Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...