Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ  ದೆಹಲಿ, ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.

ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ.

ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ ಎಂದು ಆರೋಪಿಸಿದ್ದಾನೆ.

4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಇಂದು ನಡೆದ ಯಹೋವನ ಸಾಕ್ಷಿಗಳ ಧಾರ್ಮಿಕ ಪ್ರಾರ್ಥನೆ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಪ್ರಾರ್ಥನೆಯ ಮಧ್ಯೆ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಟಿಫಿನ್ ಬಾಕ್ಸ್ ನಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

45 ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 18 ಜನರು ಐಸಿಯುನಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಐವರ ಸ್ಥಿತಿ ಚಿಂತಾಜನಕವಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಫೋಟವನ್ನು ದುರದೃಷ್ಟಕರ ಎಂದು ಹೇಳಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ಸರಣಿ ಸ್ಪೋಟ ಘಟನೆ ಗಂಭೀರವಾದುದು; ಸಿಎಂ ಪಿಣರಾಯ್‌ ವಿಜಯನ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...