Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...