Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...