Homeಮುಖಪುಟಸೆ.19 ಹಾವು ಕಡಿತದ ಬಗೆಗಿನ ಜಾಗೃತಿ ದಿನ: ನೀವು ತಿಳಿದುಕೊಳ್ಳಬೇಕಿರುವ ವಿಷಯಗಳು

ಸೆ.19 ಹಾವು ಕಡಿತದ ಬಗೆಗಿನ ಜಾಗೃತಿ ದಿನ: ನೀವು ತಿಳಿದುಕೊಳ್ಳಬೇಕಿರುವ ವಿಷಯಗಳು

- Advertisement -
- Advertisement -

ಸೆಪ್ಟೆಂಬರ್ 19 ವಿಶ್ವ ಹಾವು ಕಡಿತದ ಬಗೆಗಿನ ಜಾಗೃತಿ ದಿನ (International Snake bite awareness day) ಎಂದು ಆಚರಿಸಲಾಗುತ್ತದೆ. ಹಾವು ಕಡಿತದ ಬಗ್ಗೆ ಜಾಗೃತಿ ಮೂಡಿಸಲು ಹಲವು ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಿವೆ. 2018ರಲ್ಲಿ ಮೊದಲ ಅಂತಾರಾಷ್ಟ್ರೀಯ ಸ್ನೇಕ್‌ಬೈಟ್ ಜಾಗೃತಿ ದಿನವನ್ನು  ಆಚರಿಸಲಾಯಿತು.

ಇತ್ತೀಚಿನ ಒಂದು ಅಧ್ಯಯನ ಪ್ರಕಾರ ನಮ್ಮ ದೇಶದಲ್ಲಿ ಪ್ರತಿವರ್ಷ ಹಾವಿನ ಕಡಿತದಿಂದ ಸು‌‌ಮಾರು 58 ಸಾವಿರ ಜನ ಸಾವನ್ನಪ್ಪುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸಾವನ್ನಪ್ಪುತ್ತಿದ್ದಾರೆ ಎಂದರೆ ಹಾವುಕಡಿತದ ಬಗ್ಗೆ ನಾವು ಗಂಭೀರವಾಗಿ ವಿಚಾರ ಮಾಡಬೇಕಿದೆ. ಹಾವಿನ ಕಡಿತಕ್ಕೆ ಗ್ರಾಮೀಣ ಪ್ರದೇಶದ ಕೃಷಿ ವಲಯದ ಬಡ ಜನರೇ ಹೆಚ್ಚು ಬಲಿಯಾಗುತ್ತಿರುವುದು ಗಮನಿಸಬೇಕಾದ ಅಂಶ.

ಭಾರತದಲ್ಲಿ 300 ವಿಧದ ಹಾವುಗಳಿದ್ದು, ಅವುಗಳೆಲ್ಲವೂ ಅಪಾಯಕಾರಿಯಲ್ಲ ಎನ್ನಲಾಗಿದೆ. ದೇಶದಲ್ಲಿ ಹಾವು ಕಡಿತದಿಂದ ಮೃತಪಡುವವರಲ್ಲಿ 90% ಗೂ ಅಧಿಕ ಜನರು, ನಮ್ಮಲ್ಲಿನ ಕೇವಲ 4 ಜಾತಿಯ ಹಾವುಗಳ ಕಡಿತದಿಂದ ಮಾತ್ರ ಸಾವನ್ನಪ್ಪುತ್ತಾರೆ. ಹೀಗಾಗಿ ಆ ನಾಲ್ಕು ವಿಷಕಾರಿ ಹಾವುಗಳನ್ನು ಭಾರತದ ದೊಡ್ಡ ವಿಷಕಾರಿ ಹಾವುಗಳು (Big four venomous Snake of India) ಎಂದು ವಿಭಾಗಿಸಲಾಗಿದೆ.

ಇದನ್ನೂ ಓದಿ:  ಇಂದು ವಿಶ್ವ ಪ್ರಥಮ ಚಿಕಿತ್ಸಾ ದಿನ: ಜೀವ ರಕ್ಷಣೆ ತಿಳಿದಿರೋಣ

೧. ನಾಗರಹಾವು (Spectical cobra)
 ೨. ಕೊಳಕು ಮಂಡಲ(Russell viper)
 ೩. ಕಟ್ಟುಹಾವು(Krait)
 ೪. ಉರಿ ಮಂಡಲ(Saw scaled viper)

ಈ ಹಾವುಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಮತ್ತು ಸೂಕ್ತ ಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಜೀವ ಹಾನಿಯನ್ನು ತಪ್ಪಿಸಬಹುದಾಗಿದೆ ಎಂದು ನಾಲ್ಕು ವಿಷಕಾರಿ ಹಾವುಗಳ ಬಗ್ಗೆ ಮದ್ರಾಸ್ ಕ್ರೋಕಡೈಲ್ ಬ್ಯಾಂಕ್ ಟ್ರಸ್ಟ್ ವಿಡಿಯೋವೊಂದನ್ನು ಪ್ರಸಾರ ಮಾಡಿದೆ.

May be an image of text

ಈ ಹಾವುಗಳು ಗ್ರಾಮೀಣ, ನಗರ ಪ್ರದೇಶದ ಜನವಸತಿ ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತವೆ ಹಾಗೂ
ಇವುಗಳ ಕಡಿತದಿಂದಲೇ ಗರಿಷ್ಠ ಸಂಖ್ಯೆಯ ಜನ ಸಾವನಪ್ಪುತ್ತಿದ್ದಾರೆ. ಆದ ಕಾರಣ ನಾವು ಈ ನಾಲ್ಕು ಹಾವುಗಳ ಚಲನ ವಲನ, ಆಹಾರ ಪದ್ದತಿ ಇತ್ಯಾದಿ ವಿಷಯಗಳ ಬಗ್ಗೆ, ಮತ್ತೆ ಅವುಗಳ ಕಡಿತದಿಂದ ಪಾರಾಗಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿತರೆ ಹಾವುಗಳ ಕಡಿತದಿಂದ ಸುಲಭವಾಗಿ ಪಾರಾಗಬಹುದು ಎಂದು ಉರಗ ಅಧ್ಯಯನ ಕೇಂದ್ರ ಮಾಹಿತಿ ನೀಡಿದೆ.

ದೇಶದ ಪ್ರಮುಖ ಉರಗ ಅಧ್ಯಯನ ಕೇಂದ್ರಗಳಲ್ಲಿ ಒಂದಾದ ಚೆನೈನ ಕ್ರೊಕಡೈಲ್ ಪಾರ್ಕ್‌ನ ಪರಿಣಿತ ಹಾವುಗಳ ತಜ್ಞರು ನಿರ್ಮಿಸಿರುವ ಹಾವುಗಳ ಕಡಿತ ಬಗೆಗಿನ ಜಾಗೃತಿಯ ಸಾಕ್ಷ್ಯಚಿತ್ರದ ಕನ್ನಡ ಅವತರಣಿಕೆ ತುಂಬಾ ಉಪಯುಕ್ತವಾಗಿದೆ. ವಿಡಿಯೊ ಲಿಂಕ್ ಇಲ್ಲಿದೆ.

ಮಾಹಿತಿ: ಸಂಜಯ್ ಹೊಯ್ಸಳ, ಅರಣ್ಯ ರಕ್ಷಕ


ಇದನ್ನೂ ಓದಿ: ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...