Homeಕರ್ನಾಟಕಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: 'ಕರ್ನಾಟಕವೊಂದೇ' ಅಭಿಯಾನಕ್ಕೆ ವ್ಯಾಪಕ ಬೆಂಬಲ

ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು.

- Advertisement -
- Advertisement -

ಒಕ್ಕಲಿಗ ಸಮುದಾಯಕ್ಕೆ ಸೂಕ್ತ ಮೀಸಲಾತಿ ನೀಡದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂಬ ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ ಎತ್ತಿರುವ ಕನ್ನಡಿಗರು ನಡೆಸುತ್ತಿರುವ ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮೊನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ರಾಜ್ಯಕ್ಕೆ ಬರುತ್ತಿರುವ ಆದಾಯದಲ್ಲಿ ಒಕ್ಕಲಿಗರ ಪಾಲು ಶೇ.60 ರಷ್ಟಿದೆ. ಹಲವರು ಸರ್ಕಾರಕ್ಕೆ ಭೂದಾನ ಮಾಡಿದ್ದಾರೆ. ಆದರೆ ಒಕ್ಕಲಿಗರಿಗೆ ಕೇವಲ 4% ಮೀಸಲಾತಿ ಸಿಗುತ್ತಿದೆ. ಮೀಸಲಾತಿ ಹೆಚ್ಚಳ ಮಾಡಿದಿದ್ದರೆ ಹಳೇ ಮೈಸೂರು ಪ್ರಾಂತ್ಯದ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡಬೇಕಾಗುತ್ತದೆ” ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಇದಕ್ಕೆ ರಾಜ್ಯದ ಜಾತಿ, ಧರ್ಮ ಲೆಕ್ಕಿಸದೇ ಸಾವಿರಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು, ಮುಂದು, ಎಂದೆಂದೂ, ಕರ್ನಾಟಕವೊಂದೇ. ಒಡಕು, ತರಲಿದೆ ಕೆಡಕು ಎಂದು ಅಭಿಪ್ರಾಯಪಟ್ಟಿರುವ ಕನ್ನಡಿಗರು #ಕರ್ನಾಟಕವೊಂದೇ ಹ್ಯಾಸ್‌ಟ್ಯಾಗ್ ಬಳಸಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕೆ ಮತ್ತಷ್ಟು ಸಾವಿರ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಪ್ರತಿಕ್ರಿಯಿಸಿ “ಏಕೀಕರಣಕ್ಕಾಗಿ ಜಾತಿ, ಧರ್ಮ,‌ ಮತ, ಪಂಥ ಬೇಧವಿಲ್ಲದೆ ನಮ್ಮ ಹಿರಿಯರು ತ್ಯಾಗ, ಸಮರ್ಪಣೆಯಿಂದ ಒಂದಾಗಿ ಹೋರಾಡಿದ ಪರಿಣಾಮವಾಗಿ ಕರ್ನಾಟಕ ಒಂದು ರಾಜ್ಯವಾಗಿದೆ. ಇದನ್ನು ಒಡೆಯುವ ಮಾತನ್ನು ಯಾರೇ, ಯಾವ ಉದ್ದೇಶಕ್ಕೇ ಆಡಿದರೂ ಖಂಡಿಸುತ್ತೇನೆ. ಒಡಕು ಮಾತುಗಳು ಯಾವ ಮೂಲೆಯಿಂದ ಬಂದರೂ ತಪ್ಪು” ಎಂದಿದ್ದಾರೆ.

“ಕರ್ನಾಟಕದ ಒಗ್ಗಟ್ಟಿರುವುದೇ ಕನ್ನಡತನದಲ್ಲಿ, ಇಂದು ಅಖಂಡ ಕರ್ನಾಟಕವನ್ನ ಜಾತಿಯ ಹೆಸರಲ್ಲಿ ಒಡೆಯುವ ಸಂಚು ರೂಪುಗೊಳ್ತಿದೆ, ಹಳೆ ಮೈಸೂರು-ಉತ್ತರ ಕರ್ನಾಟಕ, ಲಿಂಗಾಯತ-ಒಕ್ಕಲಿಗ ಹೀಗೆ ವಾದಗಳು ಹುಟ್ಟಿಕೊಳ್ತಿವೆ. ಇವುಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಬೇಕು. ನೆನಪಿರಲಿ ಒಂದೇ ಒಂದೇ #ಕನ್ನಡವೊಂದೇ #ಕರ್ನಾಟಕವೊಂದೇ” ಎಂದು ಸಚಿನ್ ಗ್ಯಾಂಗರ್ ಟ್ವೀಟ್ ಮಾಡಿದ್ದಾರೆ.

2025ಕ್ಕೆ ಲೋಕಸಭೆಯ ಸದಸ್ಯರ ಸಂಖ್ಯೆ ಹೊಸ ಜನಗಣತಿಯ ಪ್ರಕಾರ ಆದಲ್ಲಿ ಕರ್ನಾಟಕಕ್ಕೆ ಈಗಿರುವ ಲೋಕಸಭೆ ಸದಸ್ಯರ ಸಂಖ್ಯೆ ಐದರಷ್ಟು ಕುಸಿಯಲಿದೆ. ಇಂತಹ ಹೊತ್ತಲ್ಲಿ ಕರ್ನಾಟಕದ ದನಿ ಉಳಿಸಿಕೊಳ್ಳಬೇಕು ಅನ್ನುವ ಆಸೆಯಿರುವವರು ಯಾವ ಕಾರಣಕ್ಕೂ ರಾಜ್ಯ ವಿಭಜನೆ ಸಮರ್ಥಿಸಬಾರದು ಎಂದು ವಸಂತ ಶೆಟ್ಟಿಯವರು ಒತ್ತಾಯಿಸಿದ್ದಾರೆ.

“ದೇಶವನ್ನು ಧರ್ಮದ ಹೆಸರಿನಲ್ಲಿ ಮಾನಸಿಕವಾಗಿ ಒಡೆದಿದ್ದಾಯ್ತು. ಈಗ ಜಾತಿಗಳ ಹೆಸರಲ್ಲಿ ರಾಜ್ಯ ಒಡೆಯುವ ಹುನ್ನಾರ. ಇದು ಯಾರ ಚಿತಾವಣೆ, ಈ ಕುತಂತ್ರಗಳೆಲ್ಲ ಯಾವ ಗರಡಿಯಿಂದ ಎದ್ದು ಬರುತ್ತವೆ ಎಂಬುದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ಕನ್ನಡಿಗರು ದಡ್ಡರಲ್ಲ. ಹಿರಿಯರು ಕಟ್ಟಿದ ನಾಡಿದು, ಯಾರದೋ ಕುಯುಕ್ತಿಗಳಿಗೆ ಒಡೆಯಲು ಬಿಡೆವು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ಎಸ್.ಸಿ ತಿಳಿಸಿದ್ದಾರೆ.

ಇನ್ನು ಅಜಯ್ ರಾಜ್‌ ಎನ್ನುವವರು ಪ್ರತ್ಯೇಕ ರಾಜ್ಯದ ಪರ ಟ್ವೀಟ್ ಮಾಡಿದ್ದಾರೆ. “ಆಡಳಿತತ್ಮಕ ದೃಷ್ಟಿಯಿಂದ ಹೊಸ ರಾಜ್ಯ ಉದಾಯಿಸಿದರೆ ಒಳ್ಳೇದು ಕಣ್ರಪ್ಪ. ಅಭಿವೃದ್ಧಿಯೂ ಆಗ್ತದೆ ಹಾಗೂ ಜನ ಪ್ರತಿನಿಧಿಗಳಿಂದ ಉತ್ತರದಾಯಿತ್ವವೂ ಸಿಗುತ್ತೆ. ನಾವು ಭಾವನಾತ್ಮಕವಾಗಿ ಯೋಚಿಸಿದಷ್ಟು ನಮಗೆ ನಷ್ಟ ಕಣ್ರಪ್ಪ. 14 ಜಿಲ್ಲೆಗಳನ್ನೊಳಗೊಂಡ ಕೇರಳ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಕಣ್ರಪ್ಪ. #ಮೈಸೂರು_ರಾಜ್ಯ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶ್ರುತಿ ಎಚ್.ಎಂ ರವರು “ಒಡೆದು ಆಳುವುದರಿಂದ ಅದ್ಯಾವ ರೀತಿ ಅಭಿವೃದ್ಧಿ ಆಗುತ್ತೆ ಸ್ವಲ್ಪ ವಿವರಿಸಿ. ಅಖಂಡವಾಗಿದ್ದ ತೆಲುಗು ರಾಜ್ಯ ಆಂಧ್ರ ತೆಲಂಗಾಣಗಳಾಗಿ ಒಡೆದ ಮೇಲೆ ಯಾವ ರೀತಿ ಅಭಿವೃದ್ಧಿ ಆಗಿದೆ ಹೇಳಿ. #ಕರ್ನಾಟಕವೊಂದೇ” ಎಂದಿದ್ದಾರೆ. ಅಲ್ಲದೆ ಮೈಸೂರು ಕೇವಲ ಒಕ್ಕಲಿಗರ ಸ್ವತ್ತಲ್ಲ, ಉತ್ತರದ ಜಿಲ್ಲೆಗಳು ಲಿಂಗಾಯತರ ಸ್ವತ್ತಲ್ಲ. ಇಂತಹ ಎಷ್ಟೇ ಮನೆಮುರುಕರು ಹಾರಾಡಿದರೂ, ಎಂದಿಗೂ #ಕರ್ನಾಟಕವೊಂದೆ #KarnatakaVonde ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ, ಮುಂದೆ ಕೂಡ ಈ ಒಗ್ಗಟ್ಟು ಬೇಕೇ ಬೇಕು. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರಾಗಿರಬೇಕು. #ಕರ್ನಾಟಕವೊಂದೇ ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ರಾಜ್ಯ ಒಡೆಯುವ ವಿಷಯ ಯಾರೇ ತಂದರೂ ಅವರನ್ನ ಗಟ್ಟಿಯಾಗಿ ವಿರೋಧ ಮಾಡಿ. ಅದು ಸಂಘಿಗಳೇ ಆಗಿರಲಿ, ಕಾಂಗ್ರೆಸ್‌ನವರೇ ಆಗಿರಲಿ, ಜೆಡಿಎಸ್‌ನವರೇ ಆಗಿರಲಿ, ಒಕ್ಕಲಿಗರೇ ಆಗಿರಲಿ, ಲಿಂಗಾಯತರೇ ಆಗಿರಲಿ, ಅಹಿಂದದವರೇ ಆಗಿರಲಿ, ತುಳುವರೇ ಆಗಿರಲಿ. ಯಾರೇ ಕನ್ನಡ ನಾಡಿನ ಒಗ್ಗಟ್ಟನ್ನು ವಿರೋಧ ಮಾಡಿದರೆ ಅಂತವರನ್ನೆಲ್ಲ ವಿರೋಧ ಮಾಡಿ. #ಕರ್ನಾಟಕವೊಂದೇ ಎಂದು ಗಣೇಶ್ ಚೇತನ್‌ರವರು ಕರೆ ನೀಡಿದ್ದಾರೆ.

ಕೀಲಾರ ನಾಗೇಗೌಡ ಶಿವಲಿಂಗಯ್ಯನವರು ಪ್ರತಿಕ್ರಿಯಿಸಿ “ಕಾವಿ ಬಟ್ಟೆ ತೊಟ್ಟವರಿಗೆ ಸೋಷಿಯಲ್ ಸೈನ್ಸ್ ಗೊತ್ತಿರಲ್ಲ, ಅಧ್ಯಾತ್ಮ ಗೊತ್ತಿದಿಯ ಅಂದರೆ ಬ್ರಾಹ್ಮಣರ ಅಧ್ಯಾತ್ಮನ ನಮ್ಮೆಲ್ಲರ ಅಧ್ಯಾತ್ಮ ಅಂದುಕೊಂಡು ಅವರುಗಳು ಮಂಗ ಆಗುವುದಲ್ಲದೇ ನಮ್ಮನ್ನು ಮಂಗ ಮಾಡುತ್ತಾರೆ. ಈಗಿರುವ 3A ಮೀಸಲಾತಿ ಏನಿದೆ ಅಷ್ಟು ಸಾಕು ಅಂತ ನನ್ನ ಅಭಿಪ್ರಾಯ” ಎಂದಿದ್ದಾರೆ.

“ಮೊದಲು ಚುಂಚನಗಿರಿ ಮಠದ ಶಾಲೆ-ಕಾಲೇಜು-ಆಸ್ಪತ್ರೆಗಳಲ್ಲಿ ಬಡ ಒಕ್ಕಲಿಗರಿಗೆ ಉಚಿತ ಶಿಕ್ಷಣ-ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಿ, ಮಠದ ಸಮುದಾಯ ಭವನಗಳು ಉಚಿತವಾಗಿ ಸಿಗುವಂತಾಗಲಿ.‌ ಮೊದಲು ಮಠವು ಬಡ ಒಕ್ಕಲಿಗರಿಗೆ ಬದುಕಲು ವ್ಯವಸ್ಥೆ ಗಳನ್ನು ಕಲ್ಪಿಸಿಕೊಡಲಿ, ಅದು ಬಿಟ್ಟು ಜಾತಿಯ ಹೆಸರಲ್ಲಿ ಮಠವೇ ಎಲ್ಲಾ ಕಡೆ ಜಾಗ, ಹಣ, ಅನುದಾನ ಪಡೆದು ಬೆಳೆಯುವುದು ಆಗಿದೆ” ಎಂದು ರಾಜೇಂದ್ರ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...