Homeಮುಖಪುಟಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣ ಖಾಸಗಿ ಕಾರ್ಯಕ್ರಮಕ್ಕೆ ಬಳಕೆ

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿ ಪುತ್ರನ ಮಗನ ವಿವಾಹ ಪೂರ್ವ ಕಾರ್ಯಕ್ರಮಗಳ ಹಿನ್ನೆಲೆ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ 10 ದಿನಗಳ ಕಾಲ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಿದೆ ಎಂದು ವರದಿಯಾಗಿದೆ.

ದಿ ವೈರ್ ವರದಿಯ ಪ್ರಕಾರ, ಪಾಕಿಸ್ತಾನದ ಗಡಿಯ ಸಮೀಪದಲ್ಲಿರುವ ಜಾಮ್‌ನಗರ ಪಟ್ಟಣದ ಭಾರತೀಯ ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ. ಇದರಿಂದ ಅಂಬಾನಿ ಮಗನ ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ಆಗಮಿಸುವವರು ಈ ವಿಮಾನ ನಿಲ್ದಾಣಕ್ಕೆ ಬಂದಿಳಿಯಬಹುದು.

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಗುಜರಾತಿ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ನಡೆಯಲಿದೆ. ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ದೇಶ, ವಿದೇಶಗಳಿಂದ ಅತಿಥಿಗಳು ಆಗಮಿಸುತ್ತಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಫೆಬ್ರವರಿ 28 ರಿಂದ ಮಾರ್ಚ್ 4ರ ನಡುವೆ, ಜಾಮ್‌ನಗರ ವಿಮಾನ ನಿಲ್ದಾಣವು ಕನಿಷ್ಠ 150 ವಿಮಾನಗಳನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಇವುಗಳಲ್ಲಿ 50 ವಿದೇಶಿ ಸ್ಥಳಗಳಿಂದ ನೇರವಾಗಿ ವಿಮಾನಗಳು ಆಗಮಿಸಲಿದೆ. ಐದು ದಿನಗಳಲ್ಲಿ ವಿಮಾನ ನಿಲ್ದಾಣದ ಮೂಲಕ 300ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುವ ಸಾಧ್ಯತೆಯಿದೆ ಎಂದು ಜಾಮ್‌ನಗರದ ವಿಮಾನ ನಿಲ್ದಾಣದ ನಿರ್ದೇಶಕ ಡಿ.ಕೆ. ಸಿಂಗ್ ತಿಳಿಸಿರುವುದಾಗಿ ದಿ ಹಿಂದೂ ಬಿಸಿನೆಸ್‌ಲೈನ್‌ ವರದಿ ಮಾಡಿದೆ.

ಅನಂತ್ ಅಂಬಾನಿಯ ವಿವಾಹ ಕಾರ್ಯಕ್ರಮದಲ್ಲಿ ಮುಂಬೈ, ದೆಹಲಿ ಸೇರಿದಂತೆ ದೇಶ ವಿದೇಶಗಳಿಂದ ಸುಮಾರು 2 ಸಾವಿರ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ. ಇವರೆಲ್ಲೂ ಜಾಮ್‌ನಗರ ವಿಮಾನ ನಿಲ್ದಾಣವನ್ನೇ ಆಶ್ರಯಿಸಲಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಮೇಲಿನ ಒತ್ತಡ ಹಲವು ಪಟ್ಟು ಹೆಚ್ಚಾಗಿಲಿದೆ. ಪ್ರಸ್ತುತ ವಿಮಾನ ನಿಲ್ಧಾಣ ಸರಾಸರಿ ಮೂರು ನಿಗದಿತ ಮತ್ತು ಐದು ನಿಗದಿತವಲ್ಲದ ವಿಮಾನಗಳ ಪ್ರತಿದಿನ ಸ್ವೀಕರಿಸುತ್ತಿದೆ ಎಂದು ವರದಿ ತಿಳಿಸಿದೆ.

“ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ, ಹಣಕಾಸು ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯವು ವಿಮಾನ ನಿಲ್ದಾಣದಲ್ಲಿ ಕಸ್ಟಮ್, ಇಮಿಗ್ರೇಷನ್ ಮತ್ತು ಕ್ವಾರಂಟೈನ್ (CIQ)ಸೌಲಭ್ಯವನ್ನು ಸ್ಥಾಪಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ” ಎಂದು ದಿ ಹಿಂದೂ ವರದಿ ಮಾಡಿದೆ.

ಅಂಬಾನಿ ಮಗನ ಮದುವೆ ಹಿನ್ನೆಲೆ ಭಾರತೀಯ ವಾಯುಪಡೆ ತನ್ನ ಸೂಕ್ಷ್ಮ ತಾಂತ್ರಿಕ ಪ್ರದೇಶಕ್ಕೆ ಖಾಸಗಿ ವಿಮಾನಗಳನ್ನು ಅನುಮತಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಅತಿಥಿಗಳನ್ನು ಸ್ವೀಕರಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗಾತ್ರವನ್ನು ವಿಸ್ತರಿಸಿದೆ. ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ಪ್ರಸ್ತುತ ಇರುವ ಪ್ರಯಾಣಿಕ ಕಟ್ಟಡ 475 ಚದರ ಕಿ.ಮೀ ನಿಂದ 900 ಚದರ ಮೀಟರ್‌ ವರೆಗೆ ಗಾತ್ರವನ್ನು ಹೊಂದಿದೆ. ಇದು ಕನಿಷ್ಠ 180 ಮತ್ತು ಗರಿಷ್ಠ ಸುಮಾರು 360 ಪ್ರಯಾಣಿಕರನ್ನು ಸ್ವೀಕರಿಸುವ ಸಾಮಾರ್ಥ್ಯ ಹೊಂದಿದ.

ವಿಮಾನ ನಿಲ್ಧಾನ ವಿಸ್ತರಣೆ ಕಾರ್ಯವನ್ನು ಬಹಳ ಹಿಂದೆಯೇ ಪ್ರಾರಂಭಿಸಲಾಗಿತ್ತು. ಆದರೆ, ಅಂಬಾನಿ ಮಗನ ಮದುವೆ ಹಿನ್ನೆಲೆ ಕಾಮಗಾರಿ ತ್ವರಿತಗೊಳಿಸಲಾಯಿತು ಎಂದು ಗೌಪ್ಯ ಮೂಲವನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

“ಈಗಿರುವ 16 ಮಂದಿಯೊಂದಿಗೆ ಮೂವತ್ತೈದು ಗೃಹರಕ್ಷಕ ಸಿಬ್ಬಂದಿಯನ್ನು ವಿಮಾನ ನಿಲ್ಧಾನದಲ್ಲಿ ನಿಯೋಜಿಸಲಾಗಿದೆ. ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು 35 ರಿಂದ 70ಕ್ಕೆ ದ್ವಿಗುಣಗೊಳಿಸಿದೆ. ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು ತಮ್ಮ ಸಿಬ್ಬಂದಿಯ ಸಂಖ್ಯೆಯನ್ನು 65ರಿಂದ 125ಕ್ಕೆ ಹೆಚ್ಚಿಸಿದ್ದಾರೆ” ಎಂದು ದಿ ಹಿಂದೂ ಒತ್ತಿ ಹೇಳಿದೆ.

ವಿವಾಹಪೂರ್ವ ಕಾರ್ಯಕ್ರಮಕ್ಕೆ ಬರುವ ಗಣ್ಯರನ್ನು ಬರಮಾಡಿಕೊಳ್ಳಲು ರಕ್ಷಣಾ ವಿಮಾನ ನಿಲ್ದಾಣದ ಬಳಿ ವಿಶೇಷ ವ್ಯವಸ್ಥೆ ಮಾಡಲು ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್‌ಗೆ ಅನುಮತಿ ನೀಡಲಾಗಿದೆ ಎಂದು ದಿ ಹಿಂದೂ ಬಿಸಿನೆಸ್‌ಲೈನ್ ವರದಿ ತಿಳಿಸಿದೆ.

ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಶ್ರೀಮಂತ ಭಾರತೀಯರಿಗೆ ‘ಭಾರತದಲ್ಲಿ ವಿವಾಹವಾಗಲು’ ಮನವಿ ಮಾಡಿದ್ದರು. ಅವರ ಸರ್ಕಾರವು ಅಂಬಾನಿ ಪುತ್ರನ ಮದುವೆಗಾಗಿ ಜಾಮ್‌ನಗರ ರಕ್ಷಣಾ ವಿಮಾನ ನಿಲ್ದಾಣದಲ್ಲಿ ನಡೆಸುತ್ತಿದ್ದ ವಿಶೇಷ ಸಿದ್ಧತೆಗಳನ್ನು ಉದ್ದೇಶಿಸಿ ಈ ಮನವಿ ಮಾಡಲಾಗಿತ್ತಾ ಎಂದು ಮಾಧ್ಯಮಗಳು ಪ್ರಶ್ನೆ ಎತ್ತಿವೆ.

ಡಿಸೆಂಬರ್ 29 ರಂದು ರಾಜಸ್ಥಾನದ ದೇವಸ್ಥಾನದಲ್ಲಿ ಅಂಬಾನಿ ಪುತ್ರನ ನಿಶ್ಚಿತಾರ್ಥ ನಡೆದೆ. ಜುಲೈ 12, 2024ರಂದು ವಿವಾಹ ನಡೆಲಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...