Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...