Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...