Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...