Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...