Homeಕರ್ನಾಟಕಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ನಿಧನ

ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ನಿಧನ

- Advertisement -
- Advertisement -

ಕನ್ನಡದ ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಮತ್ತು ದಲಿತ ಕಾವ್ಯ ಚಳವಳಿಯ ಪ್ರಮುಖ ಧ್ವನಿಯಾಗಿದ್ದ ಡಾ. ಮೊಗಳ್ಳಿ ಗಣೇಶ್ ಭಾನುವಾರ (ಅ.5) ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಡಾ. ಮೊಗಳ್ಳಿ ಗಣೇಶ್ ಅವರು 1962ರ ಜುಲೈ 1ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂತೇಮೊಗಳ್ಳಿ ಗ್ರಾಮದಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಹಳ್ಳಿಯಲ್ಲೇ ಪಡೆದ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿದರು. ನಂತರ ಜಾನಪದ ಅಧ್ಯಯನದಲ್ಲಿ ಡಾಕ್ಟರೇಟ್ ಪಡೆದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇರಿ, ಕೊನೆಗೆ ವಿಭಾಗದ ಮುಖ್ಯಸ್ಥರಾದರು. ಅವರ ಸಂಶೋಧನಾ ಕೃತಿ ‘ಆದಿಮ’ ಜಾನಪದ ಚಿಂತನೆಯಲ್ಲಿ ಮಹತ್ವದ ಕೊಡುಗೆಯಾಗಿದೆ.

ಕಥೆ, ಕವನ, ವಿಮರ್ಶೆ ಮತ್ತು ಆತ್ಮಕಥನದಲ್ಲಿ ಗಣೇಶ್ ಅವರು ತಮ್ಮ ಛಾಪು ಮೂಡಿಸಿದ್ದರು. ಅವರ ಮೊದಲ ಕಥಾ ಸಂಕಲನ ‘ಬುಗುರಿ’ (1993) ಪ್ರಜಾವಾಣಿ ದೀಪಾವಳಿ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿತ್ತು. ನಂತರದ ಎರಡು ವರ್ಷಗಳಲ್ಲಿ ಮತ್ತೆ ಎರಡು ಬಾರಿ ಮೊದಲ ಬಹುಮಾನ ಪಡೆದಿದ್ದರು. ‘ಮಣ್ಣು’, ‘ಅತ್ತೆ’, ‘ಭೂಮಿ’, ‘ಕನ್ನೆಮಳೆ’, ‘ದೇವರ ದಾರಿ’ ಗಣೇಶ್ ಅವರ ಇತರ ಕಥಾ ಸಂಕಲನಗಳು. ‘ಮೊಗಳ್ಳಿ ಕಥೆಗಳು’ ಗಣೇಶ್ ಅವರ ಬಹುಪಾಲು ಕಥೆಗಳ ಸಂಕಲನವಾಗಿದೆ. ಇದು ದೇಸಿ ಜೀವನದ ಸೂಕ್ಷ್ಮತೆಗಳನ್ನು ಬಿಂಬಿಸುತ್ತವೆ. ‘ದೇವರ ದಾರಿ’ಗೆ ಡಾ. ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಲಭಿಸಿದೆ.

ಕಾವ್ಯ ಕ್ಷೇತ್ರದಲ್ಲಿ ‘ದೇವಸ್ಮಶಾನ’ ಸಂಕಲನ ಮಹತ್ವದ್ದು. ಇದಕ್ಕೆ ಪು.ತಿ.ನ. ಕಾವ್ಯ ಪ್ರಶಸ್ತಿ ಲಭಿಸಿದೆ. ದಲಿತ ಕಾವ್ಯ ಮತ್ತು ಸಾಹಿತ್ಯಕ್ಕೆ ಗಣೇಶ್ ಅವರ ಕೊಡುಗೆ ಅಪಾರ. ದಲಿತರ ದೌರ್ಜನ್ಯ ಮತ್ತು ಜಾಗತೀಕರಣದ ಪ್ರಭಾವಗಳನ್ನು ಅವರು ಕಾವ್ಯಾತ್ಮಕವಾಗಿ ವ್ಯಕ್ತಪಡಿಸಿದರು. ವೈಚಾರಿಕ ವಿಮರ್ಶೆಯಲ್ಲಿ ‘ದಲಿತರು ಮತ್ತು ಜಾಗತೀಕರಣ (1998) ಮತ್ತು ‘ತಕರಾರು’ ಕೃತಿಗಳು ಮಹತ್ವದ್ದು. ‘ತಕರಾರು’ಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಲಭಿಸಿದೆ.

‘ನಾನೆಂಬುದು ಕಿಂಚಿತ್ತು’ ಆತ್ಮಕಥನದಲ್ಲಿ ಗಣೇಶ್ ಅವರು ದಲಿತ ಅನುಭವಗಳನ್ನು ಸಮಾಜ ವಿಮರ್ಶೆಯೊಂದಿಗೆ ಜೋಡಿಸಿ, ದಲಿತ ಚಳವಳಿಯನ್ನು ಬಲಪಡಿಸಿದರು. ಲಂಕೇಶ್ ಪತ್ರಿಕೆಯಲ್ಲಿ ಬರೆದ ವಿಮರ್ಶೆಗಳು ಮತ್ತು ಕಥೆಗಳು ಅವರನ್ನು ಪ್ರಸಿದ್ಧಿಗೆ ತಂದವು.

ಗಣೇಶ್ ಅವರ ನಿಧನದಿಂದ ಕನ್ನಡದ ಪ್ರಗತಿಪರ ಸಾಹಿತ್ಯ ಲೋಕವು ತನ್ನ ಅತ್ಯಂತ ಪ್ರಭಾವಿ ಧ್ವನಿಯನ್ನು ಕಳೆದುಕೊಂಡಂತಾಗಿದೆ. ಸಾಹಿತಿಗಳು ಸೇರಿದಂತೆ ಅನೇಕ ಪ್ರಮುಖರು ಗಣೇಶ್ ಅವರ ಅಗಲಿಕೆಗೆ ಶೋಕ ವ್ಯಕ್ತಪಡಿಸಿದ್ದಾರೆ.

ಇಂದು ಸಂಜೆ ಮದ್ದೂರಿನ ಮಾದನಾಯಕನಹಳ್ಳಿಯಲ್ಲಿ ಗಣೇಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...