Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...