Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...