Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...