Homeಕರ್ನಾಟಕಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: 'ಕರ್ನಾಟಕವೊಂದೇ' ಅಭಿಯಾನಕ್ಕೆ ವ್ಯಾಪಕ ಬೆಂಬಲ

ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು.

- Advertisement -
- Advertisement -

ಒಕ್ಕಲಿಗ ಸಮುದಾಯಕ್ಕೆ ಸೂಕ್ತ ಮೀಸಲಾತಿ ನೀಡದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂಬ ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ ಎತ್ತಿರುವ ಕನ್ನಡಿಗರು ನಡೆಸುತ್ತಿರುವ ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮೊನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ರಾಜ್ಯಕ್ಕೆ ಬರುತ್ತಿರುವ ಆದಾಯದಲ್ಲಿ ಒಕ್ಕಲಿಗರ ಪಾಲು ಶೇ.60 ರಷ್ಟಿದೆ. ಹಲವರು ಸರ್ಕಾರಕ್ಕೆ ಭೂದಾನ ಮಾಡಿದ್ದಾರೆ. ಆದರೆ ಒಕ್ಕಲಿಗರಿಗೆ ಕೇವಲ 4% ಮೀಸಲಾತಿ ಸಿಗುತ್ತಿದೆ. ಮೀಸಲಾತಿ ಹೆಚ್ಚಳ ಮಾಡಿದಿದ್ದರೆ ಹಳೇ ಮೈಸೂರು ಪ್ರಾಂತ್ಯದ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡಬೇಕಾಗುತ್ತದೆ” ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಇದಕ್ಕೆ ರಾಜ್ಯದ ಜಾತಿ, ಧರ್ಮ ಲೆಕ್ಕಿಸದೇ ಸಾವಿರಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು, ಮುಂದು, ಎಂದೆಂದೂ, ಕರ್ನಾಟಕವೊಂದೇ. ಒಡಕು, ತರಲಿದೆ ಕೆಡಕು ಎಂದು ಅಭಿಪ್ರಾಯಪಟ್ಟಿರುವ ಕನ್ನಡಿಗರು #ಕರ್ನಾಟಕವೊಂದೇ ಹ್ಯಾಸ್‌ಟ್ಯಾಗ್ ಬಳಸಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕೆ ಮತ್ತಷ್ಟು ಸಾವಿರ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಪ್ರತಿಕ್ರಿಯಿಸಿ “ಏಕೀಕರಣಕ್ಕಾಗಿ ಜಾತಿ, ಧರ್ಮ,‌ ಮತ, ಪಂಥ ಬೇಧವಿಲ್ಲದೆ ನಮ್ಮ ಹಿರಿಯರು ತ್ಯಾಗ, ಸಮರ್ಪಣೆಯಿಂದ ಒಂದಾಗಿ ಹೋರಾಡಿದ ಪರಿಣಾಮವಾಗಿ ಕರ್ನಾಟಕ ಒಂದು ರಾಜ್ಯವಾಗಿದೆ. ಇದನ್ನು ಒಡೆಯುವ ಮಾತನ್ನು ಯಾರೇ, ಯಾವ ಉದ್ದೇಶಕ್ಕೇ ಆಡಿದರೂ ಖಂಡಿಸುತ್ತೇನೆ. ಒಡಕು ಮಾತುಗಳು ಯಾವ ಮೂಲೆಯಿಂದ ಬಂದರೂ ತಪ್ಪು” ಎಂದಿದ್ದಾರೆ.

“ಕರ್ನಾಟಕದ ಒಗ್ಗಟ್ಟಿರುವುದೇ ಕನ್ನಡತನದಲ್ಲಿ, ಇಂದು ಅಖಂಡ ಕರ್ನಾಟಕವನ್ನ ಜಾತಿಯ ಹೆಸರಲ್ಲಿ ಒಡೆಯುವ ಸಂಚು ರೂಪುಗೊಳ್ತಿದೆ, ಹಳೆ ಮೈಸೂರು-ಉತ್ತರ ಕರ್ನಾಟಕ, ಲಿಂಗಾಯತ-ಒಕ್ಕಲಿಗ ಹೀಗೆ ವಾದಗಳು ಹುಟ್ಟಿಕೊಳ್ತಿವೆ. ಇವುಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಬೇಕು. ನೆನಪಿರಲಿ ಒಂದೇ ಒಂದೇ #ಕನ್ನಡವೊಂದೇ #ಕರ್ನಾಟಕವೊಂದೇ” ಎಂದು ಸಚಿನ್ ಗ್ಯಾಂಗರ್ ಟ್ವೀಟ್ ಮಾಡಿದ್ದಾರೆ.

2025ಕ್ಕೆ ಲೋಕಸಭೆಯ ಸದಸ್ಯರ ಸಂಖ್ಯೆ ಹೊಸ ಜನಗಣತಿಯ ಪ್ರಕಾರ ಆದಲ್ಲಿ ಕರ್ನಾಟಕಕ್ಕೆ ಈಗಿರುವ ಲೋಕಸಭೆ ಸದಸ್ಯರ ಸಂಖ್ಯೆ ಐದರಷ್ಟು ಕುಸಿಯಲಿದೆ. ಇಂತಹ ಹೊತ್ತಲ್ಲಿ ಕರ್ನಾಟಕದ ದನಿ ಉಳಿಸಿಕೊಳ್ಳಬೇಕು ಅನ್ನುವ ಆಸೆಯಿರುವವರು ಯಾವ ಕಾರಣಕ್ಕೂ ರಾಜ್ಯ ವಿಭಜನೆ ಸಮರ್ಥಿಸಬಾರದು ಎಂದು ವಸಂತ ಶೆಟ್ಟಿಯವರು ಒತ್ತಾಯಿಸಿದ್ದಾರೆ.

“ದೇಶವನ್ನು ಧರ್ಮದ ಹೆಸರಿನಲ್ಲಿ ಮಾನಸಿಕವಾಗಿ ಒಡೆದಿದ್ದಾಯ್ತು. ಈಗ ಜಾತಿಗಳ ಹೆಸರಲ್ಲಿ ರಾಜ್ಯ ಒಡೆಯುವ ಹುನ್ನಾರ. ಇದು ಯಾರ ಚಿತಾವಣೆ, ಈ ಕುತಂತ್ರಗಳೆಲ್ಲ ಯಾವ ಗರಡಿಯಿಂದ ಎದ್ದು ಬರುತ್ತವೆ ಎಂಬುದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ಕನ್ನಡಿಗರು ದಡ್ಡರಲ್ಲ. ಹಿರಿಯರು ಕಟ್ಟಿದ ನಾಡಿದು, ಯಾರದೋ ಕುಯುಕ್ತಿಗಳಿಗೆ ಒಡೆಯಲು ಬಿಡೆವು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ಎಸ್.ಸಿ ತಿಳಿಸಿದ್ದಾರೆ.

ಇನ್ನು ಅಜಯ್ ರಾಜ್‌ ಎನ್ನುವವರು ಪ್ರತ್ಯೇಕ ರಾಜ್ಯದ ಪರ ಟ್ವೀಟ್ ಮಾಡಿದ್ದಾರೆ. “ಆಡಳಿತತ್ಮಕ ದೃಷ್ಟಿಯಿಂದ ಹೊಸ ರಾಜ್ಯ ಉದಾಯಿಸಿದರೆ ಒಳ್ಳೇದು ಕಣ್ರಪ್ಪ. ಅಭಿವೃದ್ಧಿಯೂ ಆಗ್ತದೆ ಹಾಗೂ ಜನ ಪ್ರತಿನಿಧಿಗಳಿಂದ ಉತ್ತರದಾಯಿತ್ವವೂ ಸಿಗುತ್ತೆ. ನಾವು ಭಾವನಾತ್ಮಕವಾಗಿ ಯೋಚಿಸಿದಷ್ಟು ನಮಗೆ ನಷ್ಟ ಕಣ್ರಪ್ಪ. 14 ಜಿಲ್ಲೆಗಳನ್ನೊಳಗೊಂಡ ಕೇರಳ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಕಣ್ರಪ್ಪ. #ಮೈಸೂರು_ರಾಜ್ಯ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶ್ರುತಿ ಎಚ್.ಎಂ ರವರು “ಒಡೆದು ಆಳುವುದರಿಂದ ಅದ್ಯಾವ ರೀತಿ ಅಭಿವೃದ್ಧಿ ಆಗುತ್ತೆ ಸ್ವಲ್ಪ ವಿವರಿಸಿ. ಅಖಂಡವಾಗಿದ್ದ ತೆಲುಗು ರಾಜ್ಯ ಆಂಧ್ರ ತೆಲಂಗಾಣಗಳಾಗಿ ಒಡೆದ ಮೇಲೆ ಯಾವ ರೀತಿ ಅಭಿವೃದ್ಧಿ ಆಗಿದೆ ಹೇಳಿ. #ಕರ್ನಾಟಕವೊಂದೇ” ಎಂದಿದ್ದಾರೆ. ಅಲ್ಲದೆ ಮೈಸೂರು ಕೇವಲ ಒಕ್ಕಲಿಗರ ಸ್ವತ್ತಲ್ಲ, ಉತ್ತರದ ಜಿಲ್ಲೆಗಳು ಲಿಂಗಾಯತರ ಸ್ವತ್ತಲ್ಲ. ಇಂತಹ ಎಷ್ಟೇ ಮನೆಮುರುಕರು ಹಾರಾಡಿದರೂ, ಎಂದಿಗೂ #ಕರ್ನಾಟಕವೊಂದೆ #KarnatakaVonde ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ, ಮುಂದೆ ಕೂಡ ಈ ಒಗ್ಗಟ್ಟು ಬೇಕೇ ಬೇಕು. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರಾಗಿರಬೇಕು. #ಕರ್ನಾಟಕವೊಂದೇ ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ರಾಜ್ಯ ಒಡೆಯುವ ವಿಷಯ ಯಾರೇ ತಂದರೂ ಅವರನ್ನ ಗಟ್ಟಿಯಾಗಿ ವಿರೋಧ ಮಾಡಿ. ಅದು ಸಂಘಿಗಳೇ ಆಗಿರಲಿ, ಕಾಂಗ್ರೆಸ್‌ನವರೇ ಆಗಿರಲಿ, ಜೆಡಿಎಸ್‌ನವರೇ ಆಗಿರಲಿ, ಒಕ್ಕಲಿಗರೇ ಆಗಿರಲಿ, ಲಿಂಗಾಯತರೇ ಆಗಿರಲಿ, ಅಹಿಂದದವರೇ ಆಗಿರಲಿ, ತುಳುವರೇ ಆಗಿರಲಿ. ಯಾರೇ ಕನ್ನಡ ನಾಡಿನ ಒಗ್ಗಟ್ಟನ್ನು ವಿರೋಧ ಮಾಡಿದರೆ ಅಂತವರನ್ನೆಲ್ಲ ವಿರೋಧ ಮಾಡಿ. #ಕರ್ನಾಟಕವೊಂದೇ ಎಂದು ಗಣೇಶ್ ಚೇತನ್‌ರವರು ಕರೆ ನೀಡಿದ್ದಾರೆ.

ಕೀಲಾರ ನಾಗೇಗೌಡ ಶಿವಲಿಂಗಯ್ಯನವರು ಪ್ರತಿಕ್ರಿಯಿಸಿ “ಕಾವಿ ಬಟ್ಟೆ ತೊಟ್ಟವರಿಗೆ ಸೋಷಿಯಲ್ ಸೈನ್ಸ್ ಗೊತ್ತಿರಲ್ಲ, ಅಧ್ಯಾತ್ಮ ಗೊತ್ತಿದಿಯ ಅಂದರೆ ಬ್ರಾಹ್ಮಣರ ಅಧ್ಯಾತ್ಮನ ನಮ್ಮೆಲ್ಲರ ಅಧ್ಯಾತ್ಮ ಅಂದುಕೊಂಡು ಅವರುಗಳು ಮಂಗ ಆಗುವುದಲ್ಲದೇ ನಮ್ಮನ್ನು ಮಂಗ ಮಾಡುತ್ತಾರೆ. ಈಗಿರುವ 3A ಮೀಸಲಾತಿ ಏನಿದೆ ಅಷ್ಟು ಸಾಕು ಅಂತ ನನ್ನ ಅಭಿಪ್ರಾಯ” ಎಂದಿದ್ದಾರೆ.

“ಮೊದಲು ಚುಂಚನಗಿರಿ ಮಠದ ಶಾಲೆ-ಕಾಲೇಜು-ಆಸ್ಪತ್ರೆಗಳಲ್ಲಿ ಬಡ ಒಕ್ಕಲಿಗರಿಗೆ ಉಚಿತ ಶಿಕ್ಷಣ-ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಿ, ಮಠದ ಸಮುದಾಯ ಭವನಗಳು ಉಚಿತವಾಗಿ ಸಿಗುವಂತಾಗಲಿ.‌ ಮೊದಲು ಮಠವು ಬಡ ಒಕ್ಕಲಿಗರಿಗೆ ಬದುಕಲು ವ್ಯವಸ್ಥೆ ಗಳನ್ನು ಕಲ್ಪಿಸಿಕೊಡಲಿ, ಅದು ಬಿಟ್ಟು ಜಾತಿಯ ಹೆಸರಲ್ಲಿ ಮಠವೇ ಎಲ್ಲಾ ಕಡೆ ಜಾಗ, ಹಣ, ಅನುದಾನ ಪಡೆದು ಬೆಳೆಯುವುದು ಆಗಿದೆ” ಎಂದು ರಾಜೇಂದ್ರ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...