Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎನ್ನುತ್ತಿವೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳಲ್ಲಿ ಈ ಮೈತ್ರಿ ಕಾಣೆಯಾಗಿದೆ.

ಹೌದು, ಬಿಜೆಪಿಯ ಭಿತ್ತಿ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಏಕವ್ಯಕ್ತಿ ಚಿತ್ರ ಮಾತ್ರ ಕಾಣಿಸಿಕೊಂಡಿದೆ. ಈ ಕಡೆ ಪತ್ರಿಕೆಗಳಲ್ಲಿ, ಕರಪತ್ರಗಳಲ್ಲಿ ಜೆಡಿಯು ನೀಡಿರುವ ನಿತೀಶ್ ಕುಮಾರ್ ಅವರ ಜಾಹೀರಾತುಗಳಲ್ಲಿ ಪಿಎಂ ಮೋದಿ ಅಥವಾ ಬಿಜೆಪಿ ಬಗ್ಗೆ ಉಲ್ಲೇಖವಿಲ್ಲ. ಇಂತಹ ಬೆಳವಣಿಗೆಗಳು ಪ್ರತಿಪಕ್ಷಗಳಿಗೆ ಲೇವಡಿ ಮಾಡಲು ಆಹಾರ ಒದಗಿಸಿದೆ.

ಶನಿವಾರ ಬಿಹಾರದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಎಲ್ಲಿಯೂ  ಜಾಹೀರಾತಿನಲ್ಲಿ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಶ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಜಾಹೀರಾತುಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅನೇಕ ಮಂದಿ ವ್ಯಂಗ್ಯವಾಡಿದ್ದಾರೆ.

 

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

0p55fkrg

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಕಾರ್ಯಕ್ರಮದ ದಿನದಂದು ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, 2010 ರಲ್ಲಿ, ಪಾಟ್ನಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಂದರ್ಭದಲ್ಲಿ ಜಾಹೀರಾತಿನಲ್ಲಿ ನಿತೀಶ್‌ ಕುಮಾರ್ ಮತ್ತು ಮೋದಿ ಜತೆಗಿರುವ ಚಿತ್ರವೊಂದು ಪ್ರಕಟವಾಗಿತ್ತು. ಅಂದು ಕೋಪಗೊಂಡಿದ್ದ ನಿತೀಶ್ ಕುಮಾರ್‌ ಎಫ್‌ಐಆರ್ ಸಹ ದಾಖಲಿಸಿದ್ದರು.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆಯ ಬ್ಯಾನರ್‌ಗಳು ಬಿಹಾರದಲ್ಲಿ ಪ್ರಕಟವಾಗಿದ್ದವು.  2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್‌ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...