Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎನ್ನುತ್ತಿವೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳಲ್ಲಿ ಈ ಮೈತ್ರಿ ಕಾಣೆಯಾಗಿದೆ.

ಹೌದು, ಬಿಜೆಪಿಯ ಭಿತ್ತಿ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಏಕವ್ಯಕ್ತಿ ಚಿತ್ರ ಮಾತ್ರ ಕಾಣಿಸಿಕೊಂಡಿದೆ. ಈ ಕಡೆ ಪತ್ರಿಕೆಗಳಲ್ಲಿ, ಕರಪತ್ರಗಳಲ್ಲಿ ಜೆಡಿಯು ನೀಡಿರುವ ನಿತೀಶ್ ಕುಮಾರ್ ಅವರ ಜಾಹೀರಾತುಗಳಲ್ಲಿ ಪಿಎಂ ಮೋದಿ ಅಥವಾ ಬಿಜೆಪಿ ಬಗ್ಗೆ ಉಲ್ಲೇಖವಿಲ್ಲ. ಇಂತಹ ಬೆಳವಣಿಗೆಗಳು ಪ್ರತಿಪಕ್ಷಗಳಿಗೆ ಲೇವಡಿ ಮಾಡಲು ಆಹಾರ ಒದಗಿಸಿದೆ.

ಶನಿವಾರ ಬಿಹಾರದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಎಲ್ಲಿಯೂ  ಜಾಹೀರಾತಿನಲ್ಲಿ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಶ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಜಾಹೀರಾತುಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅನೇಕ ಮಂದಿ ವ್ಯಂಗ್ಯವಾಡಿದ್ದಾರೆ.

 

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

0p55fkrg

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಕಾರ್ಯಕ್ರಮದ ದಿನದಂದು ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, 2010 ರಲ್ಲಿ, ಪಾಟ್ನಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಂದರ್ಭದಲ್ಲಿ ಜಾಹೀರಾತಿನಲ್ಲಿ ನಿತೀಶ್‌ ಕುಮಾರ್ ಮತ್ತು ಮೋದಿ ಜತೆಗಿರುವ ಚಿತ್ರವೊಂದು ಪ್ರಕಟವಾಗಿತ್ತು. ಅಂದು ಕೋಪಗೊಂಡಿದ್ದ ನಿತೀಶ್ ಕುಮಾರ್‌ ಎಫ್‌ಐಆರ್ ಸಹ ದಾಖಲಿಸಿದ್ದರು.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆಯ ಬ್ಯಾನರ್‌ಗಳು ಬಿಹಾರದಲ್ಲಿ ಪ್ರಕಟವಾಗಿದ್ದವು.  2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್‌ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

0
"ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?" "ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು,...