Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...