Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...