Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...