Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....