Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...