Homeಕರ್ನಾಟಕಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: 'ಕರ್ನಾಟಕವೊಂದೇ' ಅಭಿಯಾನಕ್ಕೆ ವ್ಯಾಪಕ ಬೆಂಬಲ

ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು.

- Advertisement -
- Advertisement -

ಒಕ್ಕಲಿಗ ಸಮುದಾಯಕ್ಕೆ ಸೂಕ್ತ ಮೀಸಲಾತಿ ನೀಡದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂಬ ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ ಎತ್ತಿರುವ ಕನ್ನಡಿಗರು ನಡೆಸುತ್ತಿರುವ ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮೊನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ರಾಜ್ಯಕ್ಕೆ ಬರುತ್ತಿರುವ ಆದಾಯದಲ್ಲಿ ಒಕ್ಕಲಿಗರ ಪಾಲು ಶೇ.60 ರಷ್ಟಿದೆ. ಹಲವರು ಸರ್ಕಾರಕ್ಕೆ ಭೂದಾನ ಮಾಡಿದ್ದಾರೆ. ಆದರೆ ಒಕ್ಕಲಿಗರಿಗೆ ಕೇವಲ 4% ಮೀಸಲಾತಿ ಸಿಗುತ್ತಿದೆ. ಮೀಸಲಾತಿ ಹೆಚ್ಚಳ ಮಾಡಿದಿದ್ದರೆ ಹಳೇ ಮೈಸೂರು ಪ್ರಾಂತ್ಯದ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡಬೇಕಾಗುತ್ತದೆ” ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಇದಕ್ಕೆ ರಾಜ್ಯದ ಜಾತಿ, ಧರ್ಮ ಲೆಕ್ಕಿಸದೇ ಸಾವಿರಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು, ಮುಂದು, ಎಂದೆಂದೂ, ಕರ್ನಾಟಕವೊಂದೇ. ಒಡಕು, ತರಲಿದೆ ಕೆಡಕು ಎಂದು ಅಭಿಪ್ರಾಯಪಟ್ಟಿರುವ ಕನ್ನಡಿಗರು #ಕರ್ನಾಟಕವೊಂದೇ ಹ್ಯಾಸ್‌ಟ್ಯಾಗ್ ಬಳಸಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕೆ ಮತ್ತಷ್ಟು ಸಾವಿರ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಪ್ರತಿಕ್ರಿಯಿಸಿ “ಏಕೀಕರಣಕ್ಕಾಗಿ ಜಾತಿ, ಧರ್ಮ,‌ ಮತ, ಪಂಥ ಬೇಧವಿಲ್ಲದೆ ನಮ್ಮ ಹಿರಿಯರು ತ್ಯಾಗ, ಸಮರ್ಪಣೆಯಿಂದ ಒಂದಾಗಿ ಹೋರಾಡಿದ ಪರಿಣಾಮವಾಗಿ ಕರ್ನಾಟಕ ಒಂದು ರಾಜ್ಯವಾಗಿದೆ. ಇದನ್ನು ಒಡೆಯುವ ಮಾತನ್ನು ಯಾರೇ, ಯಾವ ಉದ್ದೇಶಕ್ಕೇ ಆಡಿದರೂ ಖಂಡಿಸುತ್ತೇನೆ. ಒಡಕು ಮಾತುಗಳು ಯಾವ ಮೂಲೆಯಿಂದ ಬಂದರೂ ತಪ್ಪು” ಎಂದಿದ್ದಾರೆ.

“ಕರ್ನಾಟಕದ ಒಗ್ಗಟ್ಟಿರುವುದೇ ಕನ್ನಡತನದಲ್ಲಿ, ಇಂದು ಅಖಂಡ ಕರ್ನಾಟಕವನ್ನ ಜಾತಿಯ ಹೆಸರಲ್ಲಿ ಒಡೆಯುವ ಸಂಚು ರೂಪುಗೊಳ್ತಿದೆ, ಹಳೆ ಮೈಸೂರು-ಉತ್ತರ ಕರ್ನಾಟಕ, ಲಿಂಗಾಯತ-ಒಕ್ಕಲಿಗ ಹೀಗೆ ವಾದಗಳು ಹುಟ್ಟಿಕೊಳ್ತಿವೆ. ಇವುಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಬೇಕು. ನೆನಪಿರಲಿ ಒಂದೇ ಒಂದೇ #ಕನ್ನಡವೊಂದೇ #ಕರ್ನಾಟಕವೊಂದೇ” ಎಂದು ಸಚಿನ್ ಗ್ಯಾಂಗರ್ ಟ್ವೀಟ್ ಮಾಡಿದ್ದಾರೆ.

2025ಕ್ಕೆ ಲೋಕಸಭೆಯ ಸದಸ್ಯರ ಸಂಖ್ಯೆ ಹೊಸ ಜನಗಣತಿಯ ಪ್ರಕಾರ ಆದಲ್ಲಿ ಕರ್ನಾಟಕಕ್ಕೆ ಈಗಿರುವ ಲೋಕಸಭೆ ಸದಸ್ಯರ ಸಂಖ್ಯೆ ಐದರಷ್ಟು ಕುಸಿಯಲಿದೆ. ಇಂತಹ ಹೊತ್ತಲ್ಲಿ ಕರ್ನಾಟಕದ ದನಿ ಉಳಿಸಿಕೊಳ್ಳಬೇಕು ಅನ್ನುವ ಆಸೆಯಿರುವವರು ಯಾವ ಕಾರಣಕ್ಕೂ ರಾಜ್ಯ ವಿಭಜನೆ ಸಮರ್ಥಿಸಬಾರದು ಎಂದು ವಸಂತ ಶೆಟ್ಟಿಯವರು ಒತ್ತಾಯಿಸಿದ್ದಾರೆ.

“ದೇಶವನ್ನು ಧರ್ಮದ ಹೆಸರಿನಲ್ಲಿ ಮಾನಸಿಕವಾಗಿ ಒಡೆದಿದ್ದಾಯ್ತು. ಈಗ ಜಾತಿಗಳ ಹೆಸರಲ್ಲಿ ರಾಜ್ಯ ಒಡೆಯುವ ಹುನ್ನಾರ. ಇದು ಯಾರ ಚಿತಾವಣೆ, ಈ ಕುತಂತ್ರಗಳೆಲ್ಲ ಯಾವ ಗರಡಿಯಿಂದ ಎದ್ದು ಬರುತ್ತವೆ ಎಂಬುದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ಕನ್ನಡಿಗರು ದಡ್ಡರಲ್ಲ. ಹಿರಿಯರು ಕಟ್ಟಿದ ನಾಡಿದು, ಯಾರದೋ ಕುಯುಕ್ತಿಗಳಿಗೆ ಒಡೆಯಲು ಬಿಡೆವು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ಎಸ್.ಸಿ ತಿಳಿಸಿದ್ದಾರೆ.

ಇನ್ನು ಅಜಯ್ ರಾಜ್‌ ಎನ್ನುವವರು ಪ್ರತ್ಯೇಕ ರಾಜ್ಯದ ಪರ ಟ್ವೀಟ್ ಮಾಡಿದ್ದಾರೆ. “ಆಡಳಿತತ್ಮಕ ದೃಷ್ಟಿಯಿಂದ ಹೊಸ ರಾಜ್ಯ ಉದಾಯಿಸಿದರೆ ಒಳ್ಳೇದು ಕಣ್ರಪ್ಪ. ಅಭಿವೃದ್ಧಿಯೂ ಆಗ್ತದೆ ಹಾಗೂ ಜನ ಪ್ರತಿನಿಧಿಗಳಿಂದ ಉತ್ತರದಾಯಿತ್ವವೂ ಸಿಗುತ್ತೆ. ನಾವು ಭಾವನಾತ್ಮಕವಾಗಿ ಯೋಚಿಸಿದಷ್ಟು ನಮಗೆ ನಷ್ಟ ಕಣ್ರಪ್ಪ. 14 ಜಿಲ್ಲೆಗಳನ್ನೊಳಗೊಂಡ ಕೇರಳ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಕಣ್ರಪ್ಪ. #ಮೈಸೂರು_ರಾಜ್ಯ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶ್ರುತಿ ಎಚ್.ಎಂ ರವರು “ಒಡೆದು ಆಳುವುದರಿಂದ ಅದ್ಯಾವ ರೀತಿ ಅಭಿವೃದ್ಧಿ ಆಗುತ್ತೆ ಸ್ವಲ್ಪ ವಿವರಿಸಿ. ಅಖಂಡವಾಗಿದ್ದ ತೆಲುಗು ರಾಜ್ಯ ಆಂಧ್ರ ತೆಲಂಗಾಣಗಳಾಗಿ ಒಡೆದ ಮೇಲೆ ಯಾವ ರೀತಿ ಅಭಿವೃದ್ಧಿ ಆಗಿದೆ ಹೇಳಿ. #ಕರ್ನಾಟಕವೊಂದೇ” ಎಂದಿದ್ದಾರೆ. ಅಲ್ಲದೆ ಮೈಸೂರು ಕೇವಲ ಒಕ್ಕಲಿಗರ ಸ್ವತ್ತಲ್ಲ, ಉತ್ತರದ ಜಿಲ್ಲೆಗಳು ಲಿಂಗಾಯತರ ಸ್ವತ್ತಲ್ಲ. ಇಂತಹ ಎಷ್ಟೇ ಮನೆಮುರುಕರು ಹಾರಾಡಿದರೂ, ಎಂದಿಗೂ #ಕರ್ನಾಟಕವೊಂದೆ #KarnatakaVonde ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ, ಮುಂದೆ ಕೂಡ ಈ ಒಗ್ಗಟ್ಟು ಬೇಕೇ ಬೇಕು. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರಾಗಿರಬೇಕು. #ಕರ್ನಾಟಕವೊಂದೇ ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ರಾಜ್ಯ ಒಡೆಯುವ ವಿಷಯ ಯಾರೇ ತಂದರೂ ಅವರನ್ನ ಗಟ್ಟಿಯಾಗಿ ವಿರೋಧ ಮಾಡಿ. ಅದು ಸಂಘಿಗಳೇ ಆಗಿರಲಿ, ಕಾಂಗ್ರೆಸ್‌ನವರೇ ಆಗಿರಲಿ, ಜೆಡಿಎಸ್‌ನವರೇ ಆಗಿರಲಿ, ಒಕ್ಕಲಿಗರೇ ಆಗಿರಲಿ, ಲಿಂಗಾಯತರೇ ಆಗಿರಲಿ, ಅಹಿಂದದವರೇ ಆಗಿರಲಿ, ತುಳುವರೇ ಆಗಿರಲಿ. ಯಾರೇ ಕನ್ನಡ ನಾಡಿನ ಒಗ್ಗಟ್ಟನ್ನು ವಿರೋಧ ಮಾಡಿದರೆ ಅಂತವರನ್ನೆಲ್ಲ ವಿರೋಧ ಮಾಡಿ. #ಕರ್ನಾಟಕವೊಂದೇ ಎಂದು ಗಣೇಶ್ ಚೇತನ್‌ರವರು ಕರೆ ನೀಡಿದ್ದಾರೆ.

ಕೀಲಾರ ನಾಗೇಗೌಡ ಶಿವಲಿಂಗಯ್ಯನವರು ಪ್ರತಿಕ್ರಿಯಿಸಿ “ಕಾವಿ ಬಟ್ಟೆ ತೊಟ್ಟವರಿಗೆ ಸೋಷಿಯಲ್ ಸೈನ್ಸ್ ಗೊತ್ತಿರಲ್ಲ, ಅಧ್ಯಾತ್ಮ ಗೊತ್ತಿದಿಯ ಅಂದರೆ ಬ್ರಾಹ್ಮಣರ ಅಧ್ಯಾತ್ಮನ ನಮ್ಮೆಲ್ಲರ ಅಧ್ಯಾತ್ಮ ಅಂದುಕೊಂಡು ಅವರುಗಳು ಮಂಗ ಆಗುವುದಲ್ಲದೇ ನಮ್ಮನ್ನು ಮಂಗ ಮಾಡುತ್ತಾರೆ. ಈಗಿರುವ 3A ಮೀಸಲಾತಿ ಏನಿದೆ ಅಷ್ಟು ಸಾಕು ಅಂತ ನನ್ನ ಅಭಿಪ್ರಾಯ” ಎಂದಿದ್ದಾರೆ.

“ಮೊದಲು ಚುಂಚನಗಿರಿ ಮಠದ ಶಾಲೆ-ಕಾಲೇಜು-ಆಸ್ಪತ್ರೆಗಳಲ್ಲಿ ಬಡ ಒಕ್ಕಲಿಗರಿಗೆ ಉಚಿತ ಶಿಕ್ಷಣ-ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಿ, ಮಠದ ಸಮುದಾಯ ಭವನಗಳು ಉಚಿತವಾಗಿ ಸಿಗುವಂತಾಗಲಿ.‌ ಮೊದಲು ಮಠವು ಬಡ ಒಕ್ಕಲಿಗರಿಗೆ ಬದುಕಲು ವ್ಯವಸ್ಥೆ ಗಳನ್ನು ಕಲ್ಪಿಸಿಕೊಡಲಿ, ಅದು ಬಿಟ್ಟು ಜಾತಿಯ ಹೆಸರಲ್ಲಿ ಮಠವೇ ಎಲ್ಲಾ ಕಡೆ ಜಾಗ, ಹಣ, ಅನುದಾನ ಪಡೆದು ಬೆಳೆಯುವುದು ಆಗಿದೆ” ಎಂದು ರಾಜೇಂದ್ರ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...