Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ  ದೆಹಲಿ, ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.

ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ.

ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ ಎಂದು ಆರೋಪಿಸಿದ್ದಾನೆ.

4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಇಂದು ನಡೆದ ಯಹೋವನ ಸಾಕ್ಷಿಗಳ ಧಾರ್ಮಿಕ ಪ್ರಾರ್ಥನೆ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಪ್ರಾರ್ಥನೆಯ ಮಧ್ಯೆ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಟಿಫಿನ್ ಬಾಕ್ಸ್ ನಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

45 ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 18 ಜನರು ಐಸಿಯುನಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಐವರ ಸ್ಥಿತಿ ಚಿಂತಾಜನಕವಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಫೋಟವನ್ನು ದುರದೃಷ್ಟಕರ ಎಂದು ಹೇಳಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ಸರಣಿ ಸ್ಪೋಟ ಘಟನೆ ಗಂಭೀರವಾದುದು; ಸಿಎಂ ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...