Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...