ಅವರ ಅಗಲಿಕೆಗೆ ಶೋಕ ವ್ಯಕ್ತಪಡಿಸಿದ್ದಾರೆ.

ಇಂದು ಸಂಜೆ ಮದ್ದೂರಿನ ಮಾದನಾಯಕನಹಳ್ಳಿಯಲ್ಲಿ ಗಣೇಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...