Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

- Advertisement -
- Advertisement -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ.

ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ.

ಶೇ. 1ರಷ್ಟು ಒಳ ಮೀಸಲಾತಿ ಪಡೆಯುವವರೆಗೂ, ‘ಎ’ ಗುಂಪಿನಲ್ಲಿ ಸೇರಿಸುವವರೆಗೂ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಅಲೆಮಾರಿಗಳನ್ನು ಮೀಸಲಾತಿಯಿಂದ ವಂಚಿಸುವ ಅನ್ಯಾಯ ಮಾಡಿದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಪ್ರತಿಭಟನಾ ಹಕ್ಕೊತ್ತಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕ ಹೇಳಿಕೆ ನೀಡಿರುವ ಅಲೆಮಾರಿ ಸಮುದಾಯದ ಮುಖಂಡ ಚಾವಡೆ ಲೋಕೇಶ್‌ ಗೋಸಂಗಿ, “ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌ ಹೋರಾಟಕ್ಕೆ ಬರುವಾಗ ಟೆಂಟ್‌ಗಳು, ಕೌದಿಗಳನ್ನು ತನ್ನಿ. ಫ್ರೀಡಂ ಪಾರ್ಕ್‌ನಲ್ಲಿ ಟೆಂಟ್‌ ಹಾಕಿ ಇಲ್ಲಿಯೇ ಊಟ ಮಾಡಿಕೊಂಡು ಜೀವನ ಮಾಡೋಣ. ತಂಗಡಗಿಯಂತಹ ಸಚಿವರಿಗೆ ಹಸಿದಿದ್ದರೆ ಅವರಿಗೂ ಊಟ ಹಾಕೋಣ. ನಾವು ನ್ಯಾಯ ಪಡೆದೇ ವಾಪಸ್‌ ಹೋಗೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಪ್ರೊ. ಎ.ಎಸ್ ಪ್ರಭಾಕರ್ ಹೇಳಿಕೆ ನೀಡಿ ” ಮುಖ್ಯಮಂತ್ರಿಗಳ ಬಗ್ಗೆ ನಮಗೆ ಭರವಸೆ ಇತ್ತು. ಆದರೆ, ಅವರ ಮಾತಿನಲ್ಲಿ ವಿಷಾದ, ಹತಾಶೆ ಇತ್ತು. ಅವರಂತಹ ಗಟ್ಟಿ ಸೈದ್ಧಾಂತಿಕ ರಾಜಕಾರಣಿ ಇವತ್ತು ಹತಾಶೆಗೆ ಒಳಗಾಗಿದ್ದಾರೆ ಎಂದರೆ ದೊಡ್ಡ ದೊಡ್ಡ ಲಾಬಿಗಳು ಅವರನ್ನು ಮಣಿಸುತ್ತಿವೆ” ಎಂದಿದ್ದಾರೆ.

“ನಾವು ಹೋರಾಟ ಮುಂದುವರೆಸಬೇಕು. ಆದರೆ, ಅಲೆಮಾರಿಗಳು ಶೇ. 90ರಷ್ಟು ಜನರು ಕೂಲಿ ಕಾರ್ಮಿಕರು. ಅವರು ಬೆಂಗಳೂರಿಗೆ ಬರುವುದು ಬಹಳ ಕಷ್ಟ. ಹಾಗಾಗಿ, ನಮ್ಮ ನಮ್ಮ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆಸೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

“ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ತೀರ್ಪಿನ ದೊಡ್ಡ ಬಲವಿದೆ. ಸಂವಿಧಾನದ ಬಲವಿದೆ. ಕೋರ್ಟ್‌ಗೆ ಹೋಗುವುದು ಸೇರಿದಂತೆ ಇನ್ನೂ ಯಾವ ಯಾವ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತೇವೆ. ನಮ್ಮವರು ಯಾರೂ ಕೂಡ ಹತಾಶರಾಗಬಾರದು. 101 ಸಮುದಾಯಗಳು ನಮ್ಮ ಸಹೋದರರು. ಇದೊಂದು ಸಣ್ಣ ದಾಯಾದಿ ಕಲಹ ಅಷ್ಟೇ. ನಾವು ಯಾರನ್ನೂ ದೂಷಿಸಬಾರದು. ಐಕ್ಯತೆ ಬಹಳ ಮುಖ್ಯ. ನಾವು ಅಲೆಮಾರಿಗಳು ಈ ವ್ಯವಸ್ಥೆಯ ಅಂತರಾತ್ಮವನ್ನು ಕಲಕುತ್ತೇವೆ. ನಮ್ಮ ಅನ್ನ ಕಸಿದುಕೊಂಡ ಪ್ರತಿಯೊಬ್ಬರ ಹೃದಯವನ್ನು ಕಾಡುತ್ತೇವೆ” ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಹೇಳಿಕೆ ನೀಡಿ “ನಾವು ಸೋತಿದ್ದೇವೆ ಎಂಬುದು ಸುಳ್ಳು. ದಯವಿಟ್ಟು ಯಾರೂ ನಿರಾಶರಾಗಬೇಡಿ. ನಾವು 11ನೇ ತಾರೀಖು ಹೋರಾಟಕ್ಕೆ ಕೂತಾಗ ಕೆಲವರು ಮುಖ್ಯವಾಗಿ ರಾಜಕಾರಣಿಗಳು ಇದು ಆಗುವ ಮಾತಲ್ಲ, ಹೋರಾಟ ಕೈಬಿಡಿ ಎಂದರು. ಮಳೆ, ಗಾಳಿ, ಚಳಿ ಎಂದು ಹೆದರಿಸಿದರು, ಜನ ಬರುವುದಿಲ್ಲ ಎಂದರು. ಆದರೆ, ಕೊನೆಗೆ ಏನಾಯಿತು. ಸರ್ಕಾರದ ಮೇಲೆ ಒತ್ತಡ ತಂದು ಒಳ ಮೀಸಲಾತಿ ಜಾರಿಗೊಳಿಸಿದ್ದೀವಿ. ಆದರೆ, 6%  ನಮಗೆ ಸಮಾಧಾನ ತಂದಿಲ್ಲ. ನಾವು ಸಂತಸಪಟ್ಟಿಲ್ಲ. ನಾವು 35 ವರ್ಷ ಹೋರಾಡಿದ್ದು ಇದಕ್ಕೆ ಮಾತ್ರವೇ? ಅಲೆಮಾರಿಗಳನ್ನು ಮರೆತುಬಿಡಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ನಾಗಮೋಹನ್‌ ದಾಸ್‌ರವರು ಸಹ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂಬ ನೋವು ಅವರನ್ನು ಕಾಡುತ್ತಿದೆ. ಅವರು ವೇತನ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಹೋರಾಟ ಮುಂದುವರೆಸೋಣ. ಹೋರಾಟದ ಟೆಂಟ್‌ ಮುಂದುವರೆಯುತ್ತದೆ. ಪ್ರತಿದಿನ 50 ಜನ ಇದ್ದು ಹೋರಾಟ ಮುಂದುವರೆಸೋಣ. ಬಾಬಾ ಸಾಹೇಬರು ಹೇಳಿದಂತೆ ಮಹಾತ್ಮರು ಬರುವರು, ಮಹಾತ್ಮರು ಹೋಗುವರು. ಮಂತ್ರಿಗಳು ಬಂದು ಹೋಗುವರು ಯಾರೂ ಉದ್ದಾರ ಮಾಡುವುದಿಲ್ಲ. ನಿಮ್ಮ ಉದ್ಧಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವೇ ನಮಗೆ ಹಕ್ಕು ಕೊಡಿಸುತ್ತದೆ” ಎಂದಿದ್ದಾರೆ.

“ಪೂನಾ ಒಪ್ಪಂದ ಆದಾಗ ಬಾಬಾ ಸಾಹೇಬರು ಸೋತರೆ? ಹತಾಶರಾಗಿ ಕೈಬಿಟ್ಟರೆ? ಇಲ್ಲ ಅವರು ಹೋರಾಟ ಮುಂದುವರೆಸಿ ನಮಗೆಲ್ಲ ಮೀಸಲಾತಿ ಕೊಡಲಿಲ್ಲವೇ? ಅದೇ ರೀತಿ ಒಳ ಮೀಸಲಾತಿಗಾಗಿಯೂ ಯಾವ ಸರ್ಕಾರ, ಯಾವ ರಾಜಕಾರಣಿಗಳು ಮಾಡದ್ದನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮೂಲಕ ಜಾರಿ ಮಾಡಿಸಿಕೊಂಡಿದ್ದೀವಿ. 370ಜೆ, ಒಳ ಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟ ಸಹ ಮಾಡೋಣ. 1% ಮೀಸಲಾತಿ ನಮಗೆ ದಕ್ಕೆ ದಕ್ಕುತ್ತದೆ. ನಮ್ಮ ಪರವಾಗಿ ಪ್ರೊ.ಹರಗೋಪಾಲ್‌ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿ ಇಲ್ಲಿಗೆ ಬರುತ್ತಿದ್ದಾರೆ. ಮೀಸಲಾತಿ ನಮ್ಮ ಭಿಕ್ಷೆಯಲ್ಲ, ಹಕ್ಕು ಎಂದು ಸಾರಿದ್ದಾರೆ. ಪ್ರೊ.ಸಾಯಿಬಾಬಾರವರು ಎಷ್ಟು ಹೋರಾಟ ಮಾಡಿದ್ದಾರೆ? ಪಾಪಾ ಅವರನ್ನು ಜೈಲಿಗೆ ಹಾಕಿದರೂ ಹೋರಾಟ ಬಿಡಲಿಲ್ಲ. ಹಾಗಾಗಿ ನಾವು ಹತಾಶರಾಗುವುದು ಬೇಡ. ನಿಮ್ಮ ಕೈಮುಗಿದು ಹೇಳುತ್ತೇನೆ, ನಿರಾಶರಾಗಬೇಡಿ, ಜೊತೆಗೂಡಿ ಹೋರಾಡೋಣ ಬನ್ನಿ” ಎಂದು ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಸಣ್ಣ ಮಾರಣ್ಣ ಹೇಳಿಕೆ ನೀಡಿ, “ಈ ರಾಜ್ಯದ ದುರ್ಬಲ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ನಾವು ಅವರನ್ನು ಧೀಮಂತ ನಾಯಕ ಎಂದುಕೊಂಡಿದ್ದೆವು. ಆದರೆ, ಇವತ್ತು ಕೆಲವರ ಬಲಾಢ್ಯರ ಒತ್ತಡಕ್ಕೆ ರಾಜ್ಯದ ಮುಖ್ಯಮಂತ್ರಿ ಮಣಿದಿದ್ದಾರೆ. ಆದರೆ, ನಾವು ಕುಗ್ಗಬಾರದು, ಹೋರಾಟ ಮುಂದುವರೆಸೋಣ” ಎಂದಿದ್ದಾರೆ.

ಇನ್ನೊಬ್ಬರು ಒಳ ಮೀಸಲಾತಿ ಹೋರಾಟಗಾರ ವೀರೇಶ್‌ ಹೇಳಿಕೆ ನೀಡಿ “ನನಗೆ ಮಾತೇ ತೋಚುತ್ತಿಲ್ಲ. ನನ್ನ ಎರಡು ವರ್ಷದ ಅವಧಿಯಲ್ಲಿ ಕುಟುಂಬದಿಂದ ಹೊರಗಿದ್ದು ಒಳ ಮೀಸಲಾತಿಯ ಹೋರಾಟಕ್ಕೆ ಮೀಸಲಿಟ್ಟಿದ್ದೆ. ಈ ಹಿಂದೆಯೇ ನಾಗಮೋಹನ್‌ ದಾಸ್‌ರವರಿಗೆ 3% ಮೀಸಲಾತಿ ಕೊಡಬೇಕೆಂದು ಮನವಿ ಕೊಟ್ಟಿದ್ದೆವು. ಅವರು ಸೂಕ್ತ ದತ್ತಾಂಶದೊಂದಿಗೆ ಉತ್ತಮ ವರ್ಗೀಕರಣ ಮಾಡಿ ವರದಿ ನೀಡಿದ್ದರು. 59 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಮಾಡಿ 1% ಮೀಸಲಾತಿ ನಿಗದಿ ಮಾಡಿದ್ದರು. ಆದರೆ, ಸರ್ಕಾರ ಅಲೆಮಾರಿಗಳಿಗೆ ಅನ್ಯಾಯ ಮಾಡಿ ನಮ್ಮಿಂದ 1% ಕಿತ್ತುಕೊಂಡಿದೆ. ನಮಗೆ ಶಿಕ್ಷಣ, ಉದ್ಯೋಗ, ಮನೆ, ಬಂಡವಾಳ ಇಲ್ಲದೇ ನಮಗೆ ಮರಣಶಾಸನ ಬರೆಯಲಾಗಿದೆ. ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿದು ನಮ್ಮ ಕತ್ತು ಕುಯ್ದಿದ್ದಾರೆ. ನಮ್ಮನ್ನು ಮತ್ತೆ ಜೀತಕ್ಕೆ, ಭಿಕ್ಷೆಗೆ ಕಳಿಸುತ್ತಿದ್ದಾರೆ. ಮಾನವೀಯತೆ, ಮನುಷ್ಯತ್ವ ಸರ್ಕಾರಕ್ಕೆ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ ಕದ ತಟ್ಟಿ ನ್ಯಾಯ ಪಡೆಯೋಣ” ಎಂದು ಬೇಸರ ಹೊರ ಹಾಕಿದ್ದಾರೆ.

“1% ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲೆಮಾರಿಗಳಿಗೆ ವಿಶೇಷ ಮಂಡಳಿ ರಚನೆ ಮಾಡಬಹುದು, ಅನುದಾನ ಕೊಡಬಹುದು ಇತ್ಯಾದಿ ಹೇಳಿದ್ದಾರೆ. ಅದಕ್ಕೆ ನಾವು ಒಪ್ಪಿಲ್ಲ. ನಮಗೆ ವರ್ಗೀಕರಣವೇ ಬಹಳ ಮುಖ್ಯ ಎಂದು ಪಟ್ಟು ಹಿಡಿದೆವು. ಕಟ್ಟಕಡೆಯ ಅಲೆಮಾರಿ ಜನರು ನೋವಿನಲ್ಲಿರುವಾಗ ಖುಷಿಯ ಮಾತೆಲ್ಲಿ?” ಎಂದು ಒಳ ಮೀಸಲಾತಿ ಹೋರಾಟಗಾರ ಬಾಲಗುರುಮೂರ್ತಿ ಪ್ರಶ್ನಿಸಿದ್ದಾರೆ.

ಆಗಸ್ಟ್ 19ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್‌ ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಅಂಗೀಕರಿಸಿರುವ ಸರ್ಕಾರ, ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ ಘೋಷಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ 1 ಶೇ. ಮೀಸಲಾತಿ ಪ್ರಸ್ತಾಪಿಸಿದ್ದರೂ, ಸರ್ಕಾರ ಅವರನ್ನು ಕೊಲಂಬೋ ಜೊತೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ.

ದೂರುದಾರನನ್ನು ಬಂಧಿಸಲಾಗಿದೆ, ಹೆಚ್ಚಿನ ಮಾಹಿತಿ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...