Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

- Advertisement -
- Advertisement -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ.

ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ.

ಶೇ. 1ರಷ್ಟು ಒಳ ಮೀಸಲಾತಿ ಪಡೆಯುವವರೆಗೂ, ‘ಎ’ ಗುಂಪಿನಲ್ಲಿ ಸೇರಿಸುವವರೆಗೂ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಅಲೆಮಾರಿಗಳನ್ನು ಮೀಸಲಾತಿಯಿಂದ ವಂಚಿಸುವ ಅನ್ಯಾಯ ಮಾಡಿದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಪ್ರತಿಭಟನಾ ಹಕ್ಕೊತ್ತಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕ ಹೇಳಿಕೆ ನೀಡಿರುವ ಅಲೆಮಾರಿ ಸಮುದಾಯದ ಮುಖಂಡ ಚಾವಡೆ ಲೋಕೇಶ್‌ ಗೋಸಂಗಿ, “ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌ ಹೋರಾಟಕ್ಕೆ ಬರುವಾಗ ಟೆಂಟ್‌ಗಳು, ಕೌದಿಗಳನ್ನು ತನ್ನಿ. ಫ್ರೀಡಂ ಪಾರ್ಕ್‌ನಲ್ಲಿ ಟೆಂಟ್‌ ಹಾಕಿ ಇಲ್ಲಿಯೇ ಊಟ ಮಾಡಿಕೊಂಡು ಜೀವನ ಮಾಡೋಣ. ತಂಗಡಗಿಯಂತಹ ಸಚಿವರಿಗೆ ಹಸಿದಿದ್ದರೆ ಅವರಿಗೂ ಊಟ ಹಾಕೋಣ. ನಾವು ನ್ಯಾಯ ಪಡೆದೇ ವಾಪಸ್‌ ಹೋಗೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಪ್ರೊ. ಎ.ಎಸ್ ಪ್ರಭಾಕರ್ ಹೇಳಿಕೆ ನೀಡಿ ” ಮುಖ್ಯಮಂತ್ರಿಗಳ ಬಗ್ಗೆ ನಮಗೆ ಭರವಸೆ ಇತ್ತು. ಆದರೆ, ಅವರ ಮಾತಿನಲ್ಲಿ ವಿಷಾದ, ಹತಾಶೆ ಇತ್ತು. ಅವರಂತಹ ಗಟ್ಟಿ ಸೈದ್ಧಾಂತಿಕ ರಾಜಕಾರಣಿ ಇವತ್ತು ಹತಾಶೆಗೆ ಒಳಗಾಗಿದ್ದಾರೆ ಎಂದರೆ ದೊಡ್ಡ ದೊಡ್ಡ ಲಾಬಿಗಳು ಅವರನ್ನು ಮಣಿಸುತ್ತಿವೆ” ಎಂದಿದ್ದಾರೆ.

“ನಾವು ಹೋರಾಟ ಮುಂದುವರೆಸಬೇಕು. ಆದರೆ, ಅಲೆಮಾರಿಗಳು ಶೇ. 90ರಷ್ಟು ಜನರು ಕೂಲಿ ಕಾರ್ಮಿಕರು. ಅವರು ಬೆಂಗಳೂರಿಗೆ ಬರುವುದು ಬಹಳ ಕಷ್ಟ. ಹಾಗಾಗಿ, ನಮ್ಮ ನಮ್ಮ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆಸೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

“ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ತೀರ್ಪಿನ ದೊಡ್ಡ ಬಲವಿದೆ. ಸಂವಿಧಾನದ ಬಲವಿದೆ. ಕೋರ್ಟ್‌ಗೆ ಹೋಗುವುದು ಸೇರಿದಂತೆ ಇನ್ನೂ ಯಾವ ಯಾವ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತೇವೆ. ನಮ್ಮವರು ಯಾರೂ ಕೂಡ ಹತಾಶರಾಗಬಾರದು. 101 ಸಮುದಾಯಗಳು ನಮ್ಮ ಸಹೋದರರು. ಇದೊಂದು ಸಣ್ಣ ದಾಯಾದಿ ಕಲಹ ಅಷ್ಟೇ. ನಾವು ಯಾರನ್ನೂ ದೂಷಿಸಬಾರದು. ಐಕ್ಯತೆ ಬಹಳ ಮುಖ್ಯ. ನಾವು ಅಲೆಮಾರಿಗಳು ಈ ವ್ಯವಸ್ಥೆಯ ಅಂತರಾತ್ಮವನ್ನು ಕಲಕುತ್ತೇವೆ. ನಮ್ಮ ಅನ್ನ ಕಸಿದುಕೊಂಡ ಪ್ರತಿಯೊಬ್ಬರ ಹೃದಯವನ್ನು ಕಾಡುತ್ತೇವೆ” ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಹೇಳಿಕೆ ನೀಡಿ “ನಾವು ಸೋತಿದ್ದೇವೆ ಎಂಬುದು ಸುಳ್ಳು. ದಯವಿಟ್ಟು ಯಾರೂ ನಿರಾಶರಾಗಬೇಡಿ. ನಾವು 11ನೇ ತಾರೀಖು ಹೋರಾಟಕ್ಕೆ ಕೂತಾಗ ಕೆಲವರು ಮುಖ್ಯವಾಗಿ ರಾಜಕಾರಣಿಗಳು ಇದು ಆಗುವ ಮಾತಲ್ಲ, ಹೋರಾಟ ಕೈಬಿಡಿ ಎಂದರು. ಮಳೆ, ಗಾಳಿ, ಚಳಿ ಎಂದು ಹೆದರಿಸಿದರು, ಜನ ಬರುವುದಿಲ್ಲ ಎಂದರು. ಆದರೆ, ಕೊನೆಗೆ ಏನಾಯಿತು. ಸರ್ಕಾರದ ಮೇಲೆ ಒತ್ತಡ ತಂದು ಒಳ ಮೀಸಲಾತಿ ಜಾರಿಗೊಳಿಸಿದ್ದೀವಿ. ಆದರೆ, 6%  ನಮಗೆ ಸಮಾಧಾನ ತಂದಿಲ್ಲ. ನಾವು ಸಂತಸಪಟ್ಟಿಲ್ಲ. ನಾವು 35 ವರ್ಷ ಹೋರಾಡಿದ್ದು ಇದಕ್ಕೆ ಮಾತ್ರವೇ? ಅಲೆಮಾರಿಗಳನ್ನು ಮರೆತುಬಿಡಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ನಾಗಮೋಹನ್‌ ದಾಸ್‌ರವರು ಸಹ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂಬ ನೋವು ಅವರನ್ನು ಕಾಡುತ್ತಿದೆ. ಅವರು ವೇತನ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಹೋರಾಟ ಮುಂದುವರೆಸೋಣ. ಹೋರಾಟದ ಟೆಂಟ್‌ ಮುಂದುವರೆಯುತ್ತದೆ. ಪ್ರತಿದಿನ 50 ಜನ ಇದ್ದು ಹೋರಾಟ ಮುಂದುವರೆಸೋಣ. ಬಾಬಾ ಸಾಹೇಬರು ಹೇಳಿದಂತೆ ಮಹಾತ್ಮರು ಬರುವರು, ಮಹಾತ್ಮರು ಹೋಗುವರು. ಮಂತ್ರಿಗಳು ಬಂದು ಹೋಗುವರು ಯಾರೂ ಉದ್ದಾರ ಮಾಡುವುದಿಲ್ಲ. ನಿಮ್ಮ ಉದ್ಧಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವೇ ನಮಗೆ ಹಕ್ಕು ಕೊಡಿಸುತ್ತದೆ” ಎಂದಿದ್ದಾರೆ.

“ಪೂನಾ ಒಪ್ಪಂದ ಆದಾಗ ಬಾಬಾ ಸಾಹೇಬರು ಸೋತರೆ? ಹತಾಶರಾಗಿ ಕೈಬಿಟ್ಟರೆ? ಇಲ್ಲ ಅವರು ಹೋರಾಟ ಮುಂದುವರೆಸಿ ನಮಗೆಲ್ಲ ಮೀಸಲಾತಿ ಕೊಡಲಿಲ್ಲವೇ? ಅದೇ ರೀತಿ ಒಳ ಮೀಸಲಾತಿಗಾಗಿಯೂ ಯಾವ ಸರ್ಕಾರ, ಯಾವ ರಾಜಕಾರಣಿಗಳು ಮಾಡದ್ದನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮೂಲಕ ಜಾರಿ ಮಾಡಿಸಿಕೊಂಡಿದ್ದೀವಿ. 370ಜೆ, ಒಳ ಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟ ಸಹ ಮಾಡೋಣ. 1% ಮೀಸಲಾತಿ ನಮಗೆ ದಕ್ಕೆ ದಕ್ಕುತ್ತದೆ. ನಮ್ಮ ಪರವಾಗಿ ಪ್ರೊ.ಹರಗೋಪಾಲ್‌ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿ ಇಲ್ಲಿಗೆ ಬರುತ್ತಿದ್ದಾರೆ. ಮೀಸಲಾತಿ ನಮ್ಮ ಭಿಕ್ಷೆಯಲ್ಲ, ಹಕ್ಕು ಎಂದು ಸಾರಿದ್ದಾರೆ. ಪ್ರೊ.ಸಾಯಿಬಾಬಾರವರು ಎಷ್ಟು ಹೋರಾಟ ಮಾಡಿದ್ದಾರೆ? ಪಾಪಾ ಅವರನ್ನು ಜೈಲಿಗೆ ಹಾಕಿದರೂ ಹೋರಾಟ ಬಿಡಲಿಲ್ಲ. ಹಾಗಾಗಿ ನಾವು ಹತಾಶರಾಗುವುದು ಬೇಡ. ನಿಮ್ಮ ಕೈಮುಗಿದು ಹೇಳುತ್ತೇನೆ, ನಿರಾಶರಾಗಬೇಡಿ, ಜೊತೆಗೂಡಿ ಹೋರಾಡೋಣ ಬನ್ನಿ” ಎಂದು ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಸಣ್ಣ ಮಾರಣ್ಣ ಹೇಳಿಕೆ ನೀಡಿ, “ಈ ರಾಜ್ಯದ ದುರ್ಬಲ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ನಾವು ಅವರನ್ನು ಧೀಮಂತ ನಾಯಕ ಎಂದುಕೊಂಡಿದ್ದೆವು. ಆದರೆ, ಇವತ್ತು ಕೆಲವರ ಬಲಾಢ್ಯರ ಒತ್ತಡಕ್ಕೆ ರಾಜ್ಯದ ಮುಖ್ಯಮಂತ್ರಿ ಮಣಿದಿದ್ದಾರೆ. ಆದರೆ, ನಾವು ಕುಗ್ಗಬಾರದು, ಹೋರಾಟ ಮುಂದುವರೆಸೋಣ” ಎಂದಿದ್ದಾರೆ.

ಇನ್ನೊಬ್ಬರು ಒಳ ಮೀಸಲಾತಿ ಹೋರಾಟಗಾರ ವೀರೇಶ್‌ ಹೇಳಿಕೆ ನೀಡಿ “ನನಗೆ ಮಾತೇ ತೋಚುತ್ತಿಲ್ಲ. ನನ್ನ ಎರಡು ವರ್ಷದ ಅವಧಿಯಲ್ಲಿ ಕುಟುಂಬದಿಂದ ಹೊರಗಿದ್ದು ಒಳ ಮೀಸಲಾತಿಯ ಹೋರಾಟಕ್ಕೆ ಮೀಸಲಿಟ್ಟಿದ್ದೆ. ಈ ಹಿಂದೆಯೇ ನಾಗಮೋಹನ್‌ ದಾಸ್‌ರವರಿಗೆ 3% ಮೀಸಲಾತಿ ಕೊಡಬೇಕೆಂದು ಮನವಿ ಕೊಟ್ಟಿದ್ದೆವು. ಅವರು ಸೂಕ್ತ ದತ್ತಾಂಶದೊಂದಿಗೆ ಉತ್ತಮ ವರ್ಗೀಕರಣ ಮಾಡಿ ವರದಿ ನೀಡಿದ್ದರು. 59 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಮಾಡಿ 1% ಮೀಸಲಾತಿ ನಿಗದಿ ಮಾಡಿದ್ದರು. ಆದರೆ, ಸರ್ಕಾರ ಅಲೆಮಾರಿಗಳಿಗೆ ಅನ್ಯಾಯ ಮಾಡಿ ನಮ್ಮಿಂದ 1% ಕಿತ್ತುಕೊಂಡಿದೆ. ನಮಗೆ ಶಿಕ್ಷಣ, ಉದ್ಯೋಗ, ಮನೆ, ಬಂಡವಾಳ ಇಲ್ಲದೇ ನಮಗೆ ಮರಣಶಾಸನ ಬರೆಯಲಾಗಿದೆ. ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿದು ನಮ್ಮ ಕತ್ತು ಕುಯ್ದಿದ್ದಾರೆ. ನಮ್ಮನ್ನು ಮತ್ತೆ ಜೀತಕ್ಕೆ, ಭಿಕ್ಷೆಗೆ ಕಳಿಸುತ್ತಿದ್ದಾರೆ. ಮಾನವೀಯತೆ, ಮನುಷ್ಯತ್ವ ಸರ್ಕಾರಕ್ಕೆ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ ಕದ ತಟ್ಟಿ ನ್ಯಾಯ ಪಡೆಯೋಣ” ಎಂದು ಬೇಸರ ಹೊರ ಹಾಕಿದ್ದಾರೆ.

“1% ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲೆಮಾರಿಗಳಿಗೆ ವಿಶೇಷ ಮಂಡಳಿ ರಚನೆ ಮಾಡಬಹುದು, ಅನುದಾನ ಕೊಡಬಹುದು ಇತ್ಯಾದಿ ಹೇಳಿದ್ದಾರೆ. ಅದಕ್ಕೆ ನಾವು ಒಪ್ಪಿಲ್ಲ. ನಮಗೆ ವರ್ಗೀಕರಣವೇ ಬಹಳ ಮುಖ್ಯ ಎಂದು ಪಟ್ಟು ಹಿಡಿದೆವು. ಕಟ್ಟಕಡೆಯ ಅಲೆಮಾರಿ ಜನರು ನೋವಿನಲ್ಲಿರುವಾಗ ಖುಷಿಯ ಮಾತೆಲ್ಲಿ?” ಎಂದು ಒಳ ಮೀಸಲಾತಿ ಹೋರಾಟಗಾರ ಬಾಲಗುರುಮೂರ್ತಿ ಪ್ರಶ್ನಿಸಿದ್ದಾರೆ.

ಆಗಸ್ಟ್ 19ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್‌ ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಅಂಗೀಕರಿಸಿರುವ ಸರ್ಕಾರ, ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ ಘೋಷಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ 1 ಶೇ. ಮೀಸಲಾತಿ ಪ್ರಸ್ತಾಪಿಸಿದ್ದರೂ, ಸರ್ಕಾರ ಅವರನ್ನು ಕೊಲಂಬೋ ಜೊತೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ.

ದೂರುದಾರನನ್ನು ಬಂಧಿಸಲಾಗಿದೆ, ಹೆಚ್ಚಿನ ಮಾಹಿತಿ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....