Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎನ್ನುತ್ತಿವೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳಲ್ಲಿ ಈ ಮೈತ್ರಿ ಕಾಣೆಯಾಗಿದೆ.

ಹೌದು, ಬಿಜೆಪಿಯ ಭಿತ್ತಿ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಏಕವ್ಯಕ್ತಿ ಚಿತ್ರ ಮಾತ್ರ ಕಾಣಿಸಿಕೊಂಡಿದೆ. ಈ ಕಡೆ ಪತ್ರಿಕೆಗಳಲ್ಲಿ, ಕರಪತ್ರಗಳಲ್ಲಿ ಜೆಡಿಯು ನೀಡಿರುವ ನಿತೀಶ್ ಕುಮಾರ್ ಅವರ ಜಾಹೀರಾತುಗಳಲ್ಲಿ ಪಿಎಂ ಮೋದಿ ಅಥವಾ ಬಿಜೆಪಿ ಬಗ್ಗೆ ಉಲ್ಲೇಖವಿಲ್ಲ. ಇಂತಹ ಬೆಳವಣಿಗೆಗಳು ಪ್ರತಿಪಕ್ಷಗಳಿಗೆ ಲೇವಡಿ ಮಾಡಲು ಆಹಾರ ಒದಗಿಸಿದೆ.

ಶನಿವಾರ ಬಿಹಾರದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಎಲ್ಲಿಯೂ  ಜಾಹೀರಾತಿನಲ್ಲಿ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಶ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಜಾಹೀರಾತುಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅನೇಕ ಮಂದಿ ವ್ಯಂಗ್ಯವಾಡಿದ್ದಾರೆ.

 

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

0p55fkrg

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಕಾರ್ಯಕ್ರಮದ ದಿನದಂದು ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, 2010 ರಲ್ಲಿ, ಪಾಟ್ನಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಂದರ್ಭದಲ್ಲಿ ಜಾಹೀರಾತಿನಲ್ಲಿ ನಿತೀಶ್‌ ಕುಮಾರ್ ಮತ್ತು ಮೋದಿ ಜತೆಗಿರುವ ಚಿತ್ರವೊಂದು ಪ್ರಕಟವಾಗಿತ್ತು. ಅಂದು ಕೋಪಗೊಂಡಿದ್ದ ನಿತೀಶ್ ಕುಮಾರ್‌ ಎಫ್‌ಐಆರ್ ಸಹ ದಾಖಲಿಸಿದ್ದರು.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆಯ ಬ್ಯಾನರ್‌ಗಳು ಬಿಹಾರದಲ್ಲಿ ಪ್ರಕಟವಾಗಿದ್ದವು.  2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್‌ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...