Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...