Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...