Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...