Homeಮುಖಪುಟಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣ ಖಾಸಗಿ ಕಾರ್ಯಕ್ರಮಕ್ಕೆ ಬಳಕೆ

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿ ಪುತ್ರನ ಮಗನ ವಿವಾಹ ಪೂರ್ವ ಕಾರ್ಯಕ್ರಮಗಳ ಹಿನ್ನೆಲೆ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ 10 ದಿನಗಳ ಕಾಲ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಿದೆ ಎಂದು ವರದಿಯಾಗಿದೆ.

ದಿ ವೈರ್ ವರದಿಯ ಪ್ರಕಾರ, ಪಾಕಿಸ್ತಾನದ ಗಡಿಯ ಸಮೀಪದಲ್ಲಿರುವ ಜಾಮ್‌ನಗರ ಪಟ್ಟಣದ ಭಾರತೀಯ ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ. ಇದರಿಂದ ಅಂಬಾನಿ ಮಗನ ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ಆಗಮಿಸುವವರು ಈ ವಿಮಾನ ನಿಲ್ದಾಣಕ್ಕೆ ಬಂದಿಳಿಯಬಹುದು.

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಗುಜರಾತಿ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ನಡೆಯಲಿದೆ. ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ದೇಶ, ವಿದೇಶಗಳಿಂದ ಅತಿಥಿಗಳು ಆಗಮಿಸುತ್ತಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಫೆಬ್ರವರಿ 28 ರಿಂದ ಮಾರ್ಚ್ 4ರ ನಡುವೆ, ಜಾಮ್‌ನಗರ ವಿಮಾನ ನಿಲ್ದಾಣವು ಕನಿಷ್ಠ 150 ವಿಮಾನಗಳನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಇವುಗಳಲ್ಲಿ 50 ವಿದೇಶಿ ಸ್ಥಳಗಳಿಂದ ನೇರವಾಗಿ ವಿಮಾನಗಳು ಆಗಮಿಸಲಿದೆ. ಐದು ದಿನಗಳಲ್ಲಿ ವಿಮಾನ ನಿಲ್ದಾಣದ ಮೂಲಕ 300ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುವ ಸಾಧ್ಯತೆಯಿದೆ ಎಂದು ಜಾಮ್‌ನಗರದ ವಿಮಾನ ನಿಲ್ದಾಣದ ನಿರ್ದೇಶಕ ಡಿ.ಕೆ. ಸಿಂಗ್ ತಿಳಿಸಿರುವುದಾಗಿ ದಿ ಹಿಂದೂ ಬಿಸಿನೆಸ್‌ಲೈನ್‌ ವರದಿ ಮಾಡಿದೆ.

ಅನಂತ್ ಅಂಬಾನಿಯ ವಿವಾಹ ಕಾರ್ಯಕ್ರಮದಲ್ಲಿ ಮುಂಬೈ, ದೆಹಲಿ ಸೇರಿದಂತೆ ದೇಶ ವಿದೇಶಗಳಿಂದ ಸುಮಾರು 2 ಸಾವಿರ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ. ಇವರೆಲ್ಲೂ ಜಾಮ್‌ನಗರ ವಿಮಾನ ನಿಲ್ದಾಣವನ್ನೇ ಆಶ್ರಯಿಸಲಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಮೇಲಿನ ಒತ್ತಡ ಹಲವು ಪಟ್ಟು ಹೆಚ್ಚಾಗಿಲಿದೆ. ಪ್ರಸ್ತುತ ವಿಮಾನ ನಿಲ್ಧಾಣ ಸರಾಸರಿ ಮೂರು ನಿಗದಿತ ಮತ್ತು ಐದು ನಿಗದಿತವಲ್ಲದ ವಿಮಾನಗಳ ಪ್ರತಿದಿನ ಸ್ವೀಕರಿಸುತ್ತಿದೆ ಎಂದು ವರದಿ ತಿಳಿಸಿದೆ.

“ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ, ಹಣಕಾಸು ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯವು ವಿಮಾನ ನಿಲ್ದಾಣದಲ್ಲಿ ಕಸ್ಟಮ್, ಇಮಿಗ್ರೇಷನ್ ಮತ್ತು ಕ್ವಾರಂಟೈನ್ (CIQ)ಸೌಲಭ್ಯವನ್ನು ಸ್ಥಾಪಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ” ಎಂದು ದಿ ಹಿಂದೂ ವರದಿ ಮಾಡಿದೆ.

ಅಂಬಾನಿ ಮಗನ ಮದುವೆ ಹಿನ್ನೆಲೆ ಭಾರತೀಯ ವಾಯುಪಡೆ ತನ್ನ ಸೂಕ್ಷ್ಮ ತಾಂತ್ರಿಕ ಪ್ರದೇಶಕ್ಕೆ ಖಾಸಗಿ ವಿಮಾನಗಳನ್ನು ಅನುಮತಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಅತಿಥಿಗಳನ್ನು ಸ್ವೀಕರಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗಾತ್ರವನ್ನು ವಿಸ್ತರಿಸಿದೆ. ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ಪ್ರಸ್ತುತ ಇರುವ ಪ್ರಯಾಣಿಕ ಕಟ್ಟಡ 475 ಚದರ ಕಿ.ಮೀ ನಿಂದ 900 ಚದರ ಮೀಟರ್‌ ವರೆಗೆ ಗಾತ್ರವನ್ನು ಹೊಂದಿದೆ. ಇದು ಕನಿಷ್ಠ 180 ಮತ್ತು ಗರಿಷ್ಠ ಸುಮಾರು 360 ಪ್ರಯಾಣಿಕರನ್ನು ಸ್ವೀಕರಿಸುವ ಸಾಮಾರ್ಥ್ಯ ಹೊಂದಿದ.

ವಿಮಾನ ನಿಲ್ಧಾನ ವಿಸ್ತರಣೆ ಕಾರ್ಯವನ್ನು ಬಹಳ ಹಿಂದೆಯೇ ಪ್ರಾರಂಭಿಸಲಾಗಿತ್ತು. ಆದರೆ, ಅಂಬಾನಿ ಮಗನ ಮದುವೆ ಹಿನ್ನೆಲೆ ಕಾಮಗಾರಿ ತ್ವರಿತಗೊಳಿಸಲಾಯಿತು ಎಂದು ಗೌಪ್ಯ ಮೂಲವನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

“ಈಗಿರುವ 16 ಮಂದಿಯೊಂದಿಗೆ ಮೂವತ್ತೈದು ಗೃಹರಕ್ಷಕ ಸಿಬ್ಬಂದಿಯನ್ನು ವಿಮಾನ ನಿಲ್ಧಾನದಲ್ಲಿ ನಿಯೋಜಿಸಲಾಗಿದೆ. ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು 35 ರಿಂದ 70ಕ್ಕೆ ದ್ವಿಗುಣಗೊಳಿಸಿದೆ. ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು ತಮ್ಮ ಸಿಬ್ಬಂದಿಯ ಸಂಖ್ಯೆಯನ್ನು 65ರಿಂದ 125ಕ್ಕೆ ಹೆಚ್ಚಿಸಿದ್ದಾರೆ” ಎಂದು ದಿ ಹಿಂದೂ ಒತ್ತಿ ಹೇಳಿದೆ.

ವಿವಾಹಪೂರ್ವ ಕಾರ್ಯಕ್ರಮಕ್ಕೆ ಬರುವ ಗಣ್ಯರನ್ನು ಬರಮಾಡಿಕೊಳ್ಳಲು ರಕ್ಷಣಾ ವಿಮಾನ ನಿಲ್ದಾಣದ ಬಳಿ ವಿಶೇಷ ವ್ಯವಸ್ಥೆ ಮಾಡಲು ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್‌ಗೆ ಅನುಮತಿ ನೀಡಲಾಗಿದೆ ಎಂದು ದಿ ಹಿಂದೂ ಬಿಸಿನೆಸ್‌ಲೈನ್ ವರದಿ ತಿಳಿಸಿದೆ.

ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಶ್ರೀಮಂತ ಭಾರತೀಯರಿಗೆ ‘ಭಾರತದಲ್ಲಿ ವಿವಾಹವಾಗಲು’ ಮನವಿ ಮಾಡಿದ್ದರು. ಅವರ ಸರ್ಕಾರವು ಅಂಬಾನಿ ಪುತ್ರನ ಮದುವೆಗಾಗಿ ಜಾಮ್‌ನಗರ ರಕ್ಷಣಾ ವಿಮಾನ ನಿಲ್ದಾಣದಲ್ಲಿ ನಡೆಸುತ್ತಿದ್ದ ವಿಶೇಷ ಸಿದ್ಧತೆಗಳನ್ನು ಉದ್ದೇಶಿಸಿ ಈ ಮನವಿ ಮಾಡಲಾಗಿತ್ತಾ ಎಂದು ಮಾಧ್ಯಮಗಳು ಪ್ರಶ್ನೆ ಎತ್ತಿವೆ.

ಡಿಸೆಂಬರ್ 29 ರಂದು ರಾಜಸ್ಥಾನದ ದೇವಸ್ಥಾನದಲ್ಲಿ ಅಂಬಾನಿ ಪುತ್ರನ ನಿಶ್ಚಿತಾರ್ಥ ನಡೆದೆ. ಜುಲೈ 12, 2024ರಂದು ವಿವಾಹ ನಡೆಲಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....